ಚಿತ್ರದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಆಯೋಜಿಸಿದ್ದ ಮೆರವಣಿಗೆಯಲ್ಲಿ ಗಾಂಧಿ ವೃತ್ತದ ಬಳಿ ಕೆಲ ಮುಸ್ಲಿಂ ಯುವಕರು ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿ ಬಾವುಟ ಪ್ರದರ್ಶಿಸಿದ್ದಾರೆ. ಈ ಕುರಿತ ವಿಡಿಯೋಗಳು ಜಾಲತಾಣದಲ್ಲಿ ಹರಿದಾಡಿದ ತಕ್ಷಣ ಜಾಗೃತರಾದ ನಗರ ಠಾಣೆ ಪೊಲೀಸರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಂದ 2 ಪ್ಯಾಲೆಸ್ತೀನ್ ಧ್ವಜಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.

ಚಿತ್ರದುರ್ಗ/ಕೋಲಾರ(ಸೆ.17): ಕೊಪ್ಪಳದ ಗಂಗಾವತಿ ಮತ್ತು ಚಿಕ್ಕಮಗಳೂರಿನ ಬಳಿಕ ಇದೀಗ ಚಿತ್ರದುರ್ಗ ಹಾಗೂ ಕೋಲಾರದಲ್ಲಿ ಈದ್ ಮಿಲಾದ್ ಹಬ್ಬದ ಸಂದರ್ಭದಲ್ಲೇ ಪ್ಯಾಲೇಸ್ತೀನ್ ಪರ ಘೋಷಣೆ, ಬ್ಯಾನರ್‌ ಹಾಗೂ ಧ್ವಜ ಪ್ರದರ್ಶನದಂಥ ಪ್ರಕರಣಗಳು ಬೆಳಕಿಗೆ ಬಂದಿವೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿತ್ರದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಸೋಮವಾರ ಆಯೋಜಿಸಿದ್ದ ಮೆರವಣಿಗೆಯಲ್ಲಿ ಗಾಂಧಿ ವೃತ್ತದ ಬಳಿ ಕೆಲ ಮುಸ್ಲಿಂ ಯುವಕರು ಪ್ಯಾಲೆಸ್ತೀನ್ ಪರ ಘೋಷಣೆ ಕೂಗಿ ಬಾವುಟ ಪ್ರದರ್ಶಿಸಿದ್ದಾರೆ. ಈ ಕುರಿತ ವಿಡಿಯೋಗಳು ಜಾಲತಾಣದಲ್ಲಿ ಹರಿದಾಡಿದ ತಕ್ಷಣ ಜಾಗೃತರಾದ ನಗರ ಠಾಣೆ ಪೊಲೀಸರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವರಿಂದ 2 ಪ್ಯಾಲೆಸ್ತೀನ್ ಧ್ವಜಗಳನ್ನು ವಶಕ್ಕೆ ಪಡೆದು ಎಚ್ಚರಿಕೆ ನೀಡಿದ್ದಾರೆ.

ಕೋಲಾರ ಭಾಗಕ್ಕೆ ಸಿಎಂ ಸ್ಥಾನ ನೀಡಲಿ: ಶಾಸಕ ಕೊತ್ತೂರು ಮಂಜುನಾಥ್

ಈ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಎಸ್ಪಿ ರಂಜಿತ್ ಕುಮಾರ್‌ ಬಂಡಾರು ತಿಳಿಸಿದ್ದಾರೆ. ಮತ್ತೊಂದು ಘಟನೆಯಲ್ಲಿ ಕೋಲಾರ ನಗರದ ಅಂಜುಮನ್ ಸಂಸ್ಥೆ ಎದುರು ಹಾಕಲಾಗಿದ್ದ 'ಫ್ರೀ ಪ್ಯಾಲೆಸ್ತೀನ್ ' ಎಂಬ ಒಕ್ಕಣೆಯಿರುವ ಬಾವುಟವನ್ನು ಗಮನಿಸಿ ನಗರ ಠಾಣೆ ಸಿಪಿಐ ಸದಾನಂದ ತೆರವುಗೊಳಿಸಿದರು. 

ಇದೇ ರೀತಿ ಕೊಪ್ಪಳದ ಗಂಗಾವತಿಯಲ್ಲೂ ಭಾನುವಾರ ಹಾಕಿದ್ದ ಬ್ಯಾನರ್ ಅನ್ನು ಹಿಂದೂ ಸಂಘನೆಗಳ ವಿರೋಧದ ಹಿನ್ನೆಲೆಯಲ್ಲಿ ತೆರವುಗೊಳಿಸಲಾಗಿದ್ದರೆ, ಚಿಕ್ಕಮಗಳೂರಲ್ಲಿ ಕೆಲ ಯುವಕರು ಪ್ಯಾಲೆಸ್ತೀನ್ ಧ್ವಜ ಹಾರಿಸಿದ್ದರು.