Asianet Suvarna News Asianet Suvarna News

ಕಲ್ಯಾಣ ಕರ್ನಾಟಕದ ಖಾಲಿ ಹುದ್ದೆ ಭರ್ತಿಗೆ ಕ್ರಮ​: ಸಚಿವ ಪ್ರಿಯಾಂಕ್ ಖರ್ಗೆ

ಹಿಂದಿನ ಬಿಜೆಪಿ ಸರ್ಕಾರವು ಕಲ್ಯಾಣ ಕರ್ನಾಟಕದ ಭಾಗದಲ್ಲಿ 371ಜೆ ಅಡಿ ಖಾಲಿ ಹುದ್ದೆಗಳ ಭರ್ತಿಗೆ ಸಮರ್ಪಕವಾದ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಖಾಲಿ ಹುದ್ದೆಗಳು, ಬಡ್ತಿ ನೀಡಬೇಕಾದ ಮತ್ತು ಬಡ್ತಿ ಬಳಿಕ ಖಾಲಿಯಾಗುವ ಹುದ್ದೆಗಳ ಸಂಖ್ಯೆಯ ಸಂಪೂರ್ಣವಾದ ವಿವರವನ್ನು ಸೋಮವಾರದೊಳಗೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

Procedure for filling up the vacant posts in kalyana karnataka says minister priyank kharge at bengaluru rav
Author
First Published Aug 18, 2023, 5:56 AM IST

ಬೆಂಗಳೂರು (ಆ.18): ಹಿಂದಿನ ಬಿಜೆಪಿ ಸರ್ಕಾರವು ಕಲ್ಯಾಣ ಕರ್ನಾಟಕದ ಭಾಗದಲ್ಲಿ 371ಜೆ ಅಡಿ ಖಾಲಿ ಹುದ್ದೆಗಳ ಭರ್ತಿಗೆ ಸಮರ್ಪಕವಾದ ಕ್ರಮ ಕೈಗೊಳ್ಳದಿರುವ ಹಿನ್ನೆಲೆಯಲ್ಲಿ ಖಾಲಿ ಹುದ್ದೆಗಳು, ಬಡ್ತಿ ನೀಡಬೇಕಾದ ಮತ್ತು ಬಡ್ತಿ ಬಳಿಕ ಖಾಲಿಯಾಗುವ ಹುದ್ದೆಗಳ ಸಂಖ್ಯೆಯ ಸಂಪೂರ್ಣವಾದ ವಿವರವನ್ನು ಸೋಮವಾರದೊಳಗೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ(Priyank kharge) ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು ಬಿಜೆಪಿ ಸರ್ಕಾರ(BJP Government)ವು ಕಲ್ಯಾಣ ಭಾಗದಲ್ಲಿ ಖಾಲಿ ಹುದ್ದೆಗಳ ಭರ್ತಿ ಮಾಡುವ ಸಂಬಂಧ ಸಚಿವ ಸಂಪುಟದ ಉಪಸಮಿತಿಯ ಏಳು ಸಭೆಗಳನ್ನು ನಡೆಸಿದೆ. ಆದರೆ, ಸಮರ್ಪಕವಾಗಿ ಹುದ್ದೆಗಳ ಭರ್ತಿ ಮಾಡಿಲ್ಲ. ಖಾಲಿ ಹುದ್ದೆಗಳಿಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳು ನೀಡಿದ ಮಾಹಿತಿಗಳಿಗೂ, ಯೋಜನಾ ಇಲಾಖೆ ನೀಡಿರುವ ಮಾಹಿತಿ ಸಾಕಷ್ಟುವ್ಯತ್ಯಾಸ ಇದೆ. ಈ ಹಿನ್ನೆಲೆಯಲ್ಲಿ ಖಾಲಿ ಹುದ್ದೆ, ಬಡ್ತಿ ಹುದ್ದೆಗಳ ಸರಿಯಾದ ಮಾಹಿತಿಗಳನ್ನು ಸೋಮವಾರದೊಳಗೆ ನೀಡುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

 

ಪದತ್ಯಾಗ: ಮುನಿಯಪ್ಪ ಹೇಳಿಕೆಗೆ ಪರಂ, ಪ್ರಿಯಾಂಕ್‌ ವಿರೋಧ

ಸಭೆಯಲ್ಲಿ ಇಲಾಖಾವಾರು ಖಾಲಿ ಹುದ್ದೆಗಳ ಕುರಿತು ಚರ್ಚಿಸಲಾಗಿದೆ. 371ಜೆ ಅಡಿ ನೇಮಕಾತಿ ಮಾಡಿಕೊಳ್ಳುವಾಗ ಹಣಕಾಸು ಇಲಾಖೆಯ ಅನುಮತಿ ಪಡೆಯಬೇಕಾದ ಅಗತ್ಯ ಇಲ್ಲ. ನೇರವಾಗಿಯೇ ನೇಮಕಾತಿಯನ್ನು ಮಾಡಿಕೊಳ್ಳಬಹುದು. ಇದು ನಿಯಮದಲ್ಲಿಯೇ ಇದೆ. ಆದರೆ, ಬಿಜೆಪಿ ಸರ್ಕಾರವು ಈ ನಿಯಮ ಬದಲಿಸಿದೆ. ಆರ್ಥಿಕ ಇಲಾಖೆಯ ಅನುಮತಿ ಪಡೆದುಕೊಳ್ಳಬೇಕು ಎಂದು ಮಾಡಿದೆ. ಅದನ್ನು ಈ ಮೊದಲಿನಂತೆ ನಿಯಮವನ್ನು ಮಾಡಲು ಸೂಚಿಸಲಾಗಿದೆ ಎಂದರು.

ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯಲ್ಲಿ ಸಾಕಷ್ಟುಅಕ್ರಮ ನಡೆದಿರುವುದು ಈಗ ಗೊತ್ತಾಗುತ್ತಿದೆ. ಅಕ್ರಮ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಅನುದಾನ ದುರುಪಯೋಗ, ಮಂಡಳಿಯಲ್ಲಿನ ಕಾಮಗಾರಿ ಸೇರಿದಂತೆ ಹಲವು ವಿಚಾರದಲ್ಲಿ ಅವ್ಯವಹಾರ ನಡೆದಿದೆ. ಈ ಎಲ್ಲದರ ಬಗ್ಗೆಯೂ ತನಿಖೆ ಕೈಗೊಳ್ಳಲಾಗಿದೆ. ತನಿಖೆ ನಡೆಸಿದರೂ ಅಕ್ರಮಗಳ ಅಳ ಹೆಚ್ಚಾಗುತ್ತಿದೆ. ತನಿಖೆಯ ಬಳಿಕ ಮುಂದಿನ ಕ್ರಮ ಜರುಗಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.

 

ಮಂಗಳೂರು: ಡಿಸಿ ಕಚೇರಿ ಮೆಟ್ಟಿಲಲ್ಲಿ ಕೂತ ಬಿಜೆಪಿ ಶಾಸಕರು: ಹಕ್ಕುಚ್ಯುತಿ ವಿರುದ್ದ ಧರಣಿ!

Follow Us:
Download App:
  • android
  • ios