Asianet Suvarna News Asianet Suvarna News

ಮೊದಲ ಬಾರಿ ಪೊಲೀಸ್‌ ಅಧಿಕಾರಿಗಳ ಬಂಧನ!

- ಪಿಎಸ್‌ಐ ಅಕ್ರಮ: ಡಿವೈಎಸ್ಪಿ, ಇನ್ಸ್‌ಪೆಕ್ಟರ್‌ ಸಿಐಡಿ ಬೋನಿಗೆ!

- ಕಿಂಗ್‌ಪಿನ್‌ಗಳಿಗೆ ‘ಗಿರಾಕಿ’ಗಳನ್ನು ಒದಗಿಸುತ್ತಿದ್ದ ಆರೋಪದಡಿ ಅರೆಸ್ಟ್‌

- ಲಿಂಗಸುಗೂರಿನ ವಿಜಯಕುಮಾರ್‌ ಸಾಲಿ, ಕಲಬುರಗಿಯ ಮೇತ್ರೆ ಸೆರೆ

- ಪ್ರಕರಣದಲ್ಲಿ ಈವರೆಗೆ 41 ಮಂದಿ ಬಂಧನ. ಆ ಪೈಕಿ 9 ಜನ ಪೊಲೀಸರು

PSI Recruitment Scam Police Officers arrested for the first time san
Author
Bengaluru, First Published May 6, 2022, 4:00 AM IST | Last Updated May 6, 2022, 4:00 AM IST

ಕಲಬುರಗಿ (ಮೇ. 6): ಮಹತ್ವದ ಬೆಳವಣಿಗೆಯೊಂದರಲ್ಲಿ ಪಿಎಸ್‌ಐ ಪರೀಕ್ಷೆ ಅಕ್ರಮ ಪ್ರಕ​ರ​ಣ​ದಲ್ಲಿ(PSI Recruitment Scam) ಇದೇ ಮೊದಲ ಬಾರಿಗೆ ಪೊಲೀಸ್‌ ಇಲಾ​ಖೆಯ (Police department)ಇಬ್ಬರು ಉನ್ನತ ಅಧಿ​ಕಾ​ರಿ​ಗ​ಳನ್ನು ಬಂಧಿ​ಸ​ಲಾ​ಗಿ​ದೆ. ಅಕ್ರ​ಮದ ಕಿಂಗ್‌​ಪಿ​ನ್‌​ಗ​ಳಿಗೆ ಅಭ್ಯ​ರ್ಥಿ​ಗ​ಳನ್ನು ಪೂರೈ​ಸು​ತ್ತಿದ್ದ ಆರೋ​ಪದ ಮೇರೆಗೆ ಗುರುವಾರ ಡಿವೈ​ಎಸ್ಪಿ (DYSP), ಸಿಪಿಐ (CPI) ಒಬ್ಬ​ರನ್ನು ಗುರು​ವಾರ ಸಿಐಡಿ (CID) ಬಂಧಿ​ಸಿದೆ.

ರಾಯಚೂರು ಜಿಲ್ಲೆಯ ಲಿಂಗಸುಗೂರು ಡಿವೈಎಸ್ಪಿ ವಿಜಯ ಕುಮಾರ್‌ ಸಾಲಿ (Vijay Kumar Sali) ಹಾಗೂ ಕಲಬುರಗಿ ಬೆರಳಚ್ಚು ವಿಭಾಗದ ಸಿಪಿಐ ಆನಂದ ಮೇತ್ರೆ (Anand Metre) ಬಂಧಿತ ಪೊಲೀಸ್‌ ಅಧಿ​ಕಾ​ರಿ​ಗ​ಳು. ಇಬ್ಬ​ರನ್ನೂ ಬುಧವಾರ ತಡರಾತ್ರಿವರೆಗೂ ತೀವ್ರ ವಿಚಾರಣೆ ನಡೆಸಿದ್ದ ಸಿಐಡಿ ತಂಡ ಗುರುವಾರ ಬಂಧಿ​ಸಿ​ದೆ. ಈ ಇಬ್ಬ​ರನ್ನೂ 8 ದಿನ​ಗಳ ಕಾಲ ಸಿಐಡಿ ಕಸ್ಟ​ಡಿಗೆ ಒಪ್ಪಿ​ಸ​ಲಾ​ಗಿ​ದೆ.

ಪ್ರಕರಣ​ಕ್ಕೆ ಸಂಬಂಧಿ​ಸಿ ಹಣ ನೀಡಿ ಪರೀಕ್ಷೆ ಬರೆ​ದಿದ್ದ ಏಳು ಮಂದಿ ಪೊಲೀಸ್‌ ಕಾನ್ಸ್‌​ಟೇ​ಬ​ಲ್‌​ಗ​ಳನ್ನು ಈಗಾ​ಗಲೇ ಬಂಧಿ​ಸ​ಲಾ​ಗಿ​ದೆ. ಆದರೆ ಅಕ್ರ​ಮದಲ್ಲಿ ಭಾಗಿ​ಯಾದ ಆರೋ​ಪದ ಮೇರೆಗೆ ಬಂಧಿ​ತ​ರಾ​ಗಿ​ರುವ ಮೊದಲಿಬ್ಬರು ಪೊಲೀ​ಸರು ವಿಜಯ ಕುಮಾರ್‌ ಹಾಗೂ ಆನಂದ್‌ ಆಗಿ​ದ್ದಾ​ರೆ. ಈ ಇಬ್ಬರ ಬಂಧನದೊಂದಗೆ ಪ್ರಕರಣದಲ್ಲಿ ಒಟ್ಟಾರೆ ಬಂಧಿತರ ಸಂಖ್ಯೆ ಒಟ್ಟಾರೆ 41ಕ್ಕೇರಿ​ದೆ. ಇದ​ರಲ್ಲಿ 9 ಮಂದಿ ಪೊಲೀ​ಸ​ರಾ​ಗಿ​ದ್ದಾ​ರೆ.

ಆರ್‌.ಡಿ. ಪಾಟೀಲ್‌ ಆಪ್ತರು?: ಬಂಧನಕ್ಕೊಳಪಟ್ಟಿರುವ ಡಿವೈಎಸ್ಪಿ ವಿಜ​ಯ ಕುಮಾ​ರ್‌ ಮತ್ತು ಸಿಪಿಐ ಮೇತ್ರೆ ಇಬ್ಬರೂ ಹಗರಣದ ಕಿಂಗ್‌​ಪಿ​ನ್‌​ಗ​ಳ​ಲ್ಲೊ​ಬ್ಬ​ನಾದ ಅಫಜಲ್ಪುರದ ಆರ್‌.ಡಿ.ಪಾಟೀಲ್‌ (RD Patil) ಆಪ್ತರು ಎನ್ನಲಾಗಿದೆ. ಮೂಲಗಳ ಪ್ರಕಾರ, ಕೆಲ ಅಭ್ಯ​ರ್ಥಿ​ಗ​ಳನ್ನು ಆರ್‌.ಡಿ. ಪಾಟೀಲಗೆ ಪರಿಚಯಿಸಿ ಹಣಕಾಸಿನ ಮಾತುಕತೆ ನಡೆಸಿ ಇವರೇ ಡೀಲ್‌ ಕುದುರಿಸಿದ್ದರು ಎನ್ನಲಾಗುತ್ತಿದೆ.

ನಾಲ್ವರು ಟ್ರೈನಿ ಪಿಎಸ್‌ಐಗಳ ವಿಚಾರಣೆ?: ಪಿಎಸ್‌ಐ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿ ಕಲಬುರಗಿಯ ನಾಗನಹಳ್ಳಿ ಪೊಲೀಸ್‌ ತರಬೇತಿ ಶಾಲೆಯಲ್ಲಿ ತರಬೇತಿ ಪಡೆಯುತ್ತಿರುವ ಕರ್ನಾಟಕ ಕೈಗಾರಿಕಾ ಭದ್ರತಾ ಪಡೆ ಟ್ರೈನಿ ಪಿಎಸ್‌ಐ ಯಶವಂತಗೌಡರನ್ನು ಮಂಗಳವಾರ ರಾತ್ರಿ ವಶಕ್ಕೆ ತೆಗೆದುಕೊಂಡು ಸಿಐಡಿ ತಂಡ ಬೆಂಗಳೂರಿಗೆ ಕರೆದುಕೊಂಡು ಹೋದ ಬೆನ್ನಲ್ಲೇ ಇದೇ ತರಬೇತಿ ಶಾಲೆಯ ಇನ್ನೂ ನಾಲ್ವರು ಟ್ರೈನಿ ಪಿಎ​ಸ್‌​ಐ​ಗ​ಳನ್ನು ವಿಚಾ​ರ​ಣೆ​ಗೊ​ಳ​ಪ​ಡಿ​ಸುವ ಸಾಧ್ಯತೆ ಇದೆ.


ದಿವ್ಯಾ ಹಾಗರಗಿ ಪಶ್ಚಾತ್ತಾಪ
ಕಲಬುರಗಿ:
‘ನನ್ನ ಶಾಲೆಯ ಮುಖ್ಯ ಶಿಕ್ಷಕ ಕಾಶೀನಾಥ್‌ ಮಾತು ಕೇಳಿ ತಪ್ಪು ಮಾಡಿಬಿಟ್ಟೆ. ಒಳ್ಳೆಯ ವಿದ್ಯಾರ್ಥಿಗಳಿಗೆ ನಾನು ಅನ್ಯಾಯ ಮಾಡಬಾರದಿತ್ತು’ ಎಂದು ಪರೀಕ್ಷಾ ಅಕ್ರಮ ನಡೆದ ಕಲಬುರಗಿ ಶಾಲೆಯ ಒಡತಿ ಹಾಗೂ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಸಿಐಡಿ ವಿಚಾರಣೆ ವೇಳೆ ಪಶ್ಚಾತ್ತಾಪದ ಮಾತುಗಳನ್ನು ಆಡುತ್ತಿದ್ದಾಳೆ ಎನ್ನಲಾಗಿದೆ. ಅಲ್ಲದೆ ಕಳೆದ 3-4 ದಿನಗಳಿಂದ ತನಿಖೆಗೆ ನಿರೀಕ್ಷೆಗೂ ಮೀರಿ ಸ್ಪಂದಿಸುತ್ತಿದ್ದಾಳೆ ಎಂದು ಮೂಲಗಳು ತಿಳಿಸಿವೆ.

ಒಂದೇ ಗ್ರಾಮದ 3 ಮಂದಿ ಎಸ್‌ಐಗೆ ಆಯ್ಕೆ!

ಪೇದೆ ಸೇರಿ ಮೂವರ ಬಂಧನ
ಬೆಂಗಳೂರು:
ಸಬ್‌ ಇನ್ಸ್‌ಪೆಕ್ಟರ್‌ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಸಂಬಂಧ ಪೊಲೀಸ್‌ ಕಾನ್‌ಸ್ಟೇಬಲ್‌ ಸೇರಿದಂತೆ ಮೂವರನ್ನು ಸಿಐಡಿ ಗುರುವಾರ ಬಂಧಿಸಿದೆ. ರಾಮನಗರ ಜಿಲ್ಲೆ ಕುಂಬಳಗೋಡು ಠಾಣೆಯ ಕಾನ್‌ಸ್ಟೇಬಲ್‌ ಸೋಮನಾಥ ಮಲ್ಲಿಕಾರ್ಜುನಯ್ಯ ಹಿರೇಮಠ, ಕಗ್ಗಲಿಪುರ ಸಮೀಪದ ಚಿನ್ನಕುರ್ಚಿ ಗ್ರಾಮದ ಬಿಜೆಪಿ ಮುಖಂಡರ ಪುತ್ರ ಎನ್ನಲಾದ ಸಿ.ಜೆ.ರಾಘವೇಂದ್ರ ಹಾಗೂ ಕುಣಿಗಲ್‌ ತಾಲೂಕು ಅಮೃತ್ತೂರಿನ ಸಿ.ಎಸ್‌.ನಾಗೇಶ್‌ಗೌಡ ಬಂಧಿತರಾಗಿದ್ದಾರೆ.

ಮದ್ಯ ಪ್ರಿಯರಿಗೆ ಶಾಕ್: ರಾಜ್ಯಾದ್ಯಂತ ಮದ್ಯ ಖರೀದಿ ಸ್ಥಗಿತವಾಗುತ್ತೆ ಯಾಕೆ ಗೊತ್ತಾ?

ಸಚಿವ ಅಶ್ವತ್ಥ ಬೆನ್ನಿಗೆ ನಿಂತ ಸಿಎಂ
ಬೆಂಗಳೂರು:
ಪಿಎಸ್‌ಐ ನೇಮಕಾತಿ ಅಕ್ರಮ ಸಂಬಂಧ ಸದ್ಯ ಕಾಂಗ್ರೆಸ್ಸಿನ ಗುರಿಯಾಗಿರುವ ಉನ್ನತ ಶಿಕ್ಷಣ ಸಚಿವ ಡಾ ಸಿ.ಎನ್‌. ಅಶ್ವತ್ಥ ನಾರಾಯಣ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಹಲವು ಸಚಿವರು ಸಮರ್ಥಿಸಿಕೊಂಡಿದ್ದಾರೆ. ಕಾಂಗ್ರೆಸ್‌ ಇಲ್ಲ ಸಲ್ಲದ ಆರೋಪ ಮಾಡುತ್ತಿದೆ. ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ. ಕಾಂಗ್ರೆಸ್‌ ಬಳಿ ದಾಖಲೆ ಇದ್ದರೆ ಕೊಡಲಿ ಎಂದು ಸವಾಲು ಹಾಕಿದ್ದಾರೆ.

Latest Videos
Follow Us:
Download App:
  • android
  • ios