ಬೆಂಗಳೂರಿನಲ್ಲಿ ರಾತ್ರಿ ಅಥವಾ ಸಂಜೆಯ ವೇಳೆ ವರುಣ ಅಬ್ಬರಿಸಲಿದ್ದಾನೆ. ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಉಡುಪಿ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 

ಬೆಂಗಳೂರು(ಅ.15): ಬೆಂಗಳೂರು ಸೇರಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ 2 ದಿನ ಉತ್ತಮವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. 

Add Asianetnews Kannada as a Preferred SourcegooglePreferred

ಈಗಾಗಲೇ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭರ್ಜರಿಯಾಗಿದೆ ಮಳೆಯಾಗಿದೆ. ಹಿಂಗಾರು ಮಳೆ ರಾಜ್ಯದಲ್ಲಿ ಚುರುಕುಗೊಂಡಿದೆ. ಇಂದಿನಿಂದ ಕೆಲ‌ ಜಿಲ್ಲೆಗಳಲ್ಲಿ 2 ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. 

ಬರಪೀಡಿತ ತಾಲೂಕುಗಳ ಸಂಖ್ಯೆ 195ರಿಂದ 216ಕ್ಕೆ ಏರಿಕೆ: 20 ತಾಲೂಕುಗಳಲ್ಲಿ ಮಾತ್ರ ಮಳೆ

ಸಿಲಿಕಾನ್ ಸಿಟಿಯಲ್ಲಿ ಬೆಂಗಳೂರಿನಲ್ಲಿ ರಾತ್ರಿ ಅಥವಾ ಸಂಜೆಯ ವೇಳೆ ವರುಣ ಅಬ್ಬರಿಸಲಿದ್ದಾನೆ. ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಉತ್ತರ ಕನ್ನಡ, ದಕ್ಷಿಣ ಕನ್ನಡ, ಧಾರವಾಡ, ಉಡುಪಿ, ಹಾವೇರಿ, ಬೆಳಗಾವಿ, ಚಿತ್ರದುರ್ಗ, ಚಾಮರಾಜನಗರ, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.