userpic
user icon
0 Min read

ಕಾಶ್ಮೀರದಲ್ಲಿ ಹಿಂದೂಗಳ ನರಮೇಧ ನಡೆದು ದೇಶ ಶೋಕಾಚರಣೆ ಮಾಡ್ತಿದ್ದರೆ, ಶಾಸಕ ಇಕ್ಬಾಲ್ ಹುಸೇನ್ ಸೀರೆ ಹಂಚ್ತಿದ್ದಾರೆ!

ramanagara-mla-Iqbal-hussain-saree-distribution-amid-kashmir-terror-attack sat

Synopsis

ಕಾಶ್ಮೀರದಲ್ಲಿ ಹಿಂದೂ ಪ್ರವಾಸಿಗರ ಮೇಲಿನ ಉಗ್ರರ ದಾಳಿಯಿಂದ ದೇಶ ಶೋಕದಲ್ಲಿರುವಾಗ, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಮಹಿಳಾ ದಿನಾಚರಣೆಯ ಸಂಭ್ರಮದಲ್ಲಿ ತೊಡಗಿದ್ದಾರೆ. ಸಾವಿರಾರು ಮಹಿಳೆಯರಿಗೆ ಸೀರೆ ಹಂಚುವ ಕಾರ್ಯಕ್ರಮದಲ್ಲಿ ನೂಕುನುಗ್ಗಲು ಉಂಟಾಗಿ, ಓರ್ವ ಮಹಿಳೆ ಕೈ ಮುರಿದುಕೊಂಡು ಗಾಯಾಳುವಾಗಿದ್ದಾರೆ.

ರಾಮನಗರ (ಏ.24): ಕಾಶ್ಮೀರದ ಪಹಲ್ಗಾಮ್‌ನಲ್ಲಿ ಹಿಂದೂಗಳನ್ನು ಗುರಿಯಾಗಿಸಿ ನಡೆಸಿದ ಉಗ್ರರ ಗುಂಡಿನ ದಾಳಿಯಿಂದಾಗಿ 26 ಪ್ರವಾಸಿಗರು ಸಾವಿಗೀಡಾಗಿದ್ದಾರೆ. ಇದರಿಂದ ಇಡೀ ದೇಶವೇ ಹಿಂದೂಗಳ ನರಮೇಧದಿಂದ ಶೋಕಾಚರಣೆಯಲ್ಲಿ ಮುಳುಗಿದೆ. ಇಬ್ಬರು ಕನ್ನಡಿಗರ ಮೃತದೇಹದ ಅಂತ್ಯಕ್ರಿಯೆ ನಡೆಯುತ್ತಿದೆ. ಇಂತಹ ವೇಳೆಯಲ್ಲಿ ರಾಮನಗರದ ಶಾಸಕ ಇಕ್ಬಾಲ್ ಹುಸೇನ್ ಸಾವಿರಾರು ಮಹಿಳೆಯರಿಗೆ ಸೀರೆಯನ್ನು ಹಂಚುವ ಮೂಲಕ ಮಹಿಳಾ ದಿನಾಚರಣೆಯ ದಿಸೆಯಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ಸಾವಿರಾರು ಮಹಿಳೆಯರು ಸೀರೆಗಾಗಿ ನೂಕುನುಗ್ಗಲು ಮಾಡಿದ್ದಾರೆ.

ಹೌದು, ಇಡೀ ದೇಶವೇ ಕಾಶ್ಮೀರದಲ್ಲಿ ನಡೆದ ಹಿಂದೂ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ಗುಂಡಿನ ದಾಳಿಯಿಂದ ಶೋಕದಲ್ಲಿ ಮುಳುಗಿದೆ. ಏ.22ರ ಮಧ್ಯಾಹ್ನ ನಡೆದ ಘಟನೆಯಿಂದ ಎಲ್ಲರೂ ಬೆಚ್ಚಿ ಬಿದ್ದಿದ್ದು, ಹಿಂದೂಗಳಲ್ಲಿ ಆತಂಕ ಮನೆ ಮಾಡಿದ್ದು ಉಗ್ರರಿಗೆ ನೆರವು ನೀಡುತ್ತಿರುವ ಪಾಕಿಸ್ತಾನದ ಮೇಲೆ ಸೇಡು ತೀರಿಸಿಕೊಳ್ಳಬೇಕು ಎಂದು ಹಪಹಪಿಸುತ್ತಿದ್ದಾರೆ. ಇನ್ನು ಪ್ರವಾಸಕ್ಕೆಂದು ಹೋದ ಹಿಂದೂ ಅಮಾಯಕ ಪ್ರವಾಸಿಗರು ತಮ್ಮ ಜೀವಗಳನ್ನು ಕಳೆದುಕೊಂಡಿದ್ದಾರೆ. ಇದರಲ್ಲಿ ಶಿವಮೊಗ್ಗದ ಮಂಜುನಾಥ್ ಮತ್ತು ಬೆಂಗಳೂರಿನ ಭರತ್ ಭೂಷಣ್ ಒಬ್ಬರು ಹತರಾಗಿದ್ದಾರೆ. ಇಬ್ಬರ ಮೃತದೇಹಗಳನ್ನು ರಾಜ್ಯಕ್ಕೆ ತಂದು ಅಂತ್ಯಕ್ರಿಯೆ ನಡೆಸಲಾಗುತ್ತಿದೆ. ನಮ್ಮ ಕರ್ನಾಟಕ ರಾಜ್ಯ ಸೇರಿದಂತೆ ಇಡೀ ದೇಶವೇ ಶೋಕದಲ್ಲಿ ಮುಳುಗಿರುವಾಗ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಮಾತ್ರ ಇದಕ್ಕೂ ತನಗೂ ಸಂಬಂಧವೇ ಇಲ್ಲವೆಂಬಂತೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: ಉಗ್ರರು ಸಾಯಿಸುವ ಮುನ್ನ 'ನೀವು ಹಿಂದೂನಾ' ಕೇಳಿದ್ದೇ ಸುಳ್ಳಂತೆ! ಈ ಯುವತಿ ಮಾತು ಕೇಳಿ... ಯಾರೀಕೆ?

ದೇಶವೇ ಶೋಕದಲ್ಲಿ ಮುಳುಗಿರುವಾಗ ರಾಮಗರದಲ್ಲಿ ಶಾಸಕ ಇಕ್ಬಾಲ್ ಹುಸೇನ್, ಬೃಹತ್ ಮಟ್ಟದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜನೆ ಮಾಡಿದ್ದಾರೆ. ಈ ಮಹಿಳಾ ದಿನಾಚರಣೆಯಲ್ಲಿ ಎಲ್ಲ ಮಹಿಳೆಯರಿಗೆ ಸೀರೆಗಳನ್ನು ಹಂಚಿಕೆ ಮಾಡಿದ್ದಾರೆ. ರಾಮನಗರದ ದೊಡ್ಡ ಕ್ರಿಡಾಂಗಣದಲ್ಲಿ ಉಚಿತ ಸೀರೆ ಹಂಚಿಕೆ ಮಾಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ಬಂದಿದ್ದ ಮಹಿಳೆಯರು ಸೀರೆಗಾಗು ಮುಗಿ ಬಿದ್ದಿದ್ದಾರೆ. ನಾ ಮುಂದು, ತಾ ಮುಂದು ಎಂದು ಸೀರೆಗಾಗಿ ಪರದಾಡುತ್ತಿದ್ದಾರೆ. ಕೆಲವರು ಸುಮಾರು 7-8 ಅಡಿ ಎತ್ತರವಾಗಿ ನಿರ್ಮಾಣ ಮಾಡಲಾಗಿರುವ ಕಬ್ಬಿಣದ ಕಾಂಪೌಂಡ್‌ಗಳನ್ನು ಹತ್ತಿ ಸೀರೆ ಪಡೆಯಲು ಪರದಾಡುತ್ತಿದ್ದಾರೆ. ಇದರಿಂದ ಶಾಸಕ ಇಕ್ಬಾಲ್ ಹುಸೇನ್‌ಗೆ ಅದೆಂಥಾ ಖುಷಿಯೋ ತಿಳಿಯುತ್ತಿಲ್ಲ.

ramanagara-mla-Iqbal-hussain-saree-distribution-amid-kashmir-terror-attack sat

ಇನ್ನು ರಾಮನಗರದಲ್ಲಿ ಆಯೋಜನೆ ಮಾಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಮಹಿಳೆಯರಿಗೆ ಪ್ರಶಸ್ತಿ ಪ್ರದಾನ ಮತ್ತು ಸನ್ಮಾನವನ್ನೂ ಮಾಡಲಾಯಿತು. ಈ ಕಾರ್ಯಕ್ರಮಕ್ಕೆ ಬಂದಿದ್ದ ಸಾವಿರಾರು ಮಹಿಳೆಯರಿಗೆ ಉಚಿತ ಸೀರೆ ವ್ಯವಸ್ಥೆ ಮಾಡಿದ್ದರು. ಉಚಿತ ಸೀರೆಗಾಗಿ ಮಹಿಳೆಯರ ತಳ್ಳಾಟ-ನೂಕಾಟ ಹೆಚ್ಚಾಗಿದ್ದು, ಓರ್ವ ಮಹಿಳೆಯ ಕೈ ಮುರಿತವಾಗಿದೆ. ಕೂಡಲೇ ಮಹಿಳೆ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನು ಮಹಿಳಾ ದಿನಾಚರಣೆ ಕಾರ್ಯಕ್ರಮಕ್ಕೆ ಸಾವಿರಾರು ಮಹಿಳೆಯರನ್ನ ಕರೆಸಿ ಸರಿಯಾದ ವ್ಯವಸ್ಥೆ ಮಾಡದ ಹಿನ್ನೆಲೆಯಲ್ಲಿ ಶಾಸಕನ ವಿರುದ್ಧ ನೂರಾರು ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಪಾಕಿಸ್ತಾನ ನಿಜಬಣ್ಣ ಬಹಿರಂಗ: ಹಿಂದೂಗಳ ವಿರುದ್ಧ ಪಾಕ್ ಸೇನಾ ಮುಖ್ಯಸ್ಥ ವಿವಾದಾಸ್ಪದ ಹೇಳಿಕೆ

ರಾಜ್ಯದಾದ್ಯಂತ ಶ್ರದ್ಧಾಂಜಲಿ, ಪಂಜಿನ ಮೆರವಣಿಗೆ:

ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ದಾಳಿ ಕೃತ್ಯವನ್ನು ಖಂಡಿಸಿ ರಾಜ್ಯದಾದ್ಯಂತ ಶ್ರದ್ಧಾಂಜಲಿ ಸಲ್ಲಿಕೆ ಮಾಡಲಾಗುತ್ತಿದೆ. ಪಂಜಿನ ಮೆರವಣಿಗೆ, ಮೇಣದಬತ್ತಿ ಹಿಡಿದು ಮೆರವಣಿಗೆ, ಮೌನಾಚರಣೆ ಹಾಗೂ ಸಂಭ್ರಮದ ಎಲ್ಲ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ಮೃತರ ಆತ್ಮಕ್ಕೆ ಶಾಂತಿ ಕೋರುತ್ತಾ ಸಂತಾಪ ಸಲ್ಲಿಕೆ ಮಾಡುತ್ತಿದ್ದಾರೆ. ಇನ್ನು ಕೆಲವೆಡೆ ಉಗ್ರರ ನಡೆಯನ್ನು ವಿರೋಧಿಸಿ ಭಾರಿ ದೊಡ್ಡ ಮಟ್ಟದ ಪ್ರತಿಭಟನಾ ಮೆರವಣಿಗೆಗಳು ನಡೆಯುತ್ತಿವೆ. ಪಾಕಿಸ್ತಾನದ ನೆರವಿನಿಂದ ಉಗ್ರರು ಇಂತಹ ಕುಕೃತ್ಯ ನಡೆಸಿದ್ದು, ಅವರನ್ನು ಯಾವುದೇ ಕಾರಣಕ್ಕೂ ಸುಮ್ಮನೆ ಬಿಡಬಾರದು ಎಂದು ಆಗ್ರಹ ಮಾಡಿದ್ದಾರೆ.

Latest Videos