ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಹೈದರಾಬಾದ್ ನಿಜಾಮ್ ಕಾಲದಲ್ಲಿ ತಮ್ಮ ಕುಟುಂಬವನ್ನು ರಕ್ಷಿಸಿದ್ದು RSS ಎಂಬ ಬಿ.ಎಲ್. ಸಂತೋಷ್ ಅವರ ಹೇಳಿಕೆ ತಳ್ಳಿಹಾಕಿದ್ದಾರೆ. ತಮ್ಮನ್ನು ರಕ್ಷಿಸಿದ್ದು ನೆಹರು, ಸರ್ದಾರ್ ಪಟೇಲ್ ಮತ್ತು ಭಾರತೀಯ ಸೇನೆಯೇ ಹೊರತು ಬೇರೆ ಯಾರೂ ಅಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕಲಬುರಗಿ(ಆ.16) : ಹೈದರಾಬಾದ್ ನಿಜಾಮ್ ಕಾಲದಲ್ಲಿ ‘ಆಪರೇಷನ್ ಪೋಲೋ’ ನಡೆಸಿ ನಮ್ಮ ಕುಟುಂಬವನ್ನು ರಕ್ಷಿಸಿದ್ದು ಜವಾಹರಲಾಲ್ ನೆಹರು, ಸರ್ದಾರ್ ವಲ್ಲಭಭಾಯಿ ಪಟೇಲ್, ಭಾರತೀಯ ಸೇನೆಯೇ ಹೊರತು ಬೇರೆ ಇನ್ನಾರೂ ಅಲ್ಲ. ಸುಮ್ಮನೆ ಬುರುಡೆ ಬಿಟ್ಟರೆ ಯಾರೂ ಕೇಳುವುದಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank kharge) ಅವರು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್(BL Santosh) ಅವರಿಗೆ ತಿರುಗೇಟು ನೀಡಿದ್ದಾರೆ.
ಆರ್ಎಸ್ಎಸ್ ನೋಂದಣಿಯಾಗಿಲ್ಲ
ಆರ್ಎಸ್ಎಸ್ ನೋಂದಣಿ(RSS Registration)ಯಾಗಿಲ್ಲ. ಹೀಗಾಗಿ ಆ ಸಂಘಟನೆಯನ್ನು ನಿಷೇಧ ಮಾಡಲು ಆಗುವುದಿಲ್ಲ. ಕೇಳಿದರೆ, ಸಾಂಸ್ಕೃತಿಕ ಸಂಘ ಎನ್ನುತ್ತಾರೆ. ಪ್ರಶ್ನಿಸಿದರೆ ನಾಶವಾಗ್ತೀರಿ, ಮನೆಯಿಂದ ಹೊರಗಡೆ ಬರೋಕೆ ಆಗಲ್ಲ ಅಂತ ಬೆದರಿಕೆ ಹಾಕುತ್ತಾರೆ. ಬಿಜೆಪಿ ನಾಯಕರ ಯಾವ ಮಕ್ಕಳು ಪೂರ್ಣಾವಧಿ ಆರೆಸ್ಸೆಸ್ ಶಾಖೆಗೆ ಹೋಗುತ್ತಾರೆ ಹೇಳಲಿ ಎಂದು ಸವಾಲು ಹಾಕಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿದ ಅವರ, ನಿಜಾಮ್ ಕಾಲದಲ್ಲಿ ದೌರ್ಜನ್ಯ ನಡೆಯುತ್ತಿದ್ದಾಗ ಖರ್ಗೆ ಅವರ ಕುಟುಂಬವನ್ನು ರಕ್ಷಣೆ ಮಾಡಿದ್ದು ಆರೆಸ್ಸೆಸ್ ಎಂಬ ಸಂತೋಷ್ ಹೇಳಿಕೆಯನ್ನು ತಿರಸ್ಕರಿಸಿದರು. ಸಂತೋಷ್ ಅವರಿಗೆ ಇತಿಹಾಸ ಗೊತ್ತಿಲ್ಲ. ಇವರೆಲ್ಲ ವಾಟ್ಸಾಪ್ ಯೂನಿವರ್ಸಿಟಿ ಪ್ರಾಡಕ್ಟ್ಗಳು. ಇನ್ನೂ ಏನೇನು ಕೇಳಬೇಕೋ ಎಂದು ಲೇವಡಿ ಮಾಡಿದರು.
ದೇಶದ ಸ್ವಾತಂತ್ರ್ಯಕ್ಕಾಗಿ ಹುತಾತ್ಮರಾದ ಸಂಘದ 50 ಜನರ ಹೆಸರು ಕೊಡಲಿ ನೋಡೋಣ ಎಂದು ಸವಾಲು ಹಾಕಿದರು. ತಾವು ಬೇಕಾದರೆ ಕಾಂಗ್ರೆಸ್ನ 500 ಕ್ಕೂ ಹೆಚ್ಚು ಜನ ಹುತಾತ್ಮರಾದವರ ಹೆಸರು ಕೊಡಬಲ್ಲೆ ಎಂದರು


