ಶಿವಮೊಗ್ಗ ಜಿಲ್ಲೆಯ ಸಾಗರ ಮಾರಿಕಾಂಬಾ ಜಾತ್ರೆಯಲ್ಲಿ ಪಾಲ್ಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕ ಕಾಗೋಡು ತಿಮ್ಮಪ್ಪ ಅವರು ದೇವಿಯ ದರ್ಶನದ ಬಳಿಕ ಅಸ್ವಸ್ಥಗೊಂಡಿದ್ದಾರೆ. ರಕ್ತದೊತ್ತಡದ ಸಮಸ್ಯೆಯಿಂದ ಕುಸಿದುಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ
ಸಾಗರ (ಫೆ.3): ಶಿವಮೊಗ್ಗ ಜಿಲ್ಲೆಯ ಸುಪ್ರಸಿದ್ಧ ಸಾಗರ ಮಾರಿಕಾಂಬಾ ಜಾತ್ರೆಯ ಸಂಭ್ರಮ ಇಂದಿನಿಂದ ಆರಂಭಗೊಂಡಿದೆ. ಆದರೆ, ಈ ಸಂಭ್ರಮದ ನಡುವೆಯೇ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ದಿಢೀರ್ ಅಸ್ವಸ್ಥಗೊಂಡ ಘಟನೆ ನಡೆದಿದೆ.
ದೇವಿಯ ದರ್ಶನದ ಬಳಿಕ ಅನಾಹುತ
ಜಾತ್ರೆಯಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆದ ಕಾಗೋಡು ತಿಮ್ಮಪ್ಪ ಅವರು ದೇವಸ್ಥಾನದಿಂದ ಹೊರಬರುವ ಸಂದರ್ಭದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ರಕ್ತದೊತ್ತಡದ (BP) ಸಮಸ್ಯೆಯಿಂದಾಗಿ ಅವರು ಪ್ರಜ್ಞೆ ತಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಬಾಗಲಕೋಟೆ: ಮನೆ ವಿವಾದ ಕೋರ್ಟ್ನಲ್ಲಿದ್ದಾಗಲೇ 88 ವರ್ಷದ ವೃದ್ಧನ ಉಟ್ಟ ಬಟ್ಟೆಯಲ್ಲೇ ಹೊರಹಾಕಿದ ಪಾಪಿಗಳು
ತಕ್ಷಣ ಆಸ್ಪತ್ರೆಗೆ ರವಾನೆ, ಆರೋಗ್ಯ ಸ್ಥಿರವಾಗಿದೆ
ಸ್ಥಳದಲ್ಲಿದ್ದ ಬೆಂಬಲಿಗರು ಕೂಡಲೇ ಆಂಬುಲೆನ್ಸ್ ಮೂಲಕ ಅವರನ್ನು ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ರವಾನಿಸಿದ್ದಾರೆ. ವೈದ್ಯರು ತಕ್ಷಣವೇ ಚಿಕಿತ್ಸೆ ಆರಂಭಿಸಿದ್ದು, ಕಾಗೋಡು ತಿಮ್ಮಪ್ಪ ಅವರ ಆರೋಗ್ಯ ಸದ್ಯ ಸ್ಥಿರವಾಗುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.


