ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಸೂಕ್ಷ್ಮ ಪ್ರದೇಶದಲ್ಲಿ ಜನರಿಗೆ ರಸ್ತೆ ನಿರ್ಮಾಣ ಮಾಡೋದಕ್ಕೆ ಅನುಮತಿ ನೀಡದ ಅರಣ್ಯ ಇಲಾಖೆ ಕಣ್ತಪ್ಪಿಸಿ ಖಾಸಗಿ ಕಂಪನಿಗಳು ಲೇಔಟ್ ನಿರ್ಮಿಸಿ ರಿಯಲ್ ಎಸ್ಟೇಟ್ ದಂಧೆಗೆ ಇಳಿದಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಅರಣ್ಯ ವ್ಯಾಪ್ತಿಯ ಮೇಲಿನ ಹುಲುವತ್ತಿ ಗ್ರಾಮದಲ್ಲಿ ನಡೆದಿದೆ.  

ವರದಿ: ಆಲ್ದೂರು ಕಿರಣ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿಕ್ಕಮಗಳೂರು 

Add Asianetnews Kannada as a Preferred SourcegooglePreferred

ಚಿಕ್ಕಮಗಳೂರು (ಜ.08): ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಸೂಕ್ಷ್ಮ ಪ್ರದೇಶದಲ್ಲಿ ಜನರಿಗೆ ರಸ್ತೆ ನಿರ್ಮಾಣ ಮಾಡೋದಕ್ಕೆ ಅನುಮತಿ ನೀಡದ ಅರಣ್ಯ ಇಲಾಖೆ ಕಣ್ತಪ್ಪಿಸಿ ಖಾಸಗಿ ಕಂಪನಿಗಳು ಲೇಔಟ್ ನಿರ್ಮಿಸಿ ರಿಯಲ್ ಎಸ್ಟೇಟ್ ದಂಧೆಗೆ ಇಳಿದಿರೋ ಘಟನೆ ಚಿಕ್ಕಮಗಳೂರು ತಾಲೂಕಿನ ಮುತ್ತೋಡಿ ಅರಣ್ಯ ವ್ಯಾಪ್ತಿಯ ಮೇಲಿನ ಹುಲುವತ್ತಿ ಗ್ರಾಮದಲ್ಲಿ ನಡೆದಿದೆ. ಜಾಗರ ಹೋಬಳಿಯ ಮೇಲಿನ ಹುಲುವತ್ತಿ ಹಾಗೂ ಗೊಣಕಲ್ ಗ್ರಾಮದಲ್ಲಿ 242 ಎಕರೆ ಭೂಮಿಯನ್ನ ಪರಿವರ್ತನೆ ಮಾಡಿಸಿ ಖಾಸಗಿ ಕಂಪನಿಗಳು ರಿಯಲ್ ಎಸ್ಟೇಟ್ ದಂಧೆಗೆ ಇಳಿದಿವೆ.ವನ್ಯಜೀವಿ ಕಾಯ್ದೆ ಅಂಶಗಳನ್ನ ಗಾಳಿಗೆ ತೂರಿ ಕಾಡಂಚಿನಲ್ಲಿ ರಾಜಾರೋಷವಾಗಿ ಖಾಸಗಿಯಾಗಿ ವಿಲ್ಲಾಗಳನ್ನ ನಿರ್ಮಾಣ ಮಾಡಿ ಮಾರಾಟ ಮಾಡಲು ಮುಂದಾಗಿದ್ದು ಜಾಹೀರಾತು ಕೂಡ ನೀಡಿದ್ದಾರೆ.

ಸೂಕ್ಷ್ಮ ವಲಯ ಪ್ರದೇಶದಲ್ಲಿ ಲೇಔಟ್ ನಿರ್ಮಿಸಿ ರಿಯಲ್ ಎಸ್ಟೇಟ್ ದಂಧೆ: ಜಿಲ್ಲಾಡಳಿತ ಹಾಗೂ ಸರ್ಕಾರದ ಯಾವೊಂದು ಇಲಾಖೆಗಳ ಅನುಮತಿ ಪಡೆಯದೆ ಹುಲಿ ಹಾಗೂ ವನ್ಯಜೀವಿ ಸಂರಕ್ಷಿತ ಪ್ರದೇಶದಲ್ಲಿ ಕಾಫಿ ಪ್ಲಾಂಟೇಶನ್ ಹೆಸರಲ್ಲಿ ಕದ್ದು ಮುಚ್ಚಿ ರಿಯಲ್ ಎಸ್ಟೇಟ್ ದಂಧೆ ಎಗ್ಗಿಲ್ಲದೆ ನಡೆಯುತ್ತಿರೋದು ಅಚ್ಚರಿ ಮೂಡಿಸಿದೆ. ಆನೆ, ಹುಲಿ, ಚಿರತೆ ಸೇರಿದಂತೆ ನೂರಾರು ವನ್ಯ ಜೀವಿಗಳು ವಾಸಿಸುವ ಪಶ್ಚಿಮ ಘಟ್ಟವನ್ನು ರಿಯಲ್ ಎಸ್ಟೇಟ್ ದಂಧೆಗೆ ಬಳಕೆ ಮಾಡಿಕೊಂಡಿರುವುದು ದಂಧೆಕೋರರಿಗೆ ಸರ್ಕಾರ ಹಾಗೂ ಕಾನೂನಯ ಭಯ ಇಲ್ಲವೆಂಬಂತಾಗಿದೆ. ಕಾಡಿನ ಮಧ್ಯೆ ಇಷ್ಟೆಲ್ಲಾ ನಡೆದ್ರು ಅರಣ್ಯ ಇಲಾಖೆ ಅಧಿಕಾರಿಗಳ ಗಮನಕ್ಕೂ ಬರಲೇ ಇಲ್ವಾ ಎಂಬ ಪ್ರಶ್ನೆ ಮೂಡಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪಶ್ಚಿಮ ಘಟ್ಟ ವ್ಯಾಪ್ತಿಯ ಭದ್ರಾ ಹುಲಿ ಕಾಡಲ್ಲಿ ರಿಯಲ್ ಎಸ್ಟೇಟ್ ಕಾಲಿಟ್ಟಿದ್ದಾದರೂ ಹೇಗೆ ಅನ್ನೋದು ನಿಜಕ್ಕೂ ಆಶ್ಚರ್ಯ ಮೂಡಿಸಿದೆ. .

ಬಿಜೆಪಿ ವರಿಷ್ಠರ ಎದುರು ಇಲ್ಲಿನ ಅಡ್ಜಸ್ಟ್‌ಮೆಂಟ್‌ ಎಲ್ಲ ಹೇಳಿದ್ದೇನೆ: ಶಾಸಕ ಬಸನಗೌಡ ಯತ್ನಾಳ

7 ದಿನದ ಗಡುವು ನೀಡಿ 6 ಜನರಿಗೆ ಡಿಸಿ ನೋಟೀಸ್: ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪಶ್ಚಿಮ ಘಟ್ಟ ವ್ಯಾಪ್ತಿಯ ಭದ್ರಾ ಹುಲಿ ಕಾಡಲ್ಲಿ ರಿಯಲ್ ಎಸ್ಟೇಟ್ ಕಾಲಿಟ್ಟಿದ್ದಾದರೂ ಹೇಗೆ ನಿಜಕ್ಕೂ ಆಶ್ಚರ್ಯ. ಸದ್ಯ ತಡವಾಗಿ ಆದರೂ ಎಚ್ಚೆತ್ತಿರೋ ಜಿಲ್ಲಾಡಳಿತ ಸಂಬಂಧ ಪಟ್ಟ ಖಾಸಗಿ ಕಂಪನಿಗಳ ಆರು ಜನರಿಗೆ ನೋಟಿಸ್ ನೀಡಿದೆ. ಇತ್ತಾ ಮಾಲಿನ್ಯ ನಿಯಂತ್ರಣ ಮಂಡಳಿಯೂ ಮಂಡಳಿಯೂ ರಿಯಲ್ ಎಸ್ಟೇಟ್ ಗೆ ಪರವಾನಗಿ ನೀಡದಂತೆ ಜಿಲ್ಲಾಡಳಿತಕ್ಕೆ ದೂರು ನೀಡಿದೆ. ..ಒಟ್ಟಾರೆ ಪಶ್ಚಿಮ ಘಟ್ಟ ವ್ಯಾಪ್ತಿಯ ಸಣ್ಣಪುಟ್ಟ ಗ್ರಾಮಗಳನ್ನು ಒಕ್ಕಲೆಬ್ಬಿಸಿ ಬೇರಡೆಗೆ ಸ್ಥಳಾಂತರ ಮಾಡುವ ಸರ್ಕಾರ ಬೃಹತ್ ಖಾಸಗಿ ಕಂಪನಿಗಳಿಗೆ ರಿಯಲ್ ಎಸ್ಟೇಟ್ ಮನೆಗೆ ಬಗ್ಗಿರುವುದು ನಿಜಕ್ಕೂ ದುರಂತ.. ಇನ್ನಾದ್ರೂ ಈ ಅಕ್ರಮ ಸೀಕ್ರೆಟ್ ಲೇಔಟ್ ನಿರ್ಮಾಣಕ್ಕೆ ಕಡಿವಾಣ ಸರ್ಕಾರ ಆಗುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.