ಕನ್ನಡ ಸಾಹಿತ್ಯ ಪರಿಷತ್ತು ನೀಡುವ ದತ್ತಿ ಪ್ರಶಸ್ತಿಗೆ  ವಿಶ್ವವಾಣಿ ಪತ್ರಿಕೆ ಸಂಪಾದಕರೂ ಆದ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್‌ ಹಾಗೂ  ಹಿರಿಯ ಲೇಖಕಿ ಡಾ. ಎಚ್‌.ಎಸ್‌.ಸುಜಾತಾ ಆಯ್ಕೆಯಾಗಿದ್ದಾರೆ. 

ಬೆಂಗಳೂರು (ಫೆ.17): ಕನ್ನಡ ಸಾಹಿತ್ಯ ಪರಿಷತ್ತು ನೀಡುವ ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿಗೆ ವಿಶ್ವವಾಣಿ ಪತ್ರಿಕೆ ಸಂಪಾದಕರೂ ಆದ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್‌ ಹಾಗೂ ಟಿ.ಗಿರಿಜಾ ಸಾಹಿತ್ಯ ಪ್ರಶಸ್ತಿಗೆ ಹಿರಿಯ ಲೇಖಕಿ ಡಾ. ಎಚ್‌.ಎಸ್‌.ಸುಜಾತಾ ಆಯ್ಕೆಯಾಗಿದ್ದಾರೆ. 

Add Asianetnews Kannada as a Preferred SourcegooglePreferred

ಕಸಾಪ ಅಧ್ಯಕ್ಷ ಡಾ.ಮನು ಬಳಿಗಾರ್‌ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿ ಸಭೆಯಲ್ಲಿ ವಿಶ್ವೇಶ್ವರ ಭಟ್‌ ಮತ್ತು ಎಚ್‌.ಎಸ್‌.ಸುಜಾತಾ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಟಿ.ಗಿರಿಜಾ ಸಾಹಿತ್ಯ ಪ್ರಶಸ್ತಿ 15 ಸಾವಿರ ನಗದು ಮತ್ತು ನಾಗಡಿಕೆರೆ-ಕಿಟ್ಟಪ್ಪಗೌಡ ರುಕ್ಮಿಣಿ ತೀರ್ಥಹಳ್ಳಿ ದತ್ತಿ ಪ್ರಶಸ್ತಿ 10 ಸಾವಿರ ನಗದು, ಸ್ಮರಣಿಕೆ, ಫಲ ತಾಂಬೂಲ ಒಳಗೊಂಡಿದೆ. 

ಸುಬ್ರಾಯ ಚೊಕ್ಕಾಡಿ ಸೇರಿ 6 ಮಂದಿಗೆ ಮಾಸ್ತಿ ಪ್ರಶಸ್ತಿ 2020

ಆಯ್ಕೆ ಸಮಿತಿ ಸಭೆಯಲ್ಲಿ ಸದಸ್ಯರಾದ ಅರುಂಧತಿ ರಮೇಶ್‌, ಗೌರವ ಕೋಶಾಧ್ಯಕ್ಷ ಪಿ.ಮಲ್ಲಿಕಾರ್ಜುನಪ್ಪ, ಕಸಾಪ ಗೌರವ ಕಾರ್ಯದರ್ಶಿಗಳಾದ ಡಾ.ಪದ್ಮರಾಜ ದಂಡಾವತಿ, ಕೆ.ರಾಜಕುಮಾರ್‌ ಉಪಸ್ಥಿತರಿದ್ದರು.