ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್, ಮೂಲಭೂತ ಸೌಲಭ್ಯಗಳ ಕೊರತೆ ಮತ್ತು ದೈಹಿಕ ಹಿಂಸೆಯ ಆರೋಪ ಮಾಡಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿರುವ ಸೆಷನ್ಸ್ ಕೋರ್ಟ್, ಜೈಲಿನ ಸ್ಥಿತಿಗತಿ ಪರಿಶೀಲಿಸಿ ವರದಿ ನೀಡಲು ಕಾನೂನು ಸೇವಾ ಪ್ರಾಧಿಕಾರಕ್ಕೆ ಆದೇಶಿಸಿದೆ. 

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿಸುವನಟ ದರ್ಶನ್ ಸಲ್ಲಿಸಿದ ಅರ್ಜಿಯನ್ನು 64ನೇ ಸೆಷನ್ಸ್ ಕೋರ್ಟ್‌ ಭಾಗಶಃ ಮಾನ್ಯಗೊಳಿಸಿದೆ. ತಮ್ಮ ಬಂಧನದ ನಂತರ ಜೈಲಿನಲ್ಲಿರುವ ವೇಳೆ ಮೂಲಭೂತ ಸೌಲಭ್ಯಗಳ ಕೊರತೆ, ದೈಹಿಕ ಹಿಂಸೆ ಸೇರಿದಂತೆ ಹಲವು ಸಮಸ್ಯೆಗಳನ್ನು ಉಲ್ಲೇಖಿಸಿ ಸಲ್ಲಿಸಿದ್ದ ಅರ್ಜಿಯ ಬಗ್ಗೆ ಸೆಷನ್ಸ್ ಕೋರ್ಟ್ ಪ್ರಮುಖ ಆದೇಶ ನೀಡಿದೆ. ದರ್ಶನ್ ಪರ ವಕೀಲರು ಸಿಆರ್ಪಿಸಿ ಸೆಕ್ಷನ್ 310ರ ಅಡಿಯಲ್ಲಿ ಸಲ್ಲಿಸಿದ್ದ ಅರ್ಜಿಯಲ್ಲಿ, ಜೈಲಿನೊಳಗೆ ಕನಿಷ್ಠ ಮಾನವೀಯ ಸೌಲಭ್ಯಗಳೂ ಲಭ್ಯವಿಲ್ಲವೆಂದು ಆರೋಪ ಮಾಡಿದ್ದರು. ಅವರು ಜೈಲಿನೊಳಗೆ ಹಾಸಿಗೆ, ದಿಂಬು ಮುಂತಾದ ನಿತ್ಯ ಸೌಲಭ್ಯಗಳನ್ನು ಒದಗಿಸಬೇಕೆಂಬ ಬೇಡಿಕೆಯನ್ನೂ ಕೋರಿದ್ದರು. ಜೊತೆಗೆ, ನಟನಿಗೆ ದೈಹಿಕ ಹಿಂಸೆ ನೀಡಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಉನ್ನಯಿಸಲಾಯಿತು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರೇ ಸ್ವತಃ ಪರಿಶೀಲನೆ ನಡೆಸುವಂತೆ ಮನವಿ ಸಲ್ಲಿಸಲಾಗಿತ್ತು.

Add Asianetnews Kannada as a Preferred SourcegooglePreferred

ಅರ್ಜಿ ಭಾಗಶಃ ಮಾನ್ಯ

ಈ ಅರ್ಜಿಯನ್ನು 64ನೇ ಸೆಷನ್ಸ್ ಕೋರ್ಟ್‌ನ ನ್ಯಾಯಾಧೀಶ ಐ.ಪಿ. ನಾಯ್ಕ್ ಅವರ ಅಧ್ಯಕ್ಷತೆಯಲ್ಲಿ ವಿಚಾರಣೆ ನಡೆಸಲಾಯಿತು. ವಿಚಾರಣೆ ನಂತರ, ಕೋರ್ಟ್ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಮಾನ್ಯಗೊಳಿಸಿದೆ.

ಕೋರ್ಟ್ ನೀಡಿದ ಆದೇಶದ ಪ್ರಕಾರ, ಬೆಂಗಳೂರು ನಗರ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಯವರು ಜೈಲಿಗೆ ಭೇಟಿ ನೀಡಿ ಅಲ್ಲಿ ಇರುವ ಸೌಲಭ್ಯಗಳ ಸ್ಥಿತಿಯನ್ನು ಪರಿಶೀಲಿಸಿ ವರದಿ ಸಲ್ಲಿಸಬೇಕೆಂದು ನಿರ್ದೇಶಿಸಲಾಗಿದೆ. ಈ ಪರಿಶೀಲನಾ ವರದಿ ಅಕ್ಟೋಬರ್ 18ರೊಳಗೆ ಕೋರ್ಟ್‌ಗೆ ಸಲ್ಲಿಸಬೇಕೆಂದು ಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ.

ಕನಿಷ್ಠ ಸೌಲಭ್ಯ ಇಲ್ಲವೆಂದು ವಾದ

ಇದಕ್ಕೂ ಪ್ರತಿಕ್ರಿಯಿಸಿದ ಜೈಲು ಅಧಿಕಾರಿಗಳು, “ಕೋರ್ಟ್ ಆದೇಶದಂತೆ ಅಗತ್ಯ ಸೌಲಭ್ಯಗಳನ್ನು ಈಗಾಗಲೇ ಒದಗಿಸಲಾಗಿದೆ” ಎಂದು ತಿಳಿಸಿದ್ದಾರೆ. ಆದರೆ ದರ್ಶನ್ ಪರ ವಕೀಲರು, ಜೈಲು ಅಧಿಕಾರಿಗಳ ಹೇಳಿಕೆಯನ್ನು ತಳ್ಳಿಹಾಕಿ, “ವಾಸ್ತವದಲ್ಲಿ ಜೈಲಿನೊಳಗೆ ಕನಿಷ್ಠ ಸೌಲಭ್ಯವೂ ಸರಿಯಾಗಿ ನೀಡಲಾಗುತ್ತಿಲ್ಲ” ಎಂದು ವಾದಿಸಿದ್ದಾರೆ.

ದರ್ಶನ್ ಪರ ವಕೀಲರು ಉನ್ನಯಿಸಿರುವ ದೈಹಿಕ ಹಿಂಸೆ ಆರೋಪಗಳು ಪ್ರಕರಣಕ್ಕೆ ಮತ್ತಷ್ಟು ತೀವ್ರತೆ ನೀಡಿವೆ. ಈ ಹಿನ್ನೆಲೆಯಲ್ಲಿ, ನ್ಯಾಯಾಲಯದ ನಿರ್ದೇಶನದಂತೆ ಕಾನೂನು ಸೇವಾ ಪ್ರಾಧಿಕಾರದ ತಂಡ ಜೈಲಿನ ಪರಿಶೀಲನೆ ನಡೆಸಲಿದ್ದು, ಸಲ್ಲಿಸಲಿರುವ ವರದಿಯ ಆಧಾರದ ಮೇಲೆ ಮುಂದಿನ ವಿಚಾರಣೆ ನಡೆಯಲಿದೆ.

  • ದರ್ಶನ್ ಅರ್ಜಿ — ಸಿಆರ್ಪಿಸಿ 310 ಅಡಿ
  • ಹಾಸಿಗೆ–ದಿಂಬು ಸೇರಿದಂತೆ ಸೌಲಭ್ಯ ಕೊರತೆ
  • ದೈಹಿಕ ಹಿಂಸೆ ಆರೋಪ
  • ಕೋರ್ಟ್ ಭಾಗಶಃ ಅನುಮತಿ
  • ಕಾನೂನು ಸೇವಾ ಪ್ರಾಧಿಕಾರದ ಪರಿಶೀಲನೆ ಆದೇಶ
  • ಅ.18ರೊಳಗೆ ವರದಿ ಸಲ್ಲಿಕೆ ಸೂಚನೆ