02:55 PM (IST) Jan 21

ಕರ್ನಾಟಕದ ರತ್ನ ಸಿದ್ಧಗಂಗಾ ಶ್ರೀ ಅಗಲಿಕೆಗೆ ಮೋದಿ ಸೇರಿದಂತೆ ಹಲವು ಗಣ್ಯರ ಕಂಬನಿ

ಕರ್ನಾಟಕದ ರತ್ನ ಸಿದ್ದಗಂಗಾ ಶ್ರೀ ಅಗಲಿಕೆಗೆ ಗಣ್ಯರು ಕಂಬನಿ ಮಿಡಿದಿದ್ದಾರೆ. ಯಾರೆಲ್ಲ ಹೇಗೆ ನಡೆದಾಡುವ ದೇವರನ್ನು ಸ್ಮರಿಸಿಕೊಂಡಿದ್ದಾರೆ ನೋಡಿ.

ಕರ್ನಾಟಕದ ರತ್ನ ಸಿದ್ಧಗಂಗಾ ಶ್ರೀ ಅಗಲಿಕೆಗೆ ಮೋದಿ ಸೇರಿದಂತೆ ಹಲವು ಗಣ್ಯರ ಕಂಬನಿ

02:53 PM (IST) Jan 21

ಶತಮಾನದ ಸಂತ ಸಿದ್ಧಗಂಗಾ ಶ್ರೀಗಳ ನೆನಪು-ಮೆಲುಕು

ತುಮಕೂರು ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿ ಶಿವೈಕ್ಯರಾಗಿದ್ದಾರೆ. ಈಗಾಗಲೇ ಚಿತ್ರೋದ್ಯಮ ಮಂಗಳವಾರದಂದು ಬಂದ್ ಘೋಷಿಸಿದೆ. ಸಿನಿಮಾ ನಟ, ನಟಿಯರು 'ಕಾಯಕಯೋಗಿಯ' ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ

ಶ್ರೀಗಳು ಶಿವೈಕ್ಯ: ಚಿತ್ರರಂಗ ಕಂಬನಿ ಮಿಡಿದಿದ್ದು ಹೀಗೆ

02:50 PM (IST) Jan 21

ಶ್ರೀಗಳು ಶಿವೈಕ್ಯ: ಪ್ರಧಾನಿ ಮೋದಿ ಸಂತಾಪ, ಆಗಮನ

ಶ್ರೀಗಳು ಶಿವೈಕ್ಯರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಇನ್ನು ನಾಳೆ ಮಂಗಳವಾರ ಶ್ರೀಗಳ ಅಂತಿಮ ದರ್ಶನ ಪಡೆಯಲು ಪ್ರಧಾನಿ ನರೇಂದ್ರ ಮೋದಿ ಆಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.

HH Dr. Sree Sree Sree Sivakumara Swamigalu remained at the forefront of ensuring better healthcare and education facilities for the marginalised.

He represents the best of our traditions of compassionate service, spirituality and protecting the rights of the underprivileged. pic.twitter.com/Tp6o5ULU2d

— Narendra Modi (@narendramodi) January 21, 2019

I have had the privilege to visit the Sree Siddaganga Mutt and receive the blessings of His Holiness Dr. Sree Sree Sree Sivakumara Swamigalu.

The wide range of community service initiatives being done there are outstanding and are at an unimaginably large scale. pic.twitter.com/wsmRp2cERd

— Narendra Modi (@narendramodi) January 21, 2019
02:39 PM (IST) Jan 21

‘’ನಡೆದಾಡುತ್ತಿದ್ದ ಬಸವಣ್ಣ’’ರಿಗೆ ಸಿದ್ದರಾಮಯ್ಯ ನಮನ

ಡಾ.ಶ್ರೀ ಶಿವಕುಮಾರ ಸ್ವಾಮಿಗಳ ಲಿಂಗೈಕ್ಯದಿಂದ ನಾನು ಆಘಾತಕ್ಕೀಡಾಗಿದ್ದೇನೆ.
ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ದು:ಖತಪ್ತ ಮನಸ್ಸಿನಿಂದ ಪ್ರಾರ್ಥಿಸುತೇನೆ. ದು:ಖದಲ್ಲಿರುವ ಸಮಸ್ತ ಭಕ್ತಾಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ.#DrShivakumaraswamijeepic.twitter.com/NJFf3slO2F

— Siddaramaiah (@siddaramaiah) January 21, 2019

ಇತ್ತೀಚಿನ ದಿನಗಳಲ್ಲಿ ಅವರ ಆರೋಗ್ಯದಲ್ಲಿ ನಡೆಯುತ್ತಿದ್ದ ಏರುಪೇರು ನಮ್ಮೆಲ್ಲರನ್ನೂ ಆತಂಕಕ್ಕೀಡುಮಾಡಿತ್ತು. ಇಂತಹದ್ದೊಂದು ದಿನ ಎದುರಾಗಬಹುದೆಂಬ ಭಯ ನಿಜವಾಗಿದೆ. ಸಾಧನೆಯ ಮೂಲಕ ಲೋಕವನ್ನೇ ಗೆದ್ದಿರುವ ಸ್ವಾಮಿಗಳು ಕೊನೆಗೂ ಸಾವನ್ನು ಗೆಲ್ಲಲಾಗದೆ ಶರಣಾಗಿ ನಮ್ಮನ್ನು ಅನಾಥರಾಗಿಸಿದ್ದಾರೆ.#DrShivkumaraswamijipic.twitter.com/oPero9hPfk

— Siddaramaiah (@siddaramaiah) January 21, 2019

ನಾವು ಯಾರೂ ಬಸವಣ್ಣನವರನ್ನು ಕಣ್ಣಾರೆ ನೋಡಿಲ್ಲ, ನಾನು ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳಲ್ಲಿ ಬಸವಣ್ಣನನ್ನು ಕಾಣುತ್ತಿದ್ದೆ. ಅವರನ್ನು ‘’ನಡೆದಾಡುವ ದೇವರು’’ ಎನ್ನುತ್ತಾರೆ. ನನ್ನ ಪಾಲಿಗೆ ಅವರು ‘’ನಡೆದಾಡುತ್ತಿದ್ದ ಬಸವಣ್ಣ’’ ಆಗಿದ್ದರು.#DrShivakumarswamijipic.twitter.com/y30gD2KYwL

— Siddaramaiah (@siddaramaiah) January 21, 2019
02:35 PM (IST) Jan 21

ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ಅಂತಿಮ ದರ್ಶನ

24 ಗಂಟೆಗಳ ಕಾಲ ಸಿದ್ಧಗಂಗಾ ಶ್ರೀಗಳ ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗಿದೆ. ಸಿದ್ಧಗಂಗಾ ಮಠದ ಗೋಸಲ ಸಿದ್ದೇಶ್ವರ ವೇದಿಕೆಯಲ್ಲಿ ನಾಳೆ ಮಧ್ಯಾಹ್ನ 03 ಗಂಟೆಯವರೆಗೆ ಅಂತಿಮ ದರ್ಶನ. 

02:31 PM (IST) Jan 21

ಸಿದ್ಧಗಂಗಾ ಮಠಕ್ಕೆ ನರೇಂದ್ರ ಮೋದಿ ಆಗಮನ?

ಶ್ರೀಗಳು ಶಿವೈಕ್ಯರಾಗಿದ್ದು, ನಾಳೆ ಮಂಗಳವಾರ ಪ್ರಧಾನಿ ನರೇಂದ್ರ ಮೋದಿ ತುಮಕೂರು ಸಿದ್ಧಗಂಗಾ ಮಠಕ್ಕೆ ಆಗಮಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ. 

02:30 PM (IST) Jan 21

ಶ್ರೀಗಳ ಶಿವೈಕ್ಯ: ಚಿತ್ರೋದ್ಯಮ ಬಂದ್

ತುಮಕೂರು ಸಿದ್ಧಗಂಗಾ ಶ್ರೀಗಳು ಶಿವೈಕ್ಯರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ಮಂಗಳವಾರ ಚಿತ್ರೋದ್ಯಮ ಬಂದ್ ಘೋಷಿಸಲಾಗಿದೆ. 

02:28 PM (IST) Jan 21

ಶ್ರೀಗಳ ಶಿವೈಕ್ಯಕ್ಕೆ ವಿ. ಸೋಮಣ್ಣ ಕಣ್ಣೀರು

ಶ್ರೀಗಳ ಶಿವೈಕ್ಯಕ್ಕೆ ವಿ. ಸೋಮಣ್ಣ ಕಣ್ಣೀರು ಹರಿಸಿದ್ದಾರೆ. ಇತ್ತ ಎಚ್. ಡಿ ಕುಮಾರಸ್ವಾಮಿ ಹಾಗೂ ಬಿ. ಎಸ್ ಯಡಿಯೂರಪ್ಪ ಶ್ರೀಗಳಿಗೆ ಭಾರತ ರತ್ನ ನೀಡಲೇಬೆಖು ಎಂದು ಮನವಿ ಮಾಡಿಕೊಂಡಿದ್ದಾರೆ.

02:22 PM (IST) Jan 21

ಶ್ರೀ ಲಿಂಗೈಕ್ಯ : ಜ.22 ರಂದು ರಾಜ್ಯಾದ್ಯಂತ ಸರ್ಕಾರಿ ರಜೆ

02:16 PM (IST) Jan 21

ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಶ್ರೀಗಳು ಲಿಂಗೈಕ್ಯರಾಗಿದ್ದು, ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ನಾಡಿನಾದ್ಯಂತ 3 ದಿನ ಶೋಕಾಚರಣೆ. 

02:13 PM (IST) Jan 21

ಶ್ರೀಗಳ ಶಿವಸಾಜ್ಯ ಪ್ರಕಟಿಸಿದ ಸಿಎಂ ಕುಮಾರಸ್ವಾಮಿ

ಎಚ್. ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿಯನ್ನುದ್ದೆಶಿಸಿ ಮಾತನಾಡುತ್ತಾ 'ಶಿವಕುಮಾರ ಸ್ವಾಮೀಜಿಗಳು ಸೋಮವಾರ 11.45ಕ್ಕೆ ಶಿವೈಕ್ಯರಾಗಿರುವುದನ್ನು ವೈದ್ಯರು ಅಧಿಕೃತವಾಗಿ ಘೋಷಿಸಿದ್ದಾರೆ. ಭಕ್ತರು ಅವರ ಅಂತಿಮ ದರ್ಶನ ಪಡೆಯಬೇಕಾದರೆ ಗೌರವ ಸಲ್ಲಿಸುವುದು ನಮ್ಮ ಕರ್ತವ್ಯ. ಇಲ್ಲಿ ಎಲ್ಲಾ ಕ್ಷೇತ್ರದ ಮಠಾಧೀಶರು, ಸಿದ್ಧಗಂಗಾ ಮಠದ ಕಿರಿಯ ಶ್ರೀಗಳು, ಬಿ. ಎಸ್ ಯಡಿಯೂರಪ್ಪನವರು ಸೇರಿ ನಡೆಸಿದ ತುರ್ತು ಸಭೆಯಲ್ಲಿ ನಾಳೆ ಮಧ್ಯಾಹ್ನ 3 ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಲ್ಲರೂ ಶಾಂತಿಯಿಂದ ಅಂತಿಮ ದರ್ಶನ ಪಡೆಯಬೇಕಾಗಿದೆ ಎಂದು ಮನವಿ ಮಾಡಿಕೊಂಡಿದ್ದಾರೆ.

02:06 PM (IST) Jan 21

ಇಹಲೋಕ ತ್ಯಜಿಸಿದ 'ಕಾಯಕಯೋಗಿ'

ನಾಡಿನ ನಡೆದಾಡುವ ದೇವರೆಣಂದೇ ಕರೆಯಲಾಗುತ್ತಿದ್ದ ಪರಮಪೂಜ್ಯ ಶ್ರೀ ಸಿದ್ಧಗಂಗಾ ಶ್ರೀಗಳು ಶಿವೈಕ್ಯರಾಗಿದ್ದಾರೆ.

01:47 PM (IST) Jan 21

ಸಿದ್ಧಗಂಗಾ ಮಠಕ್ಕೆ ಹೂಗಳಿಂದ ಅಲಂಕೃತ ಪಲ್ಲಕ್ಕಿ

ಸಿದ್ಧಗಂಗಾ ಮಠಕ್ಕೆ ಹೂಗಳಿಂದ ಪಲ್ಲಕ್ಕಿಯನ್ನೂ ತರಲಾಗಿದೆ. . 

01:38 PM (IST) Jan 21

ತುಮಕೂರು ಮಠದ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ

ತುಮಕೂರು ಮಠದ ಶಾಲಾ- ಕಾಲೇಜುಗಳಿಗೆ ರಜೆ ಘೋಷಣೆ. ತುಮಕೂರಿನಾದ್ಯಂತ ಅಘೋಷಿತ ಬಂದ್. ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ ವರ್ತಕರು. ತುಮಕೂರು ಮಠ ಹಾಗೂ ನಗರದಾದ್ಯಂತ ನೀರವ ಮೌನ.

01:33 PM (IST) Jan 21

ಸಿದ್ಧಗಂಗಾ ಮಠದ ಆವರಣದಲ್ಲಿ ಬಿಗಿ ಭದ್ರತೆ

ಶ್ರೀಗಳ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಭಕ್ತರನ್ನು ಆತಂಕಕ್ಕೀಡು ಮಾಡಿದೆ. ಶ್ರೀಗಳ ದರ್ಶನ ಪಡೆಯಲು ಭಕ್ತ ಸಾಗರ ಮಠದತ್ತ ಆಗಮಿಸುತ್ತಿದ್ದು, ಆವರಣದ ಸುತ್ತ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಮಠಕ್ಕೆ ತಲುಪಿರುವ ಕುಮಾರಸ್ವಾಮಿ ತುರ್ತು ಸಭೆ ನಡೆಸುತ್ತಿದ್ದಾರೆ. 

01:17 PM (IST) Jan 21

15 ನಿಮಿಷಗಳಲ್ಲಿ ಶ್ರೀಗಳ ಆರೋಗ್ಯ ಕುರಿತ ಸುದ್ದಿಗೋಷ್ಠಿ

ಸಿಎಂ ಕುಮಾರಸ್ವಾಮಿ ತುಮಕೂರು ಸಿದ್ಧಗಂಗಾ ಮಠಕ್ಕೆ ತೆರಳಿದ್ದು, ವೈದ್ಯರು ಹಾಗೂ ಕಿರಿಯ ಶ್ರೀಗಳೊಂದಿಗೆ ಸಭೆ ನಡೆಸುತ್ತಿದ್ದಾರೆ. ಇನ್ನು 15-20 ನಿಮಿಷಗಳೊಳಗೆ ಶ್ರೀಗಳ ಆರೋಗ್ಯಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಯಲಿದೆ. 

01:03 PM (IST) Jan 21

ಸಿದ್ಧಗಂಗಾ ಮಠದತ್ತ ಎಚ್. ಡಿ ಕುಮಾರಸ್ವಾಮಿ

ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವ ಮುಖ್ಯಮಂತ್ರಿ ಎಚ್. ಡಿ ಕುಮಾರಸ್ವಾಮಿ ತುಮಕೂರಿನ ಸಿದ್ಧಗಂಗಾ ಮಠದತ್ತ ಆಗಮಿಸುತ್ತಿದ್ದಾರೆ

12:45 PM (IST) Jan 21

ಕಿರಿಯ ಶ್ರೀಗಳೊಂದಿಗೆ ಬಿಎಸ್‌ವೈ ಚರ್ಚೆ

ತುಮಕೂರು ಸಿದ್ಧಗಂಗಾ ಮಠದಲ್ಲಿ ಕಿರಿಯ ಶ್ರೀಗಳೊಂದಿಗೆ ಬಿಎಸ್‌ವೈ ಚರ್ಚೆ ಆರಂಭಿಸಿದ್ದಾರೆ. ಶ್ರಿಗಳ ಆರೋಗ್ಯ ಕ್ಷೀಣಿಸುತ್ತಿರುವುದರಿಂದ ಆತಂಕಗೊಂಡಿರುವ ಕಿರಿಯ ಶ್ರೀಗಳು 

12:34 PM (IST) Jan 21

ಕಾಂಗ್ರೆಸ್ ಶಾಸಕಾಂಗ ಸಭೆ ರದ್ದು: ರೆಸಾರ್ಟ್ ರಾಜಕಾರಣ ಅಂತ್ಯ

ಶ್ರೀಗಳ ಅನಾರೋಗ್ಯ ಹಿನ್ನೆಲೆ ಕಾಂಗ್ರೆಸ್ ಶಾಸಕಾಂಗ ಸಭೆ ರದ್ದುಗೊಳಿಸಲಾಗಿದೆ. ರೆಸಾರ್ಟ್ ರಾಜಕಾರಣ ಕೂಡಾ ಅಂತ್ಯಗೊಂಡಿದ್ದು, ಕಾಂಗ್ರೆಸ್ ಶಾಸಕರು ತುಮಕೂರು ಮಠದತ್ತ ಹೊರಟಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಸಿದ್ಧಗಂಗಾ ಮಠಕ್ಕೆ ಭೇಟಿ ಮಾಡುವ ಸಾಧ್ಯತೆ ಇದೆ.

12:14 PM (IST) Jan 21

ಕ್ಷಣ ಕ್ಷಣಕ್ಕೂ ಕ್ಷೀಣಿಸುತ್ತಿದೆ ಶ್ರೀಗಳ ಆರೋಗ್ಯ

ಶ್ರೀಗಳ ಆರೋಗ್ಯದ ಕುರಿತಾಗಿ ಡಾ| ಪರಮೇಶ್ ಮಾಹಿತಿ ನೀಡಿದ್ದು, 'ಶ್ರೀಗಳ ಆರೋಗ್ಯ ಬಹಳ ಗಂಭೀರವಾಗಿದೆ. ಆದರೂ ಚಿಕಿತ್ಸೆ ಮುಂದುವರೆಸಿದ್ದು, ಎಲ್ಲಾ ಪ್ರಯತ್ನಗಳನ್ನು ಮುಂದುವರೆಸಿದ್ದೇವೆ. ಬೆಂಗಳೂರಿನಿಂದ ಬಿಜಿಎಸ್‌ ಆಸ್ಪತ್ರೆಯ ವೈದ್ಯರ ತಂಡವೂ ಬರುತ್ತಿದೆ. ಡಾ. ರೆಲಾರವರ ಸಲಹೆಯನ್ನೂ ಪಡೆಯುತ್ತಿದ್ದೇವೆ. ಪ್ರೋಟೀನ್ ಅಂಶವೂ ಕುಸಿದಿದೆ. ಮುಂದಿನ 2-3 ಗಂಟೆಯೊಳಗೆ ಶ್ರೀಗಳ ಆರೋಗ್ಯದ ಕುರಿತಾಗಿ ಸ್ಪಷ್ಟವಾಗಿ ತಿಳಿಯಲಿದೆ' ಎಂದಿದ್ದಾರೆ.