ಖಾನಾಪುರ ತಾಲೂಕಿನ ದಟ್ಟಾರಣ್ಯದ ಕೊಂಗಳಾ ಗ್ರಾಮದಲ್ಲಿ ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಚಟ್ಟದಲ್ಲಿ 8 ಕಿ.ಮೀ. ಆಸ್ಪತ್ರೆಗೆ ಸಾಗಿಸಲಾಗಿದೆ. ಮಳೆಯ ನಡುವೆಯೂ ಪಾಂಡ್ರಿ ನದಿ ದಾಟಿ ರೋಗಿಯನ್ನು ಕೊಂಡೊಯ್ದ ಘಟನೆ ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದಿದೆ.

ಬೆಳಗಾವಿ (ಆ.2): ಖಾನಾಪುರ ತಾಲೂಕಿನ ದಟ್ಟಾರಣ್ಯದಲ್ಲಿರುವ ಗ್ರಾಮಸ್ಥರು ಅನಾರೋಗ್ಯದಿಂದ ಬಳಲುತ್ತಿರುವ ರೋಗಿಗಳನ್ನು ಆಸ್ಪತ್ರಗೆ ಸಾಗಿಸಲು ಪರದಾಡುತ್ತಿದ್ದು, ತಾಲೂಕಿನ ಗುಂಜಿ ಹೋಬಳಿಯ ಕೊಂಗಳಾ ಗ್ರಾಮದ ರೋಗಿಯೊಬ್ಬರನ್ನು ಆಸ್ಪತ್ರೆಗೆ ಸಾಗಿಸಲು ಚಟ್ಟದ ಮೇಲೆ 8 ಕಿಮೀ ಸಾಗಿಸಿರುವ ಘಟನೆ ನಡೆದಿದೆ.

Add Asianetnews Kannada as a Preferred SourcegooglePreferred

ವೆಂಕಟ (52) ಎಂಬುವರು ಅನಾರೋಗ್ಯಿದಿಂದ ಬಳಲುತ್ತಿದ್ದರು. ಸುರಿಯುತ್ತಿರುವ ಮಳೆಯ ನಡುವೆಯೇ ಪಾಂಡ್ರಿ ನದಿ ಮೇಲೆ ಚಟ್ಟದ ಮೇಲೆ ರೋಗಿಯನ್ನು ಸಾಗಿಸಲಾಗಿದೆ.

ಇದನ್ನೂ ಓದಿ: ಪ್ರಿಯಕರನ ಜತೆ ಸೇರಿ ಪತಿಯನ್ನ ಕೊಂದು ಪಂಚಮಿ ಹಬ್ಬ ಮಾಡಿದ್ದ ಪತ್ನಿ! ಗಂಡ ಧರ್ಮಸ್ಥಳಕ್ಕೆ ಹೋಗಿದ್ದಾನೆಂದು ಕತೆ ಕಟ್ಟಿದ್ದ ಐನಾತಿ ಸಿಕ್ಕಿಬಿದ್ದಿದ್ದು ಹೇಗೆ?

ಈ ಘಟನೆ ಕುರಿತು ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌, ಅನಾರೋಗ್ಯದಿಂದ ಬಳುತ್ತಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲು ಗ್ರಾಮಸ್ಥರು ಹೊತ್ತುಕೊಂಡು ಸಾಗಿಸಿರುವುದು ನಮ್ಮ ಗಮನಕ್ಕೆ ಬಂದಿದೆ. ಇದು ಅರಣ್ಯ ಪ್ರದೇಶವಾಗಿದ್ದರಿಂದ ಇಲ್ಲಿ ಸರ್ಕಾರದ ಮಟ್ಟದಲ್ಲಿ ಯಾವುದೇ ಕೆಲಸ ಮಾಡಲು ಬಾರದು. ಕಾಡಂಚಿನಲ್ಲಿರುವ ಗ್ರಾಮಸ್ಥರಿಗೆ ಪುನರ್‌ವಸತಿ ಕಲ್ಪಿಸಲು ಜನರನ್ನು ಕಾಡಿನಿಂದ ಹೊರಗಡೆ ತರುವ ಕೆಲಸ ಮಾಡುತ್ತಿದ್ದೇವೆ. ಜನವಸತಿ ಕೇಂದ್ರಗಳಿಗೆ ಬಂದರೆ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದಿದ್ದಾರೆ.