ಸಿಂಧನೂರು ನಗರಸಭೆಯ ಪೌರಾಯುಕ್ತ ಮಂಜುನಾಥ ಗುಂಡೂರು ಅವರನ್ನು ಗಂಭೀರ ಆರೋಪ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನಾಲಯವು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. 

ರಾಯಚೂರು (ಮೇ.14): ಸಿಂಧನೂರು ನಗರಸಭೆಯ ಪೌರಾಯುಕ್ತ ಮಂಜುನಾಥ ಗುಂಡೂರು ಅವರನ್ನು ಗಂಭೀರ ಆರೋಪ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನಾಲಯವು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. 

Add Asianetnews Kannada as a Preferred SourcegooglePreferred

ವಿವಿಧ ಯೋಜನೆಗಳಲ್ಲಿ ಅವ್ಯವಹಾರ, ಸರ್ಕಾರದ ಹಣದ ದುರುಪಯೋಗ, ಅನಧಿಕೃತ ಕಟ್ಟಡಗಳಿಗೆ ಸಂಬಂಧಿಸಿದ ದೂರುಗಳು ಹಾಗೂ ತೆರಿಗೆ ವಸೂಲಾತಿಯ ದುರುಪಯೋಗ ಆರೋಪಗಳು ಅವರ ವಿರುದ್ಧ ಕೇಳಿಬಂದಿವೆ. ಈ ಸಂಬಂಧ ತುಮಕೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಮಂಜುನಾಥ ಗುಂಡೂರು ಅವರು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದ್ದು ಮತ್ತು ಕರ್ತವ್ಯಲೋಪಕ್ಕೆ ಒಳಗಾಗಿರುವುದು ಸಾಬೀತಾದ ಹಿನ್ನೆಲೆ ಅವರಿಗೆ 7 ದಿನಗಳ ಒಳಗೆ ಸಮಜಾಯಿಷಿ ಸಲ್ಲಿಸುವಂತೆ ನೋಟೀಸ್ ಜಾರಿಗೊಳಿಸಲಾಗಿದ್ದು, ತಕ್ಷಣದಿಂದ ಅಮಾನತುಗೊಳಿಸಲಾಗಿದೆ.

ತನಿಖೆಯ ಮುಂದಿನ ಹಂತದಲ್ಲಿ ಈ ಆರೋಪಗಳ ಬಗ್ಗೆ ಇನ್ನಷ್ಟು ವಿವರಗಳು ಬಹಿರಂಗಗೊಳ್ಳುವ ಸಾಧ್ಯತೆಯಿದೆ. 

ಅಕಾಲಿಕ ಮಳೆಯಿಂದ ಒಣಗಲು ಹಾಕಿದ್ದ ಭತ್ತ ಹಾಳು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ಮತ್ತು ಮಸ್ಕಿ ತಾಲೂಕುಗಳಲ್ಲಿ ಭಾರೀ ಅಕಾಲಿಕ ಮಳೆಯಿಂದಾಗಿ ರೈತರ ಜಮೀನುಗಳಲ್ಲಿ ಒಣಗಲು ಹಾಕಿದ್ದ ಭತ್ತಕ್ಕೆ ವ್ಯಾಪಕ ಹಾನಿಯಾಗಿದೆ. ಮಳೆನೀರಿನಿಂದ ಭತ್ತ ಕೊಳೆತು, ರೈತರು ಭಾರೀ ನಷ್ಟ ಅನುಭವಿಸಿದ್ದಾರೆ.


ಈ ಘಟನೆಯಿಂದ ಕಂಗಾಲಾದ ರೈತರು, ಹಾನಿಯಾದ ಭತ್ತಕ್ಕೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರೈತ ಸಂಘವು ಸರ್ಕಾರಕ್ಕೆ ತಕ್ಷಣದ ಕ್ರಮಕ್ಕಾಗಿ ಆಗ್ರಹಿಸಿ ಮನವಿ ಸಲ್ಲಿಸಿದೆ. ಸರ್ಕಾರದಿಂದ ತಕ್ಷಣದ ಸಹಾಯ ಮತ್ತು ಪರಿಹಾರದ ಕುರಿತು ರೈತರು ಕಾಯುತ್ತಿದ್ದಾರೆ.