ಸಿಂಧನೂರು ನಗರಸಭೆಯ ಪೌರಾಯುಕ್ತ ಮಂಜುನಾಥ ಗುಂಡೂರು ಅವರನ್ನು ಗಂಭೀರ ಆರೋಪ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನಾಲಯವು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. 

ರಾಯಚೂರು (ಮೇ.14): ಸಿಂಧನೂರು ನಗರಸಭೆಯ ಪೌರಾಯುಕ್ತ ಮಂಜುನಾಥ ಗುಂಡೂರು ಅವರನ್ನು ಗಂಭೀರ ಆರೋಪ ಹಿನ್ನೆಲೆಯಲ್ಲಿ ಪೌರಾಡಳಿತ ನಿರ್ದೇಶನಾಲಯವು ಅಮಾನತುಗೊಳಿಸಿ ಆದೇಶ ಹೊರಡಿಸಿದೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿವಿಧ ಯೋಜನೆಗಳಲ್ಲಿ ಅವ್ಯವಹಾರ, ಸರ್ಕಾರದ ಹಣದ ದುರುಪಯೋಗ, ಅನಧಿಕೃತ ಕಟ್ಟಡಗಳಿಗೆ ಸಂಬಂಧಿಸಿದ ದೂರುಗಳು ಹಾಗೂ ತೆರಿಗೆ ವಸೂಲಾತಿಯ ದುರುಪಯೋಗ ಆರೋಪಗಳು ಅವರ ವಿರುದ್ಧ ಕೇಳಿಬಂದಿವೆ. ಈ ಸಂಬಂಧ ತುಮಕೂರು ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರ ನೇತೃತ್ವದಲ್ಲಿ ನಡೆದ ತನಿಖೆಯಲ್ಲಿ ಮಂಜುನಾಥ ಗುಂಡೂರು ಅವರು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿದ್ದು ಮತ್ತು ಕರ್ತವ್ಯಲೋಪಕ್ಕೆ ಒಳಗಾಗಿರುವುದು ಸಾಬೀತಾದ ಹಿನ್ನೆಲೆ ಅವರಿಗೆ 7 ದಿನಗಳ ಒಳಗೆ ಸಮಜಾಯಿಷಿ ಸಲ್ಲಿಸುವಂತೆ ನೋಟೀಸ್ ಜಾರಿಗೊಳಿಸಲಾಗಿದ್ದು, ತಕ್ಷಣದಿಂದ ಅಮಾನತುಗೊಳಿಸಲಾಗಿದೆ.

ತನಿಖೆಯ ಮುಂದಿನ ಹಂತದಲ್ಲಿ ಈ ಆರೋಪಗಳ ಬಗ್ಗೆ ಇನ್ನಷ್ಟು ವಿವರಗಳು ಬಹಿರಂಗಗೊಳ್ಳುವ ಸಾಧ್ಯತೆಯಿದೆ. 

ಅಕಾಲಿಕ ಮಳೆಯಿಂದ ಒಣಗಲು ಹಾಕಿದ್ದ ಭತ್ತ ಹಾಳು

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ಮತ್ತು ಮಸ್ಕಿ ತಾಲೂಕುಗಳಲ್ಲಿ ಭಾರೀ ಅಕಾಲಿಕ ಮಳೆಯಿಂದಾಗಿ ರೈತರ ಜಮೀನುಗಳಲ್ಲಿ ಒಣಗಲು ಹಾಕಿದ್ದ ಭತ್ತಕ್ಕೆ ವ್ಯಾಪಕ ಹಾನಿಯಾಗಿದೆ. ಮಳೆನೀರಿನಿಂದ ಭತ್ತ ಕೊಳೆತು, ರೈತರು ಭಾರೀ ನಷ್ಟ ಅನುಭವಿಸಿದ್ದಾರೆ.


ಈ ಘಟನೆಯಿಂದ ಕಂಗಾಲಾದ ರೈತರು, ಹಾನಿಯಾದ ಭತ್ತಕ್ಕೆ ಸೂಕ್ತ ಪರಿಹಾರ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ರೈತ ಸಂಘವು ಸರ್ಕಾರಕ್ಕೆ ತಕ್ಷಣದ ಕ್ರಮಕ್ಕಾಗಿ ಆಗ್ರಹಿಸಿ ಮನವಿ ಸಲ್ಲಿಸಿದೆ. ಸರ್ಕಾರದಿಂದ ತಕ್ಷಣದ ಸಹಾಯ ಮತ್ತು ಪರಿಹಾರದ ಕುರಿತು ರೈತರು ಕಾಯುತ್ತಿದ್ದಾರೆ.