ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣಕ್ಕೆ ಸಾಕ್ಷಿಯಾಗಲಿದೆ ನಭೋಮಂಡಲ. 18 ವರ್ಷದ ಬಳಿಕ ಈ ಗ್ರಹಣ ಸಂಭವಿಸುತ್ತಿದ್ದು, ಚೂಡಾಮಣಿ ಸೂರ್ಯ ಗ್ರಹಣ ಎಂದು ಕರೆಯುತ್ತಾರೆ. ಗ್ರಹಣಕ್ಕೆ ರಾಜ್ಯದ ಬೇರೆ ಬೇರೆ ದೇವಸ್ಥಾನಗಳು ಹೇಗೆ ತಯಾರಿ ನಡೆಸಿವೆ ಎಂಬುದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..! 

ನಾಳೆ ಈ ವರ್ಷದ ಮೊದಲ ಸೂರ್ಯ ಗ್ರಹಣಕ್ಕೆ ಸಾಕ್ಷಿಯಾಗಲಿದೆ ನಭೋಮಂಡಲ. 18 ವರ್ಷದ ಬಳಿಕ ಈ ಗ್ರಹಣ ಸಂಭವಿಸುತ್ತಿದ್ದು, ಚೂಡಾಮಣಿ ಸೂರ್ಯ ಗ್ರಹಣ ಎಂದು ಕರೆಯುತ್ತಾರೆ. ಗ್ರಹಣಕ್ಕೆ ರಾಜ್ಯದ ಬೇರೆ ಬೇರೆ ದೇವಸ್ಥಾನಗಳು ಹೇಗೆ ತಯಾರಿ ನಡೆಸಿವೆ ಎಂಬುದರ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ..! 

Add Asianetnews Kannada as a Preferred SourcegooglePreferred

ಮಣ್ಣೆತ್ತಿನ ಅಮಾವಾಸ್ಯೆ ದಿನ ರಾಹುಗ್ರಸ್ಥ ಸೂರ್ಯ ಗ್ರಹಣ ಸಂಭವಿಸಲಿದೆ. ಧರ್ಮಸ್ಥಳ ಹಾಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗ್ರಹಣ ಸಂಬಂಧ ವಿಶೇಷ ಪೂಜೆಗಳನ್ನು ಹಮ್ಮಿಕೊಂಡಿಲ್ಲ. ಕುದ್ರೋಳಿ ಗೋಕರ್ಣನಾಥ ದೇಗುಲದಲ್ಲಿ ವಿಶೇಷ ಪೂಜೆ ಇಟ್ಟುಕೊಳ್ಳಲಾಗಿದೆ. ಭಕ್ತರಿಗೆ ದರ್ಶನಕ್ಕೂ ಅವಕಾಶ ಮಾಡಿಕೊಡಲಾಗುತ್ತದೆ. 

"

ನಾಡದೇವತೆ ಮೈಸೂರಿನ ಚಾಮುಂಡೇಶ್ವರಿ ದೇಗುಲದಲ್ಲಿಯೂ ವಿಶೇಷ ಪೂಜೆ ಇರುವುದಿಲ್ಲ. ಗ್ರಹಣ ಕಾಲದಲ್ಲಿ ಬಂದ್ ಆಗಿರುತ್ತದೆ. ಗ್ರಹಣ ಮೋಕ್ಷದ ನಂತರ ತೆರೆಯಲಾಗುತ್ತದೆ. ಕೊರೊನಾ ಹಿನ್ನಲೆಯಲ್ಲಿ ಶನಿವಾರ, ಭಾನುವಾರ ಭಕ್ತರಿಗೆ ಅವಕಾಶ ನಿಷೇಧಿಸಲಾಗಿದೆ. 

"

ಬೆಂಗಳೂರಿನ ಬುಲ್ ಟೆಂಪಲ್‌ನಲ್ಲಿ ಗ್ರಹಣದ ಬಳಿಕ ರುದ್ರಾಭಿಷೇಕ ನಡೆಯಲಿದೆ. ಸಂಜೆ 5 ಗಂಟೆ ನಂತರ ಭಕ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ.

"

ಉತ್ತರ ಭಾರತದ ಕಡೆ ಸೂರ್ಯ ಗ್ರಹಣ ಎಫೆಕ್ಟ್‌ ಹೆಚ್ಚಾಗಿದೆ ಎಂದು ಗವಿ ಗಂಗಾಧರೇಶ್ವರ ದೇವಸ್ಥಾನದ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದಾರೆ. ಗ್ರಹಣ ಪ್ರಯುಕ್ತ ವಿಶೇಷ ಪೂಜೆ ಇಟ್ಟುಕೊಳ್ಳಲಾಗಿದೆ. 

"