ತಿರುಪತಿ ಲಡ್ಡು ಪ್ರಸಾದ್ಕೆ ನಂದಿನಿ ತುಪ್ಪಕಳುಹಿಸುವಂತೆ ಅಯೋಧ್ಯೆಯ ಅಖಂಡ ಜ್ಯೋತಿ ಬೆಳಗಲು ರಾಜ್ಯದಿಂದ ನಂದಿನಿ ತುಪ್ಪಕಳುಹಿಸಿಕೊಡಲಾಗುತ್ತದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.

ಬೆಂಗಳೂರು(ಆ.18): ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯಲ್ಲಿ ವಿತರಿಸಲಾದ 1.50 ಲಕ್ಷ ರಘುಪತಿ ಲಡ್ಡು ಪ್ರಸಾದಕ್ಕೆ ನಂದಿನಿ ತುಪ್ಪ ಬಳಸಲಾಗಿತ್ತು. ಇದೀಗ ರಾಮ ಮಂದಿರ ನಿರ್ಮಾಣ ಸ್ಥಳದಲ್ಲಿ ಸ್ಥಾಪಿಸಲಾಗಿರುವ ಅಖಂಡ ಜ್ಯೋತಿಗೂ ನಮ್ಮ ರಾಜ್ಯದ ನಂದಿನಿ ತುಪ್ಪ ಕಳುಹಿಕೊಡಲಾಗಿದೆ ಎಂದು ಕೆಎಂಎಫ್‌ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ವರ್ಷ ಪಟನಾದ ಮಹಾವೀರ ಮಂದಿರ ಟ್ರಸ್ಟ್‌, ಹನುಮಾನ್‌ ದೇವಾಲಯಕ್ಕೆ ಲಡ್ಡು ತಯಾರಿಸಲು ಸುಮಾರು 35 ಸಾವಿರ ಕೆಜಿ ನಂದಿನಿ ತುಪ್ಪವನ್ನು ಕೆಎಂಎಫ್‌ನಿಂದ ಖರೀದಿಸಿದೆ. ಅದೇ ತುಪ್ಪವನ್ನು ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯ ಪ್ರಸಾದ (ರಾಮ ಜನ್ಮ ಭೂಮಿ ಪೂಜಾ ಪ್ರಸಾದಂ) ತಯಾರಿಸಲು ಬಳಕೆ ಮಾಡಿದೆ.

ಸುದೀರ್ಘ ದಿನ ಪೂರೈಸಿದ ಕಾಂಗ್ರೇಸೇತರ ಪ್ರಧಾನಿ; ಮತ್ತೊಂದು ದಾಖಲೆ ಬರೆದ ಮೋದಿ!...

ಇದೀಗ ಶ್ರೀ ಮಹಾವೀರ ಮಂದಿರ ಟ್ರಸ್ಟ್‌ ರಾಮ ಮಂದಿರ ನಿರ್ಮಾಣದ ಸ್ಥಳದಲ್ಲಿ ಸ್ಥಾಪಿಸಲಾಗಿರುವ ಅಖಂಡ ಜ್ಯೋತಿ ವರ್ಷಾನುಗಟ್ಟಲೆ ನಂದಿ ಹೋಗದಂತೆ ನಿರಂತರವಾಗಿ ಬೆಳಗಲು ನಂದಿನಿ ತುಪ್ಪವನ್ನು ನೀಡುತ್ತಿದೆ. ಈ ಹಿನ್ನೆಲೆಯಲ್ಲಿ ಪುನಃ ಎಂಟು ಮೆಟ್ರಿಕ್‌ ಟನ್‌( 8 ಸಾವಿರ ಕೆಜಿ) ನಂದಿನಿ ತುಪ್ಪವನ್ನು ಕೆಎಂಎಫ್‌ ಆಗಸ್ಟ್‌ ತಿಂಗಳಲ್ಲಿ ಕಳುಹಿಸಿ ಕೊಟ್ಟಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಮಮಂದಿರ 1000 ವರ್ಷ ಆದರೂ ಗಟ್ಟಿಯಾಗಿರುತ್ತೆ!...

ವಿಶೇಷವೆಂದರೆ ಹನುಮಾನ್‌ ದೇವಾಲಯದ ಪ್ರಸಾದವೂ ಕೂಡ ನಂದಿನಿ ತುಪ್ಪದಿಂದಲೇ ತಯಾರಾಗುತ್ತಿದೆ. ಈ ದೇವಾಲಯದ ವ್ಯವಸ್ಥಾಪಕ ಶೇಷಾದ್ರಿ ಅವರು ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನವರಾಗಿದ್ದಾರೆ. ಇವರು ಈ ಮೊದಲು ತಿರುಪತಿಯಲ್ಲಿ ಕೆಲಸ ಮಾಡುತ್ತಿದ್ದರು. ತಿರುಪತಿ ಲಡ್ಡು ಮಾಡಲು ನಂದಿನಿ ತುಪ್ಪ ಉಪಯೋಗಿಸುವುದರ ಬಗ್ಗೆ ಮಾಹಿತಿ ಇದ್ದ ಅವರು, ನಂದಿನಿ ತುಪ್ಪ ಬಳಸಲು ತೀರ್ಮಾನಿಸಿದ್ದು, ರಾಮ ಮಂದಿರ ನಿರ್ಮಾಣದ ಭೂಮಿ ಪೂಜೆಯ ಪ್ರಸಾದಕ್ಕೂ ನಂದಿನಿ ತುಪ್ಪ ಬಳಸಿದ್ದರು. ಹಾಗೆಯೇ ಅಖಂಡ ಜ್ಯೋತಿಗೂ ನಂದಿನಿ ತುಪ್ಪವೇ ಬಳಕೆಯಾಗಲಿದೆ ಎಂದು ತಿಳಿಸಿದ್ದಾರೆ.