ರಾಜ್ಯದಲ್ಲಿ 114 ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆ ಗುರಿ: ಕೃಷಿ ಇಲಾಖೆಯಿಂದ ಬೀಜ ದಾಸ್ತಾನು

Synopsis
ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 114.40 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗುವ ಗುರಿ ಹೊಂದಿದ್ದು ಕೃಷಿ ಇಲಾಖೆಯು ಬಿತ್ತನೆ ಬೀಜ, ರಸಗೊಬ್ಬರದ ಅಗತ್ಯ ದಾಸ್ತಾನು ಮಾಡಿಕೊಂಡಿದೆ. 4.63 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಕ್ಕೆ ಬೇಡಿಕೆ ಇದೆ.
ಸಿದ್ದು ಚಿಕ್ಕಬಳ್ಳೇಕೆರೆ
ಬೆಂಗಳೂರು (ಮೇ.09): ಪ್ರಸಕ್ತ ಸಾಲಿನಲ್ಲಿ ರಾಜ್ಯದಲ್ಲಿ 114.40 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಬಿತ್ತನೆಯಾಗುವ ಗುರಿ ಹೊಂದಿದ್ದು ಕೃಷಿ ಇಲಾಖೆಯು ಬಿತ್ತನೆ ಬೀಜ, ರಸಗೊಬ್ಬರದ ಅಗತ್ಯ ದಾಸ್ತಾನು ಮಾಡಿಕೊಂಡಿದೆ. 4.63 ಲಕ್ಷ ಕ್ವಿಂಟಲ್ ಬಿತ್ತನೆ ಬೀಜಕ್ಕೆ ಬೇಡಿಕೆ ಇದೆ. ಆದರೆ 5.99 ಲಕ್ಷ ಕ್ವಿಂಟಲ್ ದಾಸ್ತಾನಿರುವುದು ವಿಶೇಷವಾಗಿದೆ. ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿಗೆ ವಿವಿಧ ಬೆಳೆಗಳ 4,63,958 ಕ್ವಿಂಟಲ್ ಬಿತ್ತನೆ ಬೀಜದ ಅವಶ್ಯಕತೆ ಇದೆ. ಈ ಪೈಕಿ 4,03,645 ಕ್ವಿಂಟಲ್ ಪ್ರಮಾಣಿತ ಬಿತ್ತನೆ ಬೀಜ ದಾಸ್ತಾನಿದೆ. ಅಲ್ಲದೆ, 1,95,457 ಕ್ವಿಂಟಲ್ ನಿಜಚೀಟಿ ಸೇರಿ ಒಟ್ಟಾರೆ 5,99,102 ಕ್ವಿಂಟಲ್ ಬಿತ್ತನೆ ಬೀಜ ಲಭ್ಯವಿದೆ. ಭತ್ತ, ರಾಗಿ, ಹೆಸರು, ತೊಗರಿ, ಉದ್ದು, ಅಲಸಂದೆ ಮತ್ತಿತರ ಬಿತ್ತನೆ ಬೀಜಗಳಿಗೆ ಯಾವುದೇ ಕೊರತೆ ಉಂಟಾಗುವುದಿಲ್ಲ ಎಂದು ಕೃಷಿ ಇಲಾಖೆ ಮೂಲಗಳು ಸ್ಪಷ್ಟಪಡಿಸಿವೆ.
‘2025-26ನೇ ಸಾಲಿನ ಮುಂಗಾರು ಹಂಗಾಮಿಗೆ ರಾಜ್ಯದಲ್ಲಿ ರಸಗೊಬ್ಬರದ ಕೊರತೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಏಪ್ರಿಲ್ನಿಂದ ಸೆಪ್ಟೆಂಬರ್ವರೆಗೂ 4 ಲಕ್ಷ ಮೆಟ್ರಿಕ್ ಟನ್ ಡಿಎಪಿ, 1.17 ಲಕ್ಷ ಮೆಟ್ರಿಕ್ ಟನ್ ಯೂರಿಯಾ, 9 ಲಕ್ಷ ಮೆಟ್ರಿಕ್ ಟನ್ ಕಾಂಪ್ಲೆಕ್ಸ್ ಸೇರಿ 26.77 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರದ ಅವಶ್ಯಕತೆ ಇದೆ. ಸದ್ಯ ನಮ್ಮಲ್ಲಿ ಒಟ್ಟಾರೆ 10.87 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ದಾಸ್ತಾನಿದೆ. ಕೇಂದ್ರದಿಂದ ಪೂರೈಕೆಯೂ ಆಗಲಿದ್ದು, ಯಾವುದೇ ಸಮಸ್ಯೆ ಉಂಟಾಗುವುದಿಲ್ಲ’ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ವೃಷಭಾವತಿ ನೀರು ರೈತರಿಗೆ ಕಾಂಗ್ರೆಸ್ ಸರ್ಕಾರದ ಕೊಡುಗೆ: ಡಿ.ಕೆ.ಶಿವಕುಮಾರ್
160.74 ಲಕ್ಷ ಟನ್ ಉತ್ಪಾದನೆ ಅಂದಾಜು: ಮುಂಗಾರಿನಲ್ಲಿ 82.50 ಲಕ್ಷ ಹೆಕ್ಟೇರ್, ಹಿಂಗಾರಿನಲ್ಲಿ 25.50 ಲಕ್ಷ ಹೆಕ್ಟೇರ್ ಮತ್ತು ಬೇಸಿಗೆ ಹಂಗಾಮಿನಲ್ಲಿ 6.40 ಲಕ್ಷ ಹೆಕ್ಟೇರ್ ಸೇರಿ ಒಟ್ಟಾರೆ 114.40 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಕೃಷಿ ಬೆಳೆಗಳ ಬಿತ್ತನೆ ನಿರೀಕ್ಷಿಸಲಾಗಿದೆ. 148.48 ಲಕ್ಷ ಟನ್ ಆಹಾರ ಧಾನ್ಯ ಮತ್ತು 12.26 ಲಕ್ಷ ಟನ್ ಎಣ್ಣೆ ಕಾಳುಗಳ ಉತ್ಪಾದನೆ ಸೇರಿ ಒಟ್ಟಾರೆ 160.74 ಲಕ್ಷ ಟನ್ ಆಹಾರ ಧಾನ್ಯ ಉತ್ಪಾದನಾ ಗುರಿ ಹೊಂದಲಾಗಿದೆ.
ಬೆಳೆಗಳು ವಿಸ್ತೀರ್ಣ(ಲಕ್ಷ ಹೆಕ್ಟೇರ್) ಉತ್ಪಾದನೆ (ಲಕ್ಷ ಕ್ವಿಂಟಾಲ್ )
ಏಕದಳ ಧಾನ್ಯಗಳು 51.35125.99
ದ್ವಿದಳ ಧಾನ್ಯಗಳು 33.8622.49
ಎಣ್ಣೆ ಕಾಳುಗಳು 12.4112.26
ಹತ್ತಿ 8.1724.52 ಲಕ್ಷ
ಕಬ್ಬು7.89757.58
ತಂಬಾಕು-ವಿಎಫ್ ಸಿ0.710.62
ಸಬರ್ಬನ್ ರೈಲು: ಮಲ್ಲಿಗೆ ಮಾರ್ಗ ಕೆಲಸ ಬಂದ್, ಕಾರಣವೇನು?
ಈ ಬಾರಿ ಉತ್ತಮ ಮಳೆಯಾಗಿ ಆಹಾರ ಧಾನ್ಯಗಳ ಉತ್ಪಾದನೆ ಅಧಿಕವಾಗುವ ನಿರೀಕ್ಷೆ ಇದೆ. ರೈತರಿಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಯಾವುದೇ ತೊಂದರೆ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಧಿಕಾರಿಗಳಿಗೆ ಈ ಬಗ್ಗೆ ಸ್ಪಷ್ಟ ಸೂಚನೆ ನೀಡಲಾಗಿದೆ.
-ಎನ್.ಚಲುವರಾಯಸ್ವಾಮಿ, ಕೃಷಿ ಸಚಿವ