Asianet Suvarna News Asianet Suvarna News

Ghar Wapsi:ವಿವಾದದ ಕಿಚ್ಚಿ ಹೆಚ್ಚಾಗುತ್ತಿದ್ದಂತೆಯೇ ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ

 * ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿವದಾತ್ಮಕ ಹೇಳಿಕೆ ಪ್ರಕರಣ
* ಹೇಳಿಕೆ ಹಿಂಪಡೆದ ತೇಜಸ್ವಿ ಸೂರ್ಯ
* ವಿವಾದದ ಕಿಚ್ಚಿ ಹೆಚ್ಚಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯ

Tejasvi Surya withdraws call to bring Muslims, Christians back to Hinduism rbj
Author
Bengaluru, First Published Dec 27, 2021, 6:21 PM IST

ಬೆಂಗಳೂರು, (ಡಿ.27): ಮುಸ್ಲಿಂ(Muslim), ಕ್ರೈಸ್ತರನ್ನು (Christian) ವಾಪಸ್ ಹಿಂದೂ ಧರ್ಮಕ್ಕೆ (Hindu Religion) ಕರೆತರದೆ ಬೇರೆ ದಾರಿಯೇ ಇಲ್ಲ ಎಂದಿದ್ದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ಇದೀಗ ತಮ್ಮ ಹೇಳಿಕೆಯನ್ನು ವಾಪಸ್ ಪಡೆದುಕೊಂಡಿದ್ದಾರೆ.

ಎರಡು ದಿನಗಳ ಹಿಂದೆ ಉಡುಪಿ ಶ್ರೀಕೃಷ್ಣ ಮಠದಲ್ಲಿ (Udupi Shri Krishna Matha) ನಡೆದ ಕಾರ್ಯಕ್ರಮದಲ್ಲಿ 'ಭಾರತದಲ್ಲಿ ಹಿಂದೂ ಪುನರುತ್ಥಾನ' ಎಂಬ ವಿಷಯದ ಕುರಿತು ಮಾತನಾಡಿದ್ದ ನನ್ನ ಹೇಳಿಕೆಯನ್ನು ವಾಪಸ್ ಪಡೆಯುತ್ತೇನೆ ಎಂದು ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಅಧ್ಯಕ್ಷ (BJP national Yuva Morcha president) ತೇಜಸ್ವಿ ಸೂರ್ಯ ಹೇಳಿದ್ದಾರೆ.

Ghar Wapsi: ಮುಸ್ಲಿಂ, ಕ್ರಿಶ್ಚಿಯನ್ನರಿಗೆ ಘರ್‌ ವಾಪಸಿಯಾಗಲು ಕರೆ ಕೊಟ್ಟ ತೇಜಸ್ವಿ ಸೂರ್ಯ!

ನನ್ನ ಭಾಷಣದ ಕೆಲವು ಹೇಳಿಕೆಗಳು ವಿವಾದವನ್ನು ಸೃಷ್ಟಿಸಿವೆ. ಹಾಗಾಗಿ ಬೇಷರತ್ತಾಗಿ ಹೇಳಿಕೆಗಳನ್ನು ಹಿಂಪಡೆಯುತ್ತೇನೆ' ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸೋಮವಾರ ಟ್ವೀಟ್ (Tweet) ಮಾಡಿದ್ದಾರೆ.

ಏನಿದು ವಿವಾದ?
ಡಿಸೆಂಬರ್ 25, ಶನಿವಾರ ಉಡುಪಿ(Udupi) ಶ್ರೀಕೃಷ್ಣ ಮಠದ ವಿಶ್ವಾರ್ಪಣ ಕಾರ್ಯಕ್ರಮದಲ್ಲಿ ಮಾತನಾಡಿದ್ದ  ತೇಜಸ್ವಿ ಸೂರ್ಯ, ಹಿಂದೂ ಸಂಸ್ಕೃತಿ, ಸಮಾಜ, ಪರಂಪರೆ ಉಳಿಬೇಕಾದರೆ ಹಿಂದೂ ಧರ್ಮ ಉಳಿಯಬೇಕು. ಇದಕ್ಕಾಗಿ ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದವರನ್ನು ಹಿಂದೂ ಧರ್ಮಕ್ಕೆ ಕರೆತರಬೇಕು. ಜೊತೆಗೆ ಚೀನಾ, ಜಪಾನಿಗೆ ಹೋಗಿ ಮತಾಂತರಗೊಂಡವರನ್ನು ಭಾರತಕ್ಕೆ ವಾಪಸ್ ಕರೆಸಿಕೊಳ್ಳಬೇಕು. ಮುಸ್ಲಿಮರು, ಕ್ರೈಸ್ತರನ್ನು ಘರ್ ವಾಪಸಿ ಮಾಡದೆ ಬೇರೆ ದಾರಿಯಿಲ್ಲ ಎಂದು ಹೇಳಿದ್ದರು. ಸಂಸದರ ಈ ಹೇಳಿಕೆಗಳು ವಿವಾದವನ್ನು ಸೃಷ್ಟಿಸಿತ್ತು. ಪ್ರತಿ ಪಕ್ಷಗಳಿಂದ ತೀವ್ರ ಟೀಕೆಗೆ ಗುರಿಯಾಗಿತ್ತು. ಇದರಿಂದ ಎಚ್ಚೆತ್ತ ತೇಜಸ್ವಿ ಸೂರ್ಯ ಬೇಷರತ್ ಆಗಿ ತಮ್ಮ ಹೇಳಿಕೆ ವಾಪಸ್ ಪಡೆದುಕೊಂಡಿದ್ದಾರೆ.

ಈ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು, ಶಾಸಕ ರಘುಪತಿ ಭಟ್, ಹೋಟೆಲ್ ಉದ್ಯಮಿ ಬಿಪಿ ರಾಘವೇಂದ್ರರಾವ್ ಉಪಸ್ಥಿತರಿದ್ದರು. ಬಿಜೆಪಿ ಸಂಸದ ತೇಜಸ್ವಿ ಸೂರ್ಯ, ಜಾತ್ಯತೀತತೆಯು ಹಿಂದೂಗಳ ಮೇಲೆ ಪರಿಣಾಮ ಬೀರಿದೆ. ಇದು ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ದೌರ್ಜನ್ಯವನ್ನು ಖಚಿತಪಡಿಸಿದೆ ಎಂದೂ ಉಲ್ಲೇಖಿಸಿದ್ದರು.

ಹಿಂದೂಗಳ ಮೇಲಿನ ದೌರ್ಜನ್ಯ ಅವರ ಸ್ವಾಭಿಮಾನ ಮತ್ತು ಗೌರವವನ್ನು ಕಳೆದುಕೊಳ್ಳುವಂತೆ ಮಾಡಿದೆ ಎಂದು ಸೂರ್ಯ ಹೇಳಿದ್ದಾರೆ. “ನಾವು ಈ ದೇಶದಲ್ಲಿ ರಾಮಮಂದಿರವನ್ನು ನಿರ್ಮಿಸಿದ್ದೇವೆ. ಜಮ್ಮು ಮತ್ತು ಕಾಶ್ಮೀರದ 370 ನೇ ವಿಧಿಯನ್ನು ತೆಗೆದುಹಾಕಲಾಗಿದೆ. ನಾವು ಪಾಕಿಸ್ತಾನದ ಮುಸ್ಲಿಮರನ್ನು ಹಿಂದೂ ಧರ್ಮಕ್ಕೆ ಪರಿವರ್ತಿಸಬೇಕು. ಘರ್ ವಾಪಸಿಗೆ ಆದ್ಯತೆ ನೀಡಬೇಕು. ಅಖಂಡ ಭಾರತ ಕಲ್ಪನೆಯಲ್ಲಿ ಪಾಕಿಸ್ತಾನವೂ ಸೇರಿದೆ. ಈ ನಿಟ್ಟಿನಲ್ಲಿ ಮಠಗಳು ಮತ್ತು ದೇವಸ್ಥಾನಗಳು ಮುಂದಾಳತ್ವ ವಹಿಸಬೇಕು,' ಎಂದಿದ್ದರು.
 

Follow Us:
Download App:
  • android
  • ios