Asianet Suvarna News Asianet Suvarna News

ಭಾರತ ಅಜಾದಿ ಕಾ ಅಮೃತ ಮಹೋತ್ಸವದ ಹಿಂದೆ ಮೂರು ಮುಖ್ಯ ಉದ್ದೇಶವಿದೆ: ಅಮಿತ್ ಶಾ

ಭಾರತ ಅಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿದೆ ಇದರ ಹಿಂದೆ ಮೂರು ಉದ್ದೇಶವಿದ್ದು, ಯುವ ಪೀಳಿಗೆಗೆ ಸ್ವಾತಂತ್ರ್ಯದ ಬಗ್ಗೆ ಅರಿವು ಮನವರಿಕೆ ಮಾಡುವುದು, ದೇಶದ ವಿಕಾಸದಲ್ಲಿ ಯುವ ಪೀಳಿಗೆ ಪಾತ್ರ ಅನಿವಾರ್ಯ ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ತಿಳಿಸಿದರು. 

there are three main reasons behind azadi ka amrut mahotsav says amit shah at bengaluru gvd
Author
Bangalore, First Published Aug 4, 2022, 2:28 PM IST

ಬೆಂಗಳೂರು (ಆ.04): ಭಾರತ ಅಜಾದಿ ಕಾ ಅಮೃತ ಮಹೋತ್ಸವ ಆಚರಿಸುತ್ತಿದೆ ಇದರ ಹಿಂದೆ ಮೂರು ಉದ್ದೇಶವಿದೆ ಎಂದು ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ತಿಳಿಸಿದರು. ಯುವ ಪೀಳಿಗೆಗೆ ಸ್ವಾತಂತ್ರ್ಯದ ಬಗ್ಗೆ ಅರಿವು ಮನವರಿಕೆ ಮಾಡುವುದು, ದೇಶದ ವಿಕಾಸದಲ್ಲಿ ಯುವ ಪೀಳಿಗೆ ಪಾತ್ರ ಅನಿವಾರ್ಯ. 75 ವರ್ಷದ ದೇಶದ‌ ಸಾಧನೆಗಳನ್ನು ಜನತೆಗೆ ತಲುಪಿಸುವುದು ಎರಡನೇ ಉದ್ದೇಶ. ಈಗ ಸ್ವಾತಂತ್ರ್ಯದ ಅಮೃತ ಮಹೋತ್ಸವ ಮಾಡ್ತಿದ್ದೇವೆ. ಮುಂದೆ ಶತಮಾನೋತ್ಸವವನ್ನು ಕೂಡ ಆಚರಿಸುತ್ತೇವೆ. ಈ ಮುಂದಿನ ಅವಧಿಯಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಭಾರತ ಮುಂಚೂಣಿಯಲ್ಲಿರಬೇಕು. ಅಲ್ಲದೇ ಜಗತ್ತನ್ನು ಮುನ್ನಡೆಸುವ ಸಾಲಿನಲ್ಲಿ ಭಾರತ ಮುಂಚೂಣಿಯಲ್ಲಿರಬೇಕು. ಇದನ್ನು ಸಾಕಾರಗೊಳಿಸಲು ಎಲ್ಲರೂ ಉಳಿದ 25 ವರ್ಷದಲ್ಲಿ ಶ್ರಮಿಸಬೇಕು ಎಂದು ಹೇಳಿದರು.

ವಿಕಾಸದಲ್ಲಿ ಭಾರತ ಎಲ್ಲಾ ದೇಶಗಳಿಗೆ ಮಾದರಿಯಾಗಿದ್ದು, ಎಲ್ಲ ರಾಷ್ಟ್ರಗಳು ಭಾರತದತ್ತ ನೋಡುತ್ತಿವೆ. ಜೊತೆಗೆ ಎಲ್ಲ ಕ್ಷೇತ್ರಗಳಲ್ಲಿಯೂ ಭಾರತ ಈಗಾಗಲೇ ತನ್ನ ಛಾಪು ಮೂಡಿಸಿದೆ. ಈ ವಿಕಾಸದ ಹಾದಿಯಲ್ಲಿ ಜನವರ್ಗವನ್ನೂ ಒಳಗೊಳ್ಳುವಂತೆ ಮಾಡಿಕೊಳ್ಳಬೇಕು. ಹಿಂದಿನ ಸರ್ಕಾರಗಳು ಇದ್ದಾಗ ಹಲವು ಅಕ್ರಮಗಳು ಬಯಲಿಗೆ ಬಂದಿದ್ದವು. ನಿತ್ಯ ಪತ್ರಿಕೆಯ ಮುಖಪುಟದಲ್ಲಿ ಭ್ರಷ್ಟಾಚಾರದ ಹೆಡ್‌ಲೈನ್‌ಗಳೆ ರಾರಾಜಿಸುತ್ತಿತ್ತು. ಎಲ್ಲ ದೇಶಗಳು ಭಾರತವನ್ನು ಬೇರೆ ದೃಷ್ಟಿಯಲ್ಲಿ ನೋಡ್ತಿತ್ತು. ಬಹಳ ಕಾಲದ ನಂತರ ಪೂರ್ಣಬಹುಮತದ ಸರ್ಕಾರ ಅಧಿಕಾರದ ಚುಕ್ಕಾಣಿ ಹಿಡಿಯಿತು. ಜನರೇ ಆಯ್ಕೆ ಮಾಡಿರುವ ಪೂರ್ಣಬಹುಮತದ ಸರ್ಕಾರಕ್ಕೆ ಈಗ ಎಂಟು ವರ್ಷ ತುಂಬಿದೆ. ಒಮ್ಮೆ ಈಗ ತಿರುಗಿ ಹಿಂದೆ ನೋಡಿದಾಗ ಜಗತ್ತಿನಲ್ಲಿ ವೇಗವಾಗಿ ಬೆಳೆಯುತ್ತಿರುವ ಅರ್ಥವ್ಯವಸ್ಥೆಯನ್ನು ದೇಶದಲ್ಲಿ ನಾವು ನಿರ್ಮಾಣ ಮಾಡಿದ್ದೇವೆ ಎಂದು ಕೇಂದ್ರ ಗೃಹ ಮಂತ್ರಿ ತಿಳಿಸಿದರು.

ದ.ಕ ಜಿಲ್ಲೆಗೆ ಮತ್ತೊಂದು ಹೊಸ ನಿಯಮ: ದ್ವಿಚಕ್ರ ವಾಹನದಲ್ಲಿ ಹಿಂಬದಿ ಸವಾರರಿಗೆ ಅವಕಾಶ ಇಲ್ಲ

ಇನ್ನು ಭಾರತದಲ್ಲಿ ಜಿಎಸ್‌ಟಿಯ ಜಾರಿ ಸಫಲತೆ ಕಂಡಿದೆ. ದುರ್ಬಲಗೊಂಡಿದ್ದ ದೇಶದ ಅರ್ಥವ್ಯವಸ್ಥೆಯನ್ನು ಬಲಪಡಿಸುವ ಕಾರ್ಯದಲ್ಲಿ ಪ್ರಧಾನಿ‌ ಮೋದಿಯವರ ಕಾರ್ಯ ಹೆಚ್ಚಾಗಿದೆ. ಆತ್ಮ ನಿರ್ಭರತೆ ಮತ್ತು ಮೇಕ್ ಇನ್ ಇಂಡಿಯಾ ಜೊತೆಗೆ ಭಾರತದ ಅರ್ಥ ವ್ಯವಸ್ಥೆಗೆ ಒಂದು ಅಭಿವೃದ್ಧಿಯ ದಿಕ್ಕಿನಲ್ಲಿ ಕೊಂಡೊಯ್ಯುತ್ತಿದ್ದೇವೆ. ಭಾರತದ ಅರ್ಥವ್ಯವಸ್ಥೆಯನ್ನು ಲಘುವಾಗಿ ನೋಡುತ್ತಿದ್ದವರು ಈಗ ಆ ಧೈರ್ಯ ಮಾಡಲಾರರು. ಪ್ರಧಾನಿ ಮೋದಿ ಕಾಲದ ಸರ್ಕಾರ ಕೋವಿಡ್ ನಿರ್ವಹಣೆ ಮಾಡಿದ್ದು, ಜಗತ್ತಿಗೆ ಮಾದರಿ. ಕೋವಿಡ್, ಲಾಕ್‌ಡೌನ್‌ನಿಂದ ಬೇರೆ ದೇಶಗಳು ಆರ್ಥಿಕವಾಗಿ ಕಂಗೆಟ್ಟಿದ್ದವು. ಆದ್ರೆ ಭಾರತ ಹೊಸ ಮಾದರಿಯಲ್ಲಿ ಪರಿಹಾರ ಕಂಡಕೊಂಡು ಕೋವಿಡ್ ಮೆಟ್ಟಿನಿಂತು ಆರ್ಥಿಕತೆ ಸುಧಾರಣೆಯನ್ನು ಕೂಡ ಮಾಡಿಲ್ಲ ಎಂದರು. ಇದೇ ವೇಳೆ ಕೇಂದ್ರದ ಯೋಜನೆಗಳ ಬಗ್ಗೆ  ಅಮಿತ್ ಶಾ ಭಾಷಣದಲ್ಲಿ ಪ್ರಸ್ತಾಪಿಸಿದರು.

ನಮ್ಮ‌ದೇಶಕ್ಕೆ ದೂರದೃಷ್ಟಿಯುಳ್ಳ ನಾಯಕ ಪ್ರಧಾನಿ ರೂಪದಲ್ಲಿ ಸಿಕ್ಕಿದ್ದಾರೆ: ಸಂಕಲ್ಪ ಸಿದ್ಧಿ‌ ಕಾರ್ಯಕ್ರಮದಲ್ಲಿ ಸಿಎಂ ಬೊಮ್ಮಾಯಿ, ಪ್ರಧಾನಿ ಮೋದಿ‌ ಮತ್ತು ಕೇಂದ್ರದ ಗೃಹ ಸಚಿವ ಅಮಿತ್ ಶಾರನ್ನು ಹೊಗಳಿದ್ದು, ಯಾವುದೇ ದೇಶ ಅಭಿವೃದ್ಧಿ ಆಗಲು ದೂರದೃಷ್ಟಿಯುಳ್ಳ, ದಕ್ಷತೆ, ಗಟ್ಟಿ ನಾಯಕತ್ವ ಬೇಕು. ನಮ್ಮ‌ದೇಶಕ್ಕೆ ದೂರದೃಷ್ಟಿಯುಳ್ಳ ನಾಯಕ ಪ್ರಧಾನಿ ರೂಪದಲ್ಲಿ ಸಿಕ್ಕಿದ್ದಾರೆ. ದಕ್ಷ ನಾಯಕ ಅಮಿತ್ ಶಾ ರೂಪದಲ್ಲಿ ಸಿಕ್ಕಿದ್ದಾರೆ ಎಂದರು. ಇದೇ ವೇಳೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಯೋಜನೆಗಳ ಬಗ್ಗೆ ಮಾತನಾಡಿದ ಸಿಎಂ, ಉದ್ಯೋಗ ನೀತಿ, ಆರ್ ಅಂಡ್ ಡಿ ನೀತಿ, ವಿದ್ಯುತ್‌ಚಾಲಿತ ವಾಹನಗಳ ನೀತಿ, ಕೈಗಾರಿಕಾ ನೀತಿ, ಸೆಮಿ ಕಂಡಕ್ಟರ್ ನೀತಿಗಳನ್ನು ರಾಜ್ಯದಲ್ಲಿ ಜಾರಿಗೊಳಿಸುತ್ತಿರುವ ಬಗ್ಗೆ ಪ್ರಸ್ತಾಪಿಸಿದರು. ಹಾಗೂ ಮೋದಿಯವರ ಐದು ಟ್ರಿಲಿಯನ್ ಆರ್ಥಿಕತೆ ಸೃಷ್ಟಿಯ ಕನಸಿಗೆ ರಾಜ್ಯದಿಂದಲೂ ಬೆಂಬಲ ನೀಡುತ್ತಿದ್ದು, ರಾಜ್ಯದಿಂದ 1 ಟ್ರಿಲಿಯನ್ ಆರ್ಥಿಕತೆ ಸೃಷ್ಟಿ ಬಗ್ಗೆ ಸಿಎಂ ವಿಶ್ವಾಸ ವ್ಯಕ್ತಪಡಿಸಿದರು.

ಸೋಷಿಯಲ್ ಮೀಡಿಯಾ ಟ್ರಾಲ್ ನೆನೆದು ಕಣ್ಣೀರು ಹಾಕಿದ ಸಾ.ರಾ.ಮಹೇಶ್

ಯಲಹಂಕದ ಮದರ್ ಡೈರಿ ಬಳಿ ಬಿಗಿ ಬಂದೋಬಸ್ತ್: ಇನ್ನು ಕೇಂದ್ರ ಗೃಹ  ಹಾಗೂ ಸಹಕಾರ ಸಚಿವ ಅಮಿತ್ ಶಾ ಭೇಟಿ ಹಿನ್ನಲೆಯಲ್ಲಿ ಬೆಂಗಳೂರಿನ ಯಲಹಂಕದ ಮದರ್ ಡೈರಿ ಬಳಿ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಅಕ್ಕಪಕ್ಕದ ಅಂಗಡಿಗಳ ಬಳಿ ಪಾರ್ಕಿಂಗ್ ವಾಹನಗಳನ್ನು ಪೋಲೀಸ್ ಸಿಬ್ಬಂದಿಗಳು ತೆರವು ಮಾಡಿದ್ದಾರೆ. ಮದರ್ ಡೈರಿ ಸಿಬ್ಬಂದಿಗಳನ್ನು ತಪಾಸಣೆ ಮಾಡಿ ಪೋಲೀಸರು ಒಳಗೆ ಬಿಡುತ್ತಿದ್ದಾರೆ. ಸದ್ಯ  ಅಮಿತ್ ಶಾ ಮಧ್ಯಾಹ್ನ 3 ಗಂಟೆಗೆ ಮದರ್ ಡೈರಿಗೆ ಭೇಟಿ ನೀಡಲಿದ್ದು, ಅವರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಕೂಡಾ ಸಾಥ್ ನೀಡಲಿದ್ದಾರೆ.

Follow Us:
Download App:
  • android
  • ios