ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ಇಲ್ಲ ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಸದ್ಗುರು ಕಾರ್ಯಕ್ರಮದಲ್ಲಿ ಡಿಕೆಶಿ ಭಾಗವಹಿಸಿದ್ದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದಿದ್ದಾರೆ.

ಬೆಂಗಳೂರು (ಫೆ.27): ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಬಿಜೆಪಿಯಲ್ಲಿ ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದರು.

Add Asianetnews Kannada as a Preferred SourcegooglePreferred

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಹಾ ಶಿವರಾತ್ರಿ ನಿಮಿತ್ತ ಈಶಾ ಫೌಂಡೇಶನ್ ಸದ್ಗುರು ಜಗ್ಗಿ ವಾಸುದೇವ ಅವರು ಏರ್ಪಡಿಸಿದ್ದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪಾಲ್ಗೊಂಡಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸದ್ಗುರು ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಿಂದೆ ಭಾಗವಹಿಸಿದ್ದರು. ಅಮಿತ್ ಶಾ ಅವರು ಭಾಗಿಯಾಗಿದ್ದರು. ನಾವೂ ಸಹ ಸಾಕಷ್ಟು ಸಲ ಭಾಗಿಯಾಗಿವಹಿಸಿದ್ದೇವು. ಇದಕ್ಕೆ ರಾಜಕೀಯ ಅರ್ಥ ಕಲ್ಪಿಸುವ ಅಗತ್ಯ ಇಲ್ಲ ಎಂದು ತಿಳಿಸಿದರು.

ಡಿ.ಕೆ. ಶಿವಕುಮಾರ್ ಅವರು ಶಿವರಾತ್ರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ಕಾಂಗ್ರೆಸ್‌ನಲ್ಲಿ ಬೇರೆ ಬೇರೆ ವ್ಯಾಖ್ಯಾನ ನಡೆಯತ್ತಿರುವುದು ಅವರ ಪಕ್ಷದ ವಿಚಾರವಾಗಿದೆ. ಇದು ಕಾಂಗ್ರೆಸ್ ಪಕ್ಷದ ಅಪನಂಬಿಕೆ ಮತ್ತು ಗೊಂದಲದ ಸಂಕೇತ. ಅವರಿಗೆ ಅಪನಂಬಿಕೆ ಇರುವುದರಿಂದಲೇ, ಅದಕ್ಕೆ ಅಪಸ್ವರ ಎದ್ದಿದೆ. ಡಿ.ಕೆ.ಶಿವಕುಮಾರ್ ಬಿಜೆಪಿ ಸೇರುವ ಕುರಿತು ಯಾವುದೇ ಚರ್ಚೆ ಇಲ್ಲ. ರಾಜಕಾರಣದಲ್ಲಿ ಬೆಳವಣಿಗೆ ಕ್ಷೀಪ್ರವೇ ಆಗುವುದು, ಓವರ್ ನೈಟ್ ಆಗುತ್ತದೆ. ಪ್ರಶ್ನೆ ಅದಲ್ಲ. ಆದರೆ, ನಮ್ಮ ತಿಳುವಳಿಕೆ ಯಲ್ಲಿ ಆ ರೀತಿ ಯಾವುದೇ ಸ್ಥಿತಿ ಇಲ್ಲ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ನಾನು ಹಿಂದೂ ಆಗಿ ಹುಟ್ಟಿದ್ದೇನೆ, ಹಿಂದೂವಾಗಿಯೇ ಸಾಯುತ್ತೇನೆ; ಶಿವಭಕ್ತ ಡಿ.ಕೆ. ಶಿವಕುಮಾರ್!

ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರನ್ನು ತೇಲಿಬಿಡುತ್ತೀರಿ‌ ಎಲ್ಲರೂ ಒಟ್ಟಿಗೆ ಶಕ್ತಿಯಾಗಿ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬೇಕು. ಎಲ್ಲರನ್ನೂ ಒಳಗೊಂಡಂತಹ ಸಂಘಟನೆ ಮಾಡುವ ಉದ್ದೇಶ ಇದೆ ಎಂದು ಹೇಳಿದರು.