ಜಲಾಶಯ, ವಿದ್ಯುತ್ ಉತ್ಪಾದನೆ, ಉಕ್ಕಿನ ಕಾರ್ಖಾನೆ ಸ್ಥಾಪನೆ ಸೇರಿದಂತೆ ಅನೇಕ ಸಾರ್ವಜನಿಕ ಉದ್ಯಮಗಳನ್ನು ಸ್ಥಾಪಿಸಿ ದೇಶದ ಪ್ರಗತಿಗೆ ಅಪಾರ ಕೊಡುಗೆ ನೀಡಿದ ಭಾರತ ರತ್ನ ಸರ್‌.ಎಂ. ವಿಶ್ವೇಶ್ವರಯ್ಯ ಅವರಂತಹ ದೂರದೃಷ್ಟಿಯ ಪ್ರತಿಭಾನ್ವಿತ ಎಂಜಿನಿಯರನ್ನು ಈ ದೇಶಕ್ಕೆ ಕರ್ನಾಟಕ ನೀಡಿದೆ. ನಮ್ಮ ದೇಶದಲ್ಲಿ ಪ್ರತಿ ವರ್ಷ 15 ಲಕ್ಷ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಪದವಿ ಪಡೆಯುತ್ತಿದ್ದಾರೆ. ಕರ್ನಾಟಕದಿಂದಲೇ 1 ಲಕ್ಷ ಜನ ಪದವೀಧರರಾಗುತ್ತಿದ್ದಾರೆ: ಡಾ. ವಿದ್ಯಾಶಂಕರ್ 

ಬೆಂಗಳೂರು(ಅ.29): ಸಾಧನೆ ಮಾಡಿರುವ ಎಂಜಿನಿಯರ್‌ಗಳಿಗೆ ಪ್ರಶಸ್ತಿ ನೀಡುವ ಮೂಲಕ ಭವಿಷ್ಯದ ಎಂಜಿನಿಯರ್‌ಗಳಿಗೆ ಪ್ರೋತ್ಸಾಹ ನೀಡುವ ಕೆಲಸವನ್ನು ‘ಎಮಿನೆಂಟ್ ಎಂಜಿನಿಯರ್ ಅವಾರ್ಡ್-2023’ ಮೂಲಕ ಕನ್ನಡಪ್ರಭ ಪತ್ರಿಕೆ ಮತ್ತು ಸುವರ್ಣ ನ್ಯೂಸ್ ಸುದ್ದಿ ವಾಹಿನಿಯಿಂದ ಆಗಿದೆ ಎಂದು ವಿಟಿಯು ಕುಲಪತಿ ಡಾ. ವಿದ್ಯಾಶಂಕರ್ ಹೇಳಿದರು.

Add Asianetnews Kannada as a Preferred SourcegooglePreferred

‘ಜಲಾಶಯ, ವಿದ್ಯುತ್ ಉತ್ಪಾದನೆ, ಉಕ್ಕಿನ ಕಾರ್ಖಾನೆ ಸ್ಥಾಪನೆ ಸೇರಿದಂತೆ ಅನೇಕ ಸಾರ್ವಜನಿಕ ಉದ್ಯಮಗಳನ್ನು ಸ್ಥಾಪಿಸಿ ದೇಶದ ಪ್ರಗತಿಗೆ ಅಪಾರ ಕೊಡುಗೆ ನೀಡಿದ ಭಾರತ ರತ್ನ ಸರ್‌.ಎಂ. ವಿಶ್ವೇಶ್ವರಯ್ಯ ಅವರಂತಹ ದೂರದೃಷ್ಟಿಯ ಪ್ರತಿಭಾನ್ವಿತ ಎಂಜಿನಿಯರನ್ನು ಈ ದೇಶಕ್ಕೆ ಕರ್ನಾಟಕ ನೀಡಿದೆ. ನಮ್ಮ ದೇಶದಲ್ಲಿ ಪ್ರತಿ ವರ್ಷ 15 ಲಕ್ಷ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಪದವಿ ಪಡೆಯುತ್ತಿದ್ದಾರೆ. ಕರ್ನಾಟಕದಿಂದಲೇ 1 ಲಕ್ಷ ಜನ ಪದವೀಧರರಾಗುತ್ತಿದ್ದಾರೆ’ ಎಂದು ಡಾ. ವಿದ್ಯಾಶಂಕರ್ ತಿಳಿಸಿದರು.

ಎಂಜಿನಿಯರ್‌ಗಳಿಲ್ಲದ ಜೀವನ ಊಹಿಸಲು ಅಸಾಧ್ಯ: ನಟ ಸತೀಶ ನೀನಾಸಂ

ಎಂಜಿನಿಯರಿಂಗ್ ಕ್ಷೇತ್ರದಲ್ಲೇ ಅತಿ ಹೆಚ್ಚು ಸಂಖ್ಯೆಯ ಅವಿಷ್ಕಾರಗಳು, ಸಾಧನೆಗಳಾಗಿವೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಎಂಜಿನಿಯರುಗಳಿಗೆ ಪ್ರಶಸ್ತಿ ನೀಡುವ ಜೊತೆಗೆ ಭವಿಷ್ಯದ ಹೊಸ ಎಂಜಿನಿಯರ್‌ಗಳಿಗೆ ಪ್ರೋತ್ಸಾಹ ನೀಡುವ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ನೀಡಲಾಗಿದೆ. ಪ್ರಶಸ್ತಿ ಪಡೆದ ಎಂಜಿನಿಯರ್‌ಗಳಿಗೆ ಅಭಿನಂದನೆಗಳು. ಸಾಧನೆ ಗುರುತಿಸಿ ಎಮಿನೆಂಟ್ ಎಂಜಿನಿಯರ್ ಪ್ರಶಸ್ತಿ ನೀಡಿದ ಕನ್ನಡ ಪ್ರಭ - ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ವಿಶ್ವವಿದ್ಯಾಲಯದ ಮೂಲಕವೂ ಎಂಜಿನಿಯರ್‌ಗಳಿಗೆ ಅವಾರ್ಡ್ ನೀಡಬೇಕು ಎನ್ನುವ ಸಂದೇಶವನ್ನು ಈ ಕಾರ್ಯಕ್ರಮದ ಮೂಲಕ ನಮಗೆ ನೀಡಲಾಗಿದೆ ಎಂದು ಡಾ.ವಿದ್ಯಾಶಂಕರ್ ಹೇಳಿದರು.