Asianet Suvarna News Asianet Suvarna News

ರೈಲು ಟಿಕೆಟ್‌ ದರ ಇಳಿಕೆಗೆ ಚಿಂತನೆ: ಕೇಂದ್ರ ಸಚಿವ ಸೋಮಣ್ಣ

ಬಡ ಹಾಗೂ ಮಧ್ಯಮ ವರ್ಗದವದರಿಗೆ ರೈಲ್ವೆ ಪ್ರಯಾಣ ಇನ್ನಷ್ಟು ಅಗ್ಗಗೊಳಿಸುವ ಗುರಿಯಿದೆ. ವಂದೇ ಭಾರತ್ ರೈಲುಗಳಲ್ಲಿ ಅವರಿಗೂ ಸಂಚಾರ ಮಾಡುವಂತೆ ಸಾಧ್ಯವಾಗಿಸಬೇಕು. ಹೀಗಾಗಿ ವಂದೇ ಭಾರತ್ ಸೇರಿ ರೈಲುಗಳ ಟಿಕೆಟ್ ದರ ಪರಿಷ್ಕರಣೆ ಮಾಡಲು ಚಿಂತನೆ ನಡೆಸಿದ್ದೇವೆ ಎಂದ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ 

Thought to Reduce Train Ticket Price Says union Minister V Somanna grg
Author
First Published Jun 30, 2024, 10:26 AM IST

ಬೆಂಗಳೂರು(ಜೂ.30):  ವಂದೇ ಭಾರತ್ ಸೇರಿ ಹಲವು ರೈಲುಗಳ ಪ್ರಯಾಣ ದರ ಪರಿಷ್ಕರಣೆ (ಇಳಿಕೆ) ಕುರಿತು ಚಿಂತನೆ ನಡೆದಿರುವುದಾಗಿ ರೈಲ್ವೆ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ. ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತ್ರ ನಾಡಿದ ಅವರು, 'ಬಡ ಹಾಗೂ ಮಧ್ಯಮ ವರ್ಗದವದರಿಗೆ ರೈಲ್ವೆ ಪ್ರಯಾಣ ಇನ್ನಷ್ಟು ಅಗ್ಗಗೊಳಿಸುವ ಗುರಿಯಿದೆ. ವಂದೇ ಭಾರತ್ ರೈಲುಗಳಲ್ಲಿ ಅವರಿಗೂ ಸಂಚಾರ ಮಾಡುವಂತೆ ಸಾಧ್ಯವಾಗಿಸಬೇಕು. ಹೀಗಾಗಿ ವಂದೇ ಭಾರತ್ ಸೇರಿ ರೈಲುಗಳ ಟಿಕೆಟ್ ದರ ಪರಿಷ್ಕರಣೆ ಮಾಡಲು ಚಿಂತನೆ ನಡೆಸಿದ್ದೇವೆ' ಎಂದರು.

'ವಂದೇ ಭಾರತ್ ರೈಲುಗಳಿಗೆ ಹೆಚ್ಚಿನ ಆದ್ಯತೆ ಸಿಗುತ್ತಿದೆ, ಸಾಮಾನ್ಯ ರೈಲುಗಳ ಅಭಿವೃದ್ಧಿಗೆ ಒತ್ತು ಸಿಗುತ್ತಿಲ್ಲಎಂಬವಿಚಾರ ಗಮನಕ್ಕಿದೆ. ಪ್ರಧಾನಿ ನರೇಂದ್ರ ಮೋದಿ ಜೊತೆಗೆ ನಡೆಸಿದ ಸಮಾಲೋಚನೆ ವೇಳೆ ಇದನ್ನು ಚರ್ಚಿಸಲಾಗಿದೆ' ಎಂದರು.

ಲೋಕಸಭಾ ರಿಸಲ್ಟ್ ಬೆನ್ನಲ್ಲೇ ಬಿಜೆಪಿಯಲ್ಲಿ ಶೀತಲ ಸಮರ ? ಲಿಂಗಾಯತ ಲೀಡರ್‌ಶಿಪ್‌ಗೆ ನಡೆಯುತ್ತಿದ್ಯಾ ಪೈಪೋಟಿ ?

2024-25ರಲ್ಲಿ ಎನ್‌ಡಿಎ ಸರ್ಕಾರ, ರಾಜ್ಯದ ರೈಲ್ವೆ ಇಲಾಖೆ ಕಾಮಗಾರಿಗಳಿಗೆ * 7524 ಕೋಟಿ ನೀಡುತ್ತಿದೆ. ಕಳೆದ ಹತ್ತು ವರ್ಷದಲ್ಲಿ 365 ಕಿಮೀ ಹೊಸ ಮಾರ್ಗ ಹಾಗೂ 1268 ಕಿಮೀ ಜೋಡಿಹಳಿ ಕಾಮಗಾರಿ ಪೂರ್ಣಗೊಂಡಿವೆ. ಈ ವೇಳೆ 534 ರೈಲ್ವೇ ಮೇಲ್ಲೇತುವೆ, ಕೆಳ ಸೇತುವೆ (ಆರ್‌ಒಬಿ-ಆರ್‌ಯುಬಿ) ನಿರ್ಮಿಸಿ ಲೇವಲ್ ಕ್ರಾಸಿಂಗ್ ತೆರವು ಮಾಡಲಾಗಿದೆ ಎಂದು ಸೋಮಣ್ಣ ತಿಳಿಸಿದರು.

ರಾಜ್ಯದ ಬೇಡಿಕೆಗೆ ಸ್ಪಂದನೆ: ಕನಕಪುರ, ಸಾತನೂರು, ಕೊಳ್ಳೇಗಾಲ, ಮಳವಳ್ಳಿ ಯಳಂದೂರು ಮಾರ್ಗವಾಗಿ ಹೋಗುವ ಹೆಜ್ಜಾಲ-ಚಾಮರಾಜನಗರ ಸರ್ವೇ, ಡಿಪಿಆರ್ ನಡೆಸಲಾಗುವುದು. ರೈಲ್ವೆ ಯೋಜನೆಗಳ ಅನುಷ್ಠಾನಕ್ಕೆ ಕೇಂದ್ರ ಸ್ಪಂದಿಸಲಿದೆ ಎಂದು ಹೇಳಿದರು.

ಕರ್ನಾಟಕದಲ್ಲಿ 30 ವರ್ಷದಿಂದ ಬಾಕಿ ಉಳಿದ 9 ರೈಲ್ವೆ ಯೋಜನೆಗಳು 2 ವರ್ಷದಲ್ಲಿ ಪೂರ್ಣ: ಕೇಂದ್ರ ಸಚಿವ ಸೋಮಣ್ಣ

ಅನುದಾನ ಒಪ್ಪಂದ ಹಿಂಪಡೆದ ರಾಜ್ಯ ಸರ್ಕಾರ: 

ರೈಲ್ವೆ ಇಲಾಖೆಯಿಂದ ರಾಜ್ಯದಲ್ಲಿ ಕೌ 1699 ಕೋಟಿ ವೆಚ್ಚದ 93 ಆರ್‌ಒಬಿ-ಆರ್‌ಯುಬಿ ಕಾಮಗಾರಿಗೆ ಅನುಮೋದನೆ ನೀಡಲಾಗಿತ್ತು. ಇವುಗಳಲ್ಲಿ 49 ಕಾಮಗಾರಿಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗ ವೆಚ್ಚ ಹಂಚಿಕೆ ಆಧಾರದ ಮೇಲೆ ಅನುಮೋದನೆ ನೀಡಲಾಗಿತ್ತು. ಇದರಂತೆ ರಾಜ್ಯ ಸರ್ಕಾರ ಕ 849 ಕೋಟಿ ಕೊಡಬೇಕಿತ್ತು. ಆದರೆ, ರಾಜ್ಯ ಸರ್ಕಾರ ಇದರಲ್ಲಿ 32 ಕಾಮಗಾರಿಗಳಿಗೆ ನೀಡಿದ್ದ ವೆಚ್ಚ ಹಂಚಿಕೆ ಒಪ್ಪಿಗೆ ಹಿಂಪಡೆದಿದೆ. ಈ 32 ಯೋಜನೆಗಳ ಪೈಕಿ ಅತ್ಯಂತ ಮಹತ್ವದ 14 ಆರ್‌ಒಬಿ ಕಾಮಗಾರಿಗೆ ರೈಲ್ವೆ ಇಲಾಖೆಯೆ ಈ 204 ಕೋಟಿ ವೆಚ್ಚ ಭರಿಸಲಿದೆ. ಉಳಿದ 590 ಕೋಟಿ ವೆಚ್ಚದ 18 ಕಾಮಗಾರಿ ಗಳಿಗೂ ಕೇಂದ್ರ ಶೇ. 100 ಅನುದಾನ ನೀಡಲಿದೆ ಎಂದು ತಿಳಿಸಿದರು.

ಕನ್ನಡಿಗರಿಗೆ ರೈಲ್ವೆ ಉದ್ಯೋಗಕ್ಕೆ ಕ್ರಮ

ರೈಲ್ವೆಯಲ್ಲಿ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಲು ಕ್ರಮ ವಹಿಸಲಾಗುವುದು. ರಾಜ್ಯದಲ್ಲಿನ ನೈಋತ್ಯ ಸೇರಿ ಇತರೆ ವಲಯಗಳ ರೈಲ್ವೆಯಲ್ಲಿ ಅನ್ಯ ರಾಜ್ಯದವರು ತುಂಬಿದ್ದಾರೆ ಎಂಬ ಆಕ್ಷೇಪವಿದೆ. ಈ ಸಂಬಂಧಕೇಂದ್ರದ ಜೊತೆಗೆ ಚರ್ಚಿಸಿ ಕನ್ನಡಿಗರಿಗೆ ಉದ್ಯೋಗ ದೊರಕಿಸಿಕೊಡುವ ನಿಟ್ಟಿನಲ್ಲಿ ಕ್ರಮ ವಹಿಸುವುದಾಗಿ ಅವರು ಭರವಸೆ ನೀಡಿದರು.

Latest Videos
Follow Us:
Download App:
  • android
  • ios