*  ಮೈಸೂರು ಕೊಪ್ಪಳದಲ್ಲಿ ಸಿಡಿಲಿಗೆ ಇಬ್ಬರು, ಮಂಡ್ಯದಲ್ಲಿ ಮರ ಬಿದ್ದು ಬಾಲಕಿ ಸಾವು*  ಹಾರಿ ಹೋದ ಮನೆಯ ಛಾವಣಿ *  ನೆಲಕ್ಕುರುಳಿದ ತೆಂಗಿನ ಮರಗಳು, ವಿದ್ಯುತ್‌ ಕಂಬಗಳು  

ಬೆಂಗಳೂರು(ಮಾ.20): ರಾಜ್ಯ ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ಚಿಕ್ಕಮಗಳೂರು, ರಾಯಚೂರು, ಕೊಪ್ಪಳ ಚಾಮರಾಜನಗರ ಸೇರಿ ರಾಜ್ಯದ(Karnataka) ಹಲವು ಜಿಲ್ಲೆಗಳಲ್ಲಿ ಅಕಾಲಿಕ ಮಳೆ(Untimely Rain) ಶುರುವಾಗಿದ್ದು, ಶನಿವಾರ ಮಳೆಯಬ್ಬರಕ್ಕೆ ಮೂವರು ಬಲಿಯಾಗಿದ್ದಾರೆ.

ಮುಂಗಾರು ಪೂರ್ವ ಮಳೆಯ ಅಬ್ಬರದಲ್ಲಿ ಸಿಡಿಲಿಗೆ ಮೈಸೂರು ಜಿಲ್ಲೆ ಸಾಲಿಗ್ರಾಮ ತಾಲೂಕಿನ ಹನಸೋಗೆ ಗ್ರಾಮದ ಸಿದ್ದಲಿಂಗನಾಯಕ (72), ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಗಾಣದಾಲ ಗ್ರಾಮದ ಹೊರವಲಯದಲ್ಲಿ 13 ಕುರಿ ಸೇರಿ ಕುರಿಗಾಯಿ ಸುನೀಲ್‌ ಬಸರಿಹಾಳ(21) ಮೃತಪಟ್ಟಿದ್ದಾರೆ(Death). ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ದೊಡ್ಡಪಾಳ್ಯ ಗ್ರಾಮದಲ್ಲಿ ಬಾರಿ ಬಿರುಗಾಳಿಯಿಂದಾಗಿ ತೆಂಗಿನ ಮರ ನೆಲಕ್ಕುರಳಿ ಪ್ರಿಯಾಂಕ(12) ಎಂಬ ಬಾಲಕಿ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡು, ಕಾರು, ಬೈಕ್‌ ಜಖಂಗೊಂಡಿರುವ ಘಟನೆ ನಡೆದಿದೆ. ಶ್ರೀರಂಗಪಟಣದಿಂದ ಬನ್ನೂರು ಕಡೆಗೆ ಕಾರು ಚಲಿಸುತ್ತಿದ್ದ ವೇಳೆ ತೆಂಗಿನಮರ ಕಾರಿನ ಮೇಲೆ ಉರುಳಿ ಬಾಲಕಿ ಪ್ರಿಯಾಂಕ ಸ್ಥಳದಲ್ಲೇ ಮೃತಪಟ್ಟಿದ್ದು, ತಂದೆ ನಾಗರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬಿಸಿಲ ಬೇಗೆಯ ಮಧ್ಯೆ ವರುಣ ಸಿಂಚನ, ಮಲೆನಾಡಿನ ಕೆಲವು ಭಾಗಗಳಲ್ಲಿ ವರ್ಷದ ಮಳೆ

ಮೈಸೂರಲ್ಲೂ ನಗರದ ಪ್ರಮುಖ ರಸ್ತೆಗಳು ಮತ್ತು ತಗ್ಗು ಪ್ರದೇಶಕ್ಕೆ ನೀರು ನುಗ್ಗಿತ್ತು. ಚಾಮರಾಜನಗರ ಜಿಲ್ಲೆಯ ಕಿಲಗೆರೆ, ಕೊತ್ತಲವಾಡಿ, ಮಾದಲವಾಡಿಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದ್ದು, ಬಿರುಗಾಳಿಗೆ ಕಿಲಗೆರೆ ಗ್ರಾಮದ ಪುಟ್ಟರಂಗಮ್ಮ ಅವರ ಮನೆಯ ಛಾವಣಿ ಹಾರಿ ಹೋಗಿದೆ. ಗುಂಡ್ಲುಪೇಟೆ ತಾಲೂಕಲ್ಲಿ ಗಾಳಿ ಮಳೆಗೆ ಹತ್ತಾರು ಎಕರೆ ಬಾಳೆ ನೆಲಕಚ್ಚಿದೆ. ಹೊಸಪುರ ಗ್ರಾಮದಲ್ಲಿ ಹತ್ತಕ್ಕೂ ಹೆಚ್ಚು ತೆಂಗಿನ ಮರಗಳು, ವಿದ್ಯುತ್‌ ಕಂಬಗಳು ನೆಲಕ್ಕುರುಳಿವೆ.

7 ಜಿಲ್ಲೆ​ಗಳ​ಲ್ಲಿ ದಿಢೀರ್‌ ಮಳೆ, ಶಿರಸಿ ಜಾತ್ರೆಯಲ್ಲಿ ಕುಸಿದ ತೊಟ್ಟಿಲು

ಶಿರಸಿ: ಬಿಸಿಲ ಧಗೆ ಏರು​ತ್ತಿ​ರುವ ನಡು​ವೆಯೇ ಉತ್ತರ ಕನ್ನಡ (Uttara Kannada) ಸೇರಿ ರಾಜ್ಯದ ಏಳು ಜಿಲ್ಲೆ​ಗ​ಳಲ್ಲಿ ಶುಕ್ರವಾರ ಕೆಲ​ಗಂಟೆ​ಗಳ ಕಾಲ ದಿಢೀರ್‌ ಉತ್ತಮ (Rain) ಮಳೆ​ಯಾ​ಗಿ​ದೆ. ಮಾ. 18 ರಂದು ಮಳೆ-ಗಾಳಿ ಅಬ್ಬ​ರಕ್ಕೆ ಉತ್ತರ ಕನ್ನಡ ಜಿಲ್ಲೆಯ ಇತಿ​ಹಾಸ ಪ್ರಸಿದ್ಧ ಶಿರಸಿ (Sirsi) ಮಾರಿ​ಕಾಂಬಾ ಜಾತ್ರಾ ಗದ್ದುಗೆ ಮಂಟ​ಪಕ್ಕೆ ಹಾನಿ​ಯಾ​ಗಿದ್ದ​ಲ್ಲದೆ, ಮನೋ​ರಂಜ​ನೆ​ಗೆಂದು ಹಾಕ​ಲಾ​ಗಿದ್ದ ಜೈಂಟ್‌ ವ್ಹೀಲ್‌ನ ಐದು ತೊಟ್ಟಿಲು ಕುಸಿದು ಬಿದ್ದಿದೆ.

ರಾಜ್ಯ​ದಲ್ಲಿ ಕಳೆದ ಕೆಲ ದಿನ​ಗ​ಳಿಂದ ಬಿಸಿ​ಲಿನ ಝಳ ಏರು​ತ್ತಲೇ ಇದ್ದು, ಇದರ ನಡು​ವೆಯೇ ಉತ್ತರ ಕನ್ನಡ, ಹಾವೇರಿ, ಗದಗ, ಕೊಡಗು (Kodagu), ದಕ್ಷಿಣ ಕನ್ನ​ಡ, ​ಉಡುಪಿ, ಚಿಕ್ಕ​ಮ​ಗ​ಳೂರು ಜಿಲ್ಲೆ​ಯಲ್ಲಿ ಸುಮಾರು ಅರ್ಧ​ಗಂಟೆ​ಯಿಂದ ಒಂದು ಗಂಟೆ​ಗಳ ಕಾಲ ಉತ್ತಮ ಮಳೆ​ ಸುರಿ​ದಿ​ದೆ. ಕಾಫಿ ಬೆಳೆಯುವ ಪ್ರದೇಶದಲ್ಲಿ ಮಳೆಯಾದ ಬಗ್ಗೆ ಬೆಳೆಗಾರರು ಸಂತಸ ವ್ಯಕ್ತಪಡಿಸಿದ್ದರು. 

ಇನ್ನಷ್ಟು ಹೆಚ್ಚಾಲಿದೆ ಬಿಸಿಲ ಧಗೆ : ಹವಾಮಾನ ಇಲಾಖೆ ಎಚ್ಚರಿಕೆ

ಮಾರಿ​ಕಾಂಬಾ ಜಾತ್ರೆಗೆ ಅಡ್ಡಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲ​ವೆಡೆ ಸಂಜೆ ವೇಳೆಗೆ ಸುಮಾರು ಒಂದ​ರಿಂದ ಒಂದೂ​ವರೆ ಗಂಟೆ​ಗಳ ಕಾಲ ಭಾರೀ ಗಾಳಿ ಸಹಿತ ಉತ್ತಮ ಮಳೆ​ಯಾ​ಗಿದ್ದು, ಸಿದ್ದಾ​ಪು​ರ​ದಲ್ಲಿ ಮನೆ ಮೇಲೆ ತೆಂಗಿ​ನ​ಮ​ರ​ವೊಂದು ಬಿದ್ದು, ನಾಲ್ವ​ರಿಗೆ ಗಾಯ​ಗ​ಳಾ​ಗಿದೆ. ಮಳೆ-ಗಾಳಿ​ಯಿಂದಾಗಿ ಶಿರ​ಸಿ​ಯಲ್ಲಿ ಮಾರಿಕಾಂಬಾದೇವಿ ದೇವಸ್ಥಾನದ ಬಿಡ್ಕಿಬೈಲಿನಲ್ಲಿ ಜಾತ್ರಾ ಗದ್ದುಗೆಗಾಗಿ ನಿರ್ಮಿಸಿದ್ದ ಮಂಟಪಕ್ಕೆ ಹಾನಿಯಾಗಿದೆ. ಸಂಜೆ ಸುಮಾರು 6 ಗಂಟೆ ವೇಳೆ ದಿಢೀರ್‌ ಬಿರುಗಾಳಿ ಬೀಸಿದೆ. ಇದರಿಂದಾಗಿ ಜಾತ್ರಾ ಮಂಟಪದ ಮೇಲ್ಭಾಗ ಕುಸಿದಿದೆ. ಭಾರೀ ಗಾಳಿಗೆ ಅಂಗಡಿ ಮುಂಗ​ಟ್ಟು​ಗಳ ಮುಂದೆ ಕಟ್ಟಿದ್ದ ಟಾರ್ಪ​ಲ್‌ ಹಾರಿ ಹೋದ ಹಿನ್ನೆ​ಲೆ​ಯಲ್ಲಿ ​ಕೆ​ಲ​ಕಾಲ ಆತಂಕದ ವಾತಾ​ವ​ರಣ ನಿರ್ಮಾ​ಣ​ವಾ​ಗಿ​ತ್ತು.

ತಪ್ಪಿದ ದುರಂತ:

ಜಾತ್ರೆ ಹಿನ್ನೆ​ಲೆ​ಯಲ್ಲಿ ಸಾರ್ವ​ಜ​ನಿ​ಕರ ಮನೋರಂಜನೆಗಾಗಿ ಅಳವಡಿಸಲಾಗಿದ್ದ ಜೈಂಟ್‌ ವ್ಹೀಲ್‌​ಗೂ ಗಾಳಿ-ಮಳೆ​ಯಿಂದಾ​ಗಿ ಹಾನಿಯಾಗಿ​ದೆ. ಗಾಳಿ​ಯ​ಬ್ಬ​ರಕ್ಕೆ ಸುಮಾರು 5 ತೊಟ್ಟಿಲು ಕಳಚಿ ಕೆಳ ಬಿದ್ದಿದೆ. ಗಾಳಿ ಜೋರಾಗುತ್ತಿದ್ದಂತೆ ಅಧಿ​ಕಾ​ರಿ​ಗ​ಳು ಜಾಯಿಂಟ್‌ ವ್ಹೀಲ್‌ ಅನ್ನು ತಕ್ಷಣ ಸ್ಥಗಿ​ತ​ಗೊ​ಳಿ​ಸಿ ಜನ​ರನ್ನು ಸ್ಥಳ​ದಿಂದ ಹೊರ ಕಳು​ಹಿ​ಸಿದ ಹಿನ್ನೆ​ಲೆ​ಯಲ್ಲಿ ಭಾರೀ ಅನಾ​ಹುತವೊಂದು ತಪ್ಪಿ​ದಂತಾ​ಗಿ​ದೆ.