7 ನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಠ್ಯವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಕೋವಿಡ್‌ನಿಂದಾಗಿ ಶಾಲೆಗಳು ಇನ್ನೂ ಪ್ರಾರಂಭವಾಗಿಲ್ಲ. ಕಳೆದ ಎರಡು ತಿಂಗಳಿನಿಂದ ಶಾಲೆಗಳು ಬಂದ್ ಆಗಿವೆ.

ಬೆಂಗಳೂರು(ಜು.28): 7 ನೇ ತರಗತಿ ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಪಠ್ಯವನ್ನು ಶಿಕ್ಷಣ ಇಲಾಖೆ ಕೈಬಿಟ್ಟಿದೆ. ಕೋವಿಡ್‌ನಿಂದಾಗಿ ಶಾಲೆಗಳು ಇನ್ನೂ ಪ್ರಾರಂಭವಾಗಿಲ್ಲ. ಕಳೆದ ಎರಡು ತಿಂಗಳಿನಿಂದ ಶಾಲೆಗಳು ಬಂದ್ ಆಗಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ ಶಿಕ್ಷಣ ಇಲಾಖೆ ಶೇ.30 ರಷ್ಟು ಪಠ್ಯವನ್ನ ಕಡಿತ ಮಾಡಲು ಮುಂದಾಗಿದೆ. 7 ನೇ ತರಗತಿ ಪುಸ್ತಕದಿಂದ ಟಿಪ್ಪು ಕುರಿತ ಪಠ್ಯವನ್ನು ಕೈಬಿಡಲಾಗಿದೆ. 6 ಹಾಗೂ 10 ನೇ ತರಗತಿಯಲ್ಲಿ ಟಿಪ್ಪು ಪಠ್ಯವನ್ನ ಮುಂದುವರಿಸಲಾಗಿದೆ.

ಶಾಲಾ ಪಠ್ಯದಿಂದ ಟಿಪ್ಪು ಸುಲ್ತಾನ್‌ಗೆ ಸದ್ಯ ಕೊಕ್‌ ಇಲ್ಲ!

ಈ ಹಿಂದೆ ಟಿಪ್ಪು ಪಠ್ಯವನ್ನ ಕೈಬಿಡುವ ವಿಚಾರ ಸಾಕಷ್ಟು ಸುದ್ದಿಯಾಗಿತ್ತು. ಈ ಹಿಂದೆ ಸರ್ಕಾರ ಟಿಪ್ಪು ಪಠ್ಯ ಕೈಬಿಡುವ ವಿಚಾರದ ಪರಿಶೀಲನೆಗೆ ಸಮಿತಿ ರಚನೆ ಮಾಡಿತ್ತು. ಸಮಿತಿ ಟಿಪ್ಪು ಪಠ್ಯವನ್ನ ಉಳಿಸಿಕೊಳ್ಳುವುದು ಸೂಕ್ತ ಎಂದು ಸರ್ಕಾರಕ್ಕೆ ವರದಿ ನೀಡಿತ್ತು.

ಅಂತೂ ಭಾರೀ ಚರ್ಚೆಗೆ ಗ್ರಾಸವಾಗಿದ್ದ ಟಿಪ್ಪು ಪಠ್ಯ ಕೊನೆಗೂ ಪಠ್ಯ ಪುಸ್ತಕದಿಂದ ರದ್ದಾಗಿದೆ. ಲಾಕ್‌ಡೌನ್‌ನಿಂದಾಗಿ ಈ ಬಾರಿ ಶೇ 30 ರಷ್ಟು ಪಠ್ಯ ರದ್ದುಗೊಳಿಸಲು ಸರ್ಕಾರ ಚಿಂತಿಸಿದೆ.