ಅಸ್ವಸ್ಥ ಅಕ್ಷರ ದಾಸೋಹಿಗೆ ಚೆನ್ನೈನಲ್ಲಿ ಚಿಕಿತ್ಸೆ
ಅಸ್ವಸ್ಥ ಅಕ್ಷರ ದಾಸೋಹಿಗೆ ಚೆನ್ನೈನಲ್ಲಿ ಚಿಕಿತ್ಸೆ
ನಡೆದಾಡುವ ದೇವರು ಸಿದ್ಧಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಅಗತ್ಯ ಚಿಕಿತ್ಸೆಗೆ ಚೆನ್ನೈಗೆ ಕರೆದೊಯ್ಯಲಾಗಿದೆ.
ಎಚ್ಎಎಲ್ನಿಂದ ಏರ್ ಆ್ಯಂಬುಲೆನ್ಸ್ ಮೂಲಕ ಶ್ರೀಗಳು ಪ್ರಯಾಣಿಸಿದರು.
ಐ ಕ್ಯಾಟ್ ಏರ್ ಆ್ಯಂಬ್ಯುಲೆನ್ಸ್ ಮೂಲಕ ಸ್ವಾಮೀಜಿ ಶಿಫ್ಟ್ ಆಗಲಿದ್ದಾರೆ.
ಏರ್ ಆ್ಯಂಬ್ಯುಲೆನ್ಸ್ನಲ್ಲಿ ಐಸಿಯುಗೆ ಬೇಕಾದ ಅಗತ್ಯ ಸೌಲಭ್ಯಗಳು ಇರುತ್ತವೆ.
ಅಂತರಾಷ್ಟ್ರೀಯ ಖ್ಯಾತಿಯ ಡಾ.ಮೊಹಮ್ಮದ್ ರಲಾ ಅವರು ಶ್ರೀಗಳನ್ನು ಪರೀಕ್ಷಿಸಿ, ಚಿಕಿತ್ಸೆ ನೀಡುತ್ತಾರೆ.
ಎರಡು ವರ್ಷಗಳಿಂದಲೂ ಶ್ರೀಗಳಿಗೆ ಚೆನ್ನೈನಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.
ಮೂರ್ನಾಲ್ಕು ದಿನಗಳ ಕಾಲ ಚಿಕಿತ್ಸೆಗೆ ಚೈನ್ನೈನ ರೆಲಾ ಆಸ್ಪತ್ರೆಯಲ್ಲಿಯೇ ಇರಲಿದ್ದಾರೆ. ಅಲ್ಲಿಯೇ ಸ್ವಾಮೀಜಿ ಅಗತ್ಯ ಸೌಲಭ್ಯ ಒದಗಿಸಲಾಗುತ್ತದೆ.