ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮೋತಕಪಲ್ಲಿ ಮೂಲದ ಕೃಷಿ ಸಖಿ ಅನುಷಾ ಹಾಗೂ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಜಂಬೇಸಾಲ ಗ್ರಾಮದ ಲತಾ ರಾಜೀವ ಹೆಗಡೆ ಆಯ್ಕೆಯಾದವರು. 

ಕಲಬುರಗಿ/ಯಲ್ಲಾಪುರ(ಜೂ.18): ಉತ್ತರ ಪ್ರದೇಶದ ವಾರಾಣಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ನೈಸರ್ಗಿಕ ಕೃಷಿ ತರಬೇತಿ ಪಡೆದಿರುವ ಕೃಷಿ ಸಖಿಯರೊಂದಿಗೆ ಸಂವಾದ ನಡೆಸಲಿದ್ದು, ಈ ಕಾರ್ಯಕ್ರಮದಲ್ಲಿ ರಾಜ್ಯದ ಇಬ್ಬರು ಕೃಷಿ ಸಖಿಯರು ಪಾಲ್ಗೊಳ್ಳಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಮೋತಕಪಲ್ಲಿ ಮೂಲದ ಕೃಷಿ ಸಖಿ ಅನುಷಾ ಹಾಗೂ ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಜಂಬೇಸಾಲ ಗ್ರಾಮದ ಲತಾ ರಾಜೀವ ಹೆಗಡೆ ಆಯ್ಕೆಯಾದವರು. 

ಕಲಬುರಗಿ: ಸೇಡಂನಲ್ಲಿ ಭಾರೀ ಮಳೆ, ಪೊಲೀಸ್‌ ಠಾಣೆಗೆ ಮಳೆ ನೀರು ದಿಗ್ಬಂಧನ..!

ಲತಾ ಅವರು ತಮ್ಮ ಪತಿಯೊಂದಿಗೆ ನೈಸರ್ಗಿಕ ಪುಷ್ಪಕೃಷಿ, ಪಶು ಆಹಾರ ತಯಾರಿಕೆ, ಹೈನುಗಾರಿಕೆ ಮುಂತಾದ ಕೃಷಿ ಸಂಬಂಧಿ ಚಟುವಟಿಕೆಗಳಲ್ಲಿ ಸಕ್ರಿಯರಾಗಿ ಭಾಗವಹಿಸುತ್ತಿದ್ದಾರೆ.