: ಉಡುಪಿ ವಿಡಿಯೋ ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರ ಮೇಲೆ ಅಪನಂಬಿಕೆ ಇದ್ದರೆ ನೀವು ಕಲ್ಲಡ್ಕ ಪ್ರಭಾಕರ್ ಭಟ್ಟರ ಬಳಿ ತನಿಖೆ ಮಾಡಿಸಿ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡ  ರಮೇಶ್ ಕಾಂಚನ್  ಕಿಡಿಕಾರಿದರು.

ಉಡುಪಿ (ಜು.29) : ಉಡುಪಿ ವಿಡಿಯೋ ಪ್ರಕರಣದ ವಿಚಾರಣೆ ನಡೆಸುತ್ತಿರುವ ಪೊಲೀಸರ ಮೇಲೆ ಅಪನಂಬಿಕೆ ಇದ್ದರೆ ನೀವು ಕಲ್ಲಡ್ಕ ಪ್ರಭಾಕರ್ ಭಟ್ಟರ ಬಳಿ ತನಿಖೆ ಮಾಡಿಸಿ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಾಂಗ್ರೆಸ್ ಮುಖಂಡ ರಮೇಶ್ ಕಾಂಚನ್ ಕಿಡಿಕಾರಿದರು.

Add Asianetnews Kannada as a Preferred SourcegooglePreferred

ಇಂದು ಮಣಿಪುರ ಘಟನೆ ವಿರೋಧಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ ನಡೆಯಿತು. ಕಾಂಗ್ರೆಸ್‌ನ ಪ್ರಮುಖ ನಾಯಕರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದರು. ಈ ವೇಳೆ ಮಾತನಾಡಿದ ರಮೇಶ್ ಕಾಂಚನ್, ಶಾಸಕರು ತಮ್ಮ ಪ್ರತಿಷ್ಠೆಗಾಗಿ ಮಕ್ಕಳ ಜೀವನದ ಜೊತೆ ಚೆಲ್ಲಾಟ ಆಡಬಾರದು ಎಂದರು. 

ಈಗಾಗಲೇ ಉಡುಪಿ ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣದ ಸತ್ಯಾಸತ್ಯ ತನಿಖೆ ನಡೆಸಲು ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬು ಸುಂದರ್ ಉಡುಪಿಗೆ ಬಂದಿದ್ದಾರೆ, ಪೊಲೀಸ್ ತನಿಖೆಯೂ ನಡೆಯುತ್ತಿದೆ. ನಿಮಗೆ ತನಿಖೆ ಮೇಲೆ ಅಪನಂಬಿಕೆ ಇದ್ದರೆ ಕಲ್ಲಡ್ಕ ಪ್ರಭಾಕರ್ ಭಟ್ಟರಿಂದಲೇ ಮಾಡಿಸಿ ಎಂದು ವಾಗ್ದಾಳಿ ನಡೆಸಿದರು. 

'ಈಗ್ಲೇ 65, ಮುಂದೆ ಇನ್ನೆಷ್ಟು ಸೀಟ್‌ಗೆ ಜನ ಇಳಿಸ್ತಾರೋ..' ಯಶ್‌ಪಾಲ್‌ ಸುವರ್ಣಗೆ ಗೃಹ ಸಚಿವರ ತಿರುಗೇಟು