ಲೋಕಸಭೆ ಉಪ ಚುನಾವಣೆಯಲ್ಲಿ ಚುನಾಯಿತರಾದ ಎಲ್‌.ಆರ್‌. ಶಿವರಾಮೇಗೌಡ ಹಾಗೂ ವಿ.ಎಸ್‌. ಉಗ್ರಪ್ಪ ಬುಧವಾರ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನವದೆಹಲಿ[ಡಿ.13]: ಮಂಡ್ಯ ಮತ್ತು ಬಳ್ಳಾರಿ ಲೋಕಸಭೆ ಉಪ ಚುನಾವಣೆಯಲ್ಲಿ ಚುನಾಯಿತರಾದ ಎಲ್‌.ಆರ್‌. ಶಿವರಾಮೇಗೌಡ ಹಾಗೂ ವಿ.ಎಸ್‌. ಉಗ್ರಪ್ಪ ಅವರು ಬುಧವಾರ ಲೋಕಸಭೆಯಲ್ಲಿ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.

Add Asianetnews Kannada as a Preferred SourcegooglePreferred

ಉಗ್ರಪ್ಪ ಅವರು ಕಾಂಗ್ರೆಸ್‌ನಿಂದ ಬಳ್ಳಾರಿ ಹಾಗೂ ಶಿವರಾಮೇಗೌಡ ಅವರು ಜೆಡಿಎಸ್‌ನಿಂದ ಮಂಡ್ಯ ಕ್ಷೇತ್ರದಿಂದ ಲೋಕಸಭೆ ಪ್ರವೇಶಿಸಿದ್ದರು. ಬುಧವಾರದ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಈ ಇಬ್ಬರು ಸಂಸದರು ಕನ್ನಡದಲ್ಲಿಯೇ ಪ್ರಮಾಣ ವಚನ ಸ್ವೀಕಾರ ಮಾಡಿದರು.

ನೂತನ ಸಂಸದರ ಪದಗ್ರಹಣ ಮುಕ್ತಾಯದ ಬೆನ್ನಲ್ಲೇ, ಅನಾರೋಗ್ಯ ಮತ್ತು ವಯೋಸಹಜ ಕಾರಣದಿಂದ ನಿಧನರಾದ ಕರ್ನಾಟಕದ ಸಿ.ಕೆ. ಜಾಫರ್‌ ಷರೀಫ್‌ ಸೇರಿದಂತೆ 11 ಮಾಜಿ ಸಂಸದರಿಗೆ ಸದಸ್ಯರು ಶ್ರದ್ಧಾಂಜಲಿ ಸಲ್ಲಿಸಿದರು.