Asianet Suvarna News Asianet Suvarna News

ಹೆದರಬೇಡಿ ವಾರದಲ್ಲಿ ನಿಮ್ಮವರನ್ನು ಜೈಲಿಂದ ಬಿಡಿಸುವೆ: ನಾಗಮಂಗಲ ಸಂತ್ರಸ್ತರಿಗೆ ಕುಮಾರಸ್ವಾಮಿ ಅಭಯ

ಯಾರೂ ಹೆದರಬೇಡಿ, ನಿಮ್ಮ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನಾನು ಭರವಸೆ ಕೊಡುತ್ತೇನೆ. ಇನ್ನೊಂದು ವಾರದಲ್ಲಿ ನಿಮ್ಮ ಮಕ್ಕಳನ್ನು ಜೈಲಿನಿಂದ ಬಿಡಿಸುತ್ತೇನೆ. ವಕೀಲರನ್ನು ನಾನೇ ನೇಮಿಸಿಕೊಡುತ್ತೇನೆ ಎಂದು ನಾಗಮಂಗಲದ ಬದರಿಕೊಪ್ಪಲು ಮಹಿಳೆಯರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಯ ನೀಡಿದ್ದಾರೆ.

union minister hd kumaraswamy visited nagamangala rav
Author
First Published Sep 20, 2024, 8:15 AM IST | Last Updated Sep 20, 2024, 8:57 AM IST

ನಾಗಮಂಗಲ (ಸೆ.20) : ಯಾರೂ ಹೆದರಬೇಡಿ, ನಿಮ್ಮ ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ನಾನು ಭರವಸೆ ಕೊಡುತ್ತೇನೆ. ಇನ್ನೊಂದು ವಾರದಲ್ಲಿ ನಿಮ್ಮ ಮಕ್ಕಳನ್ನು ಜೈಲಿನಿಂದ ಬಿಡಿಸುತ್ತೇನೆ. ವಕೀಲರನ್ನು ನಾನೇ ನೇಮಿಸಿಕೊಡುತ್ತೇನೆ ಎಂದು ನಾಗಮಂಗಲದ ಬದರಿಕೊಪ್ಪಲು ಮಹಿಳೆಯರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅಭಯ ನೀಡಿದ್ದಾರೆ.

ಗಣೇಶ ವಿಸರ್ಜನೆ ಸಂದರ್ಭ ಗಲಭೆ ನಡೆದ ನಾಗಮಂಗಲದ ಬದರಿಕೊಪ್ಪಲಿಗೆ ಗುರುವಾರ ಸಂಜೆ ಭೇಟಿ ನೀಡಿದ ಸಚಿವರು, ಸಂತ್ರಸ್ತ ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು. ನಮ್ಮವರಲ್ಲಿ ಹಲವರು ಜೈಲು ಸೇರಿದ್ದಾರೆ. ಗಂಡಸರು ಊರು ಬಿಟ್ಟಿದ್ದಾರೆ. ಬಂಧನಕ್ಕೆ ಹೆದರಿ ಯುವಕರು ಊರನ್ನೇ ತೊರೆದಿದ್ದಾರೆ. ನಮ್ಮ ಕುಟುಂಬಕ್ಕೆ ಆಧಾರವೇ ಇಲ್ಲ. ವಯಸ್ಸಾದವರನ್ನು ಆರೈಕೆ ಮಾಡುವವರಿಲ್ಲ. ಜೀವನ ನಡೆಸುವುದೇ ಕಷ್ಟವಾಗಿದೆ. ಇಂತಹ ಪರಿಸ್ಥಿತಿಯನ್ನು ನಾವೆಂದೂ ಎದುರಿಸಿರಲಿಲ್ಲ ಎಂದು ಸಚಿವರ ಎದುರು ಗ್ರಾಮದ ನಿವಾಸಿಗಳು ಕಣ್ಣೀರಿಟ್ಟರು.

'ಪ್ಯಾಲೆಸ್ತೇನ್ ಧ್ವಜ ಹಿಡಿದ್ರೆ ತಪ್ಪೇನಿಲ್ಲ..' ಚರ್ಚೆಗೆ ಗ್ರಾಸವಾದ ಸಚಿವ ಜಮೀರ್ ಸಮರ್ಥನೆ!

ಕುಟುಂಬ ನಿರ್ವಹಣೆಯ ಖರ್ಚನ್ನು ಭರಿಸುವುದೂ ಕಷ್ಟವಾಗಿದೆ. ಗಂಡಸರಿಲ್ಲದ ಕಾರಣ ಒಂದು ವಾರಕ್ಕೆ ಬೇಕಾದ ಆಹಾರ ಪದಾರ್ಥಗಳನ್ನು ತಂದಿಟ್ಟುಕೊಳ್ಳುತ್ತಿದ್ದೇವೆ. ನಮ್ಮ ಮಕ್ಕಳು ಯಾವ ತಪ್ಪನ್ನೂ ಮಾಡಿಲ್ಲ. ಅವರನ್ನು ಬಂಧಿಸಿದ್ದಾರೆ. ಜೈಲಿನಲ್ಲಿ ಏನು ಕಷ್ಟ ಅನುಭವಿಸುತ್ತಿದ್ದಾರೋ ಗೊತ್ತಿಲ್ಲ. ನಮ್ಮ ಮಕ್ಕಳನ್ನು ಜೈಲಿನಿಂದ ಬಿಡಿಸುವ ದಾರಿಯೇ ಕಾಣುತ್ತಿಲ್ಲ. ಹೇಗಾದರೂ ನಮಗೆ ಸಹಾಯ ಮಾಡಿ. ಇಂತಹ ಸ್ಥಿತಿಯಲ್ಲಿ ನಮ್ಮ ಬೆಂಬಲಕ್ಕೆ ನಿಲ್ಲಲು ಯಾರೂ ಇಲ್ಲವೆಂದು ಅಳಲು ತೋಡಿಕೊಂಡರು.ಮಹಿಳೆಯರನ್ನು ಸಮಾಧಾನಪಡಿಸಿದ ಸಚಿವರು, ಇನ್ನೊಂದು ವಾರದಲ್ಲಿ ನಿಮ್ಮ ಮಕ್ಕಳನ್ನ ಜೈಲಿನಿಂದ ಬಿಡಿಸುತ್ತೇನೆ ಎಂದರು.

Latest Videos
Follow Us:
Download App:
  • android
  • ios