ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನಾ ಅವರು ಭಾರತದ ರೈತ ಪ್ರತಿಭಟನೆಗೆ ಬೆಂಬಲ ನೀಡಿರುವ ಬಗ್ಗೆ ಪ್ರಸ್ತಾಪಿಸಿ, ಅವರೆಂದಾದರು ಭತ್ತದ ಗದ್ದೆ ನೋಡಿದ್ದಾರಾ ಎಂದು ಪ್ರಶ್ನೆ ಮಾಡಲಾಗಿದೆ.
ಮೈಸೂರು (ಫೆ.07): ಪಾಪ್ ಗಾಯಕಿ ರಿಹಾನಾ ಎಂದಾದರೂ ಭತ್ತದ ಗದ್ದೆ ನೋಡಿದ್ದಾರಾ?
ಹೀಗೆಂದು ಪ್ರಶ್ನೆ ಮಾಡಿದವರು ರಾಸಾಯನಿಕ ಮತ್ತು ಗೊಬ್ಬರ ಖಾತೆ ಸಚಿವ ಡಿ.ವಿ.ಸದಾನಂದಗೌಡ.
ಅಂತಾರಾಷ್ಟ್ರೀಯ ಪಾಪ್ ಗಾಯಕಿ ರಿಹಾನಾ ಅವರು ಭಾರತದ ರೈತ ಪ್ರತಿಭಟನೆಗೆ ಬೆಂಬಲ ನೀಡಿರುವ ಕುರಿತು ಶನಿವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ರೈತರ ಕಷ್ಟದ ಬಗ್ಗೆ ರಿಹಾನಾ ಏನು ಮಾತನಾಡುತ್ತಾರೆ? ರಿಹಾನಾ ಎಂದಾದರೂ ಭತ್ತದ ಗದ್ದೆ ನೋಡಿದ್ದಾರಾ? ಬಹುಶಃ ಅವರು ಭತ್ತದ ಗದ್ದೆ ಮುಂದೆ ನಿಂತು ಫೋಟೋ ತೆಗೆಸಿಕೊಂಡು ಹೋಗಿರಬಹುದು. ರಿಹಾನಾಗೆ ರೈತರ ಶ್ರಮದ ಬಗ್ಗೆ ಏನು ಗೊತ್ತಿದೆ? ರೈತರು ತಮ್ಮ ಉತ್ಪನ್ನಗಳನ್ನು ಹೇಗೆ ಮಾರಾಟ ಮಾಡುತ್ತಾರೆ ಅಂತ ಅವರಿಗೆ ಗೊತ್ತೆ? ವಿದೇಶಿ ಕೈಗೊಂಬೆಯಾಗಿ ಅವರು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದರು.
ತನ್ನನ್ನು ತಾನು ಬ್ಯಾಡ್ ಗರ್ಲ್ ಅನ್ನೋ ರಿಹಾನಾ ಸೆಕ್ಸ್ ಬಗ್ಗೆ ಸಿಕ್ಕಾಪಟ್ಟೆ ಬೋಲ್ಡ್ ...
ರೈತರಿಗೆ ಸ್ವಾತಂತ್ರ್ಯ ಬಂದಿಲ್ಲ: ದೇಶಕ್ಕೆ ಸ್ವಾತಂತ್ರ್ಯ ಬಂದಿದೆ. ಆದರೆ ರೈತನಿಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ. ರೈತ ಬೆಳೆದ ಬೆಳೆಯನ್ನು ಮುಕ್ತವಾಗಿ ಮಾರಲು ನಾವು ಸ್ವಾತಂತ್ರ್ಯ ನೀಡುತ್ತಿದ್ದೇವೆ. ರೈತರು ಈಗ ಸರ್ಕಾರದ ಕೈಗೊಂಬೆ ಆಗಿದ್ದಾರೆ. ಬೇಕಾದವರಿಗೆ ಬೆಳೆ ಮಾರಾಟ ಮಾಡಲು ಸ್ವಾತಂತ್ರ್ಯ ಇಲ್ಲವಾಗಿದೆ. ತನ್ನ ಬೆಳೆಗೆ ಯಾರಾದರೂ ಹೆಚ್ಚು ಬೆಲೆ ಕೊಡುತ್ತಾರೆ ಅಂದರೆ ಕೊಡಲಿ ಬಿಡಿ. ಸುಮ್ಮನೆ ಯಾಕೆ ಹಠ ಮಾಡುತ್ತಾರೆ? ರೈತರಿಗೆ ಬೆಂಬಲ ನೀಡಿದ್ದು ಮೋದಿ ಸರ್ಕಾರ. ರೈತರು ಎಪಿಎಂಸಿ ಕೈಗೊಂಬೆಯಾಗಿ ಇರೋದು ಬೇಡ. ಸ್ವತಂತ್ರವಾಗಿ ಬೆಳೆ ಮಾರಾಟ ಮಾಡಲು ಅವಕಾಶ ಕೊಟ್ಟಿದ್ದೇವೆ. ಈ ಕಾಯ್ದೆಯಿಂದ ರೈತರು ಬಂಡವಾಳಶಾಹಿಗಳ ಕೈಗೊಂಬೆಯಾಗುತ್ತಾರೆ ಅನ್ನೋದು ಸುಳ್ಳು ಎಂದು ತಿಳಿಸಿದರು.
ಪಟ್ಟಭದ್ರ ಹಿತಾಸಕ್ತಿಯಿಂದ ಈ ಪ್ರತಿಭಟನೆ ನಡೆಯುತ್ತಿದೆ. ಕೃಪಾಪೋಷಿತ ಜನರ ಪ್ರೇರಣೆಯಿಂದ ರೈತರು ಪ್ರತಿಭಟನೆ ಮಾಡುತ್ತಿದ್ದಾರೆ. ನಾವು ಸಂಧಾನ ಹಾಗೂ ಮಾತುಕತೆ ಎರಡಕ್ಕೂ ಸಿದ್ಧರಿದ್ದೇವೆ. ಆದರೆ ರೈತರೇ ಹಠ ಮಾಡುತ್ತಿದ್ದಾರೆ ಎಂದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 7, 2021, 7:59 AM IST