V Somanna on BPL Card issue:  ಸ್ವಂತ ಮನೆ ಹೊಂದಿರುವವರಿಗೆ ಬಿಪಿಎಲ್ ಕಾರ್ಡ್ ಬದಲಿಗೆ ಎಪಿಎಲ್ ಕಾರ್ಡ್ ನೀಡುವ ರಾಜ್ಯ ಕಾಂಗ್ರೆಸ್‌ ಸರ್ಕಾರದ ನಿರ್ಧಾರವನ್ನು ಕೇಂದ್ರ ಸಚಿವ ವಿ. ಸೋಮಣ್ಣ ತೀವ್ರವಾಗಿ ಖಂಡಿಸಿದ್ದಾರೆ. ಇದು ಸರ್ಕಾರದ ಪಾಪದ ಕೃತ್ಯ, ಇದಕ್ಕೂ ಕೇಂದ್ರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟನೆ

ಮೈಸೂರು (ಸೆ.28): ಸ್ವಂತ ಮನೆ ಇದ್ದವರಿಗೆ ಬಿಪಿಎಲ್ ಕಾರ್ಡ್‌ ಬದಲು ಎಪಿಎಲ್ ಕಾರ್ಡ್ ನೀಡುವ ಕಾಂಗ್ರೆಸ್‌ ಸರ್ಕಾರದ ನಿರ್ಧಾರಕ್ಕೆ ಕೇಂದ್ರ ಸಚಿವ ವಿ.ಸೋಮಣ್ಣ ಕಿಡಿಕಾರಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕುರಿತು ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇಲ್ಲಿಯವರೆಗೂ ನೀವೆಲ್ಲಾ ಕತ್ತೆ ಕಾಯುತ್ತಿದ್ರಾ? ಪ್ರಧಾನಿ ನರೇಂದ್ರ ಮೋದಿ ಅವರು 5 ವರ್ಷ ಪಿಡಿಎಸ್ ಮುಂದುವರಿಸುತ್ತೇನೆ ಅಂದಿದ್ದಾರೆ. ಬಡವರಿಗಾಗಿ ಮೋದಿ ಕೆಲಸ ಮಾಡುತ್ತಿದ್ದಾರೆ. ಕೇಂದ್ರ ಸರ್ಕಾರ ಮನೆ ಇರುವವರಿಗೆ ಅದು, ಇಲ್ಲದವರಿಗೆ ಇದು ಅಂತ ಯಾವುದನ್ನೂ ಹೇಳಿಲ್ಲ. ನಮ್ಮ‌ ನಿಬಂಧನೆ ಈಗಾಗಲೇ ಕೊಟ್ಟಿದ್ದೇವೆ. ಈ ಕಾಂಗ್ರೆಸ್‌ನವರು ಚಂದ್ರಲೋಕ ಇಂದ್ರಲೋಕ ತರುತ್ತೀವಿ ಅಂದಿದ್ದರು. ಯಾವುದೂ ಆಗಿಲ್ಲ. ಅದಕ್ಕಾಗಿ ಕಾರ್ಡ್‌ ರದ್ದು ಮಾಡುವ ಪಾಪದ ಕೆಲಸ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್; ಮುಂದಿನ ತಿಂಗಳಿಂದಲೇ ಹೊಸ ಬಿಪಿಎಲ್ ಗೆ ಅರ್ಜಿ!

ಆಹಾರ ಸಚಿವ ಮುನಿಯಪ್ಪಗೆ ಏನೂ ಗೊತ್ತಿಲ್ಲ. ಏನು ಇಲ್ಲದೆ ಬರೀ ಬೆತ್ತಲೆ ಆಗಿದ್ದೀರಾ? ಕೇಂದ್ರದ ಮೇಲೆ ಅದನ್ನು ಹಾಕಬೇಡಿ. ನಿಮ್ಮ ಪಾಪದ ಕೃತ್ಯಕ್ಕೆ ನೀವೇ ಹೊಣೆ, ಕೇಂದ್ರ ಸರ್ಕಾರವಲ್ಲ ಎಂದು ಖಡಕ್‌ ಎಚ್ಚರಿಕೆ ನೀಡಿದ್ದಾರೆ.