ಲೋಕಸಭಾ ಚುನಾವಣೆ ಸಮೀಪಿಸುತ್ತಿದೆ. ಇದೇ ವೇಳೆ ಪಕ್ಷಗಳು ಅಭ್ಯರ್ಥಿ ಆಯ್ಕೆ ಬಗ್ಗೆ, ಚುನಾವಣಾ ಗೆಲುವಿನ ಬಗ್ಗೆ ಕಸರತ್ತು ನಡೆಸುತ್ತಿವೆ. ಇದೇ ವೇಳೆ ಮಾಜಿ ಪ್ರಧಾನಿ ದೇವೇಗೌಡ ಅವರು ತಮ್ಮ ಮುಂದಿನ ಸ್ಪರ್ಧೆ ಬಗ್ಗೆ ಸೀಕ್ರೇಟ್ ಕಾಯ್ದುಕೊಂಡಿದ್ದಾರೆ. 

ಹಾಸನ:  ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆರ್ಥಿಕವಾಗಿ ಹಿಂದುಳಿದಿರುವ ಮೇಲ್ವರ್ಗದವರಿಗೆ ನೀಡುವ ಮೀಸಲಾತಿ ನರೇಂದ್ರ ಮೋದಿ ಅವರ ಹೊಸ ಅಸ್ತ್ರ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ. 

Add Asianetnews Kannada as a Preferred SourcegooglePreferred

ಇತ್ತೀಚಿನ ದಿನಗಳಲ್ಲಿ ನರೇಂದ್ರ ಮೋದಿ ಜನಪ್ರೀಯತೆ ಕುಗ್ಗುತ್ತಿದೆ. ಇದರಿಂದ ಇಂತಹ ಹೊಸ ಹೊಸ ಅಸ್ತ್ರ ಪ್ರಯೋಗಿಸುತ್ತಿದ್ದಾರೆ ಎಂದು ಹಾಸನದಲ್ಲಿ ಹೇಳಿದ್ದಾರೆ. 

ತಿಂಗಳಾಂತ್ಯದೊಳಗೆ ಕಾಂಗ್ರೆಸ್ ಸೀಟು ಹಂಚಿಕೆ : ಯಾರಿಗೆ ಯಾವ ಕ್ಷೇತ್ರ..?

ಈ ರೀತಿಯಾದ ನೀತಿಗಳನ್ನು ಜಾರಿ ತಂದಲ್ಲಿ ಚುನಾವಣೆಯಲ್ಲಿ ಗೆಲ್ಲಬಹುದು ಎನ್ನುವ ಭಾವನೆ ಹೊಂದಿದ್ದಾರೆ. ಇದೇ ಕಾರಣಕ್ಕೆ ಮರು ಮಾತನಾಡದೆ ಎಲ್ಲಾ ಪಕ್ಷಗಳವರೂ ಬೆಂಬಲ ನೀಡಿದ್ದಾರೆ ಎಂದಿದ್ದಾರೆ.

ವಿಧಾನ ಪರಿಷತ್ ನಾಮನಿರ್ದೇಶನ: JDSನಿಂದ ಅಚ್ಚರಿ ಹೆಸರು

ಆದರೆ ಸದ್ಯ ಈ ವಿಚಾರ ಸುಪ್ರಿಂಕೋರ್ಟ್ ಮೆಟ್ಟಿಲೇರಿದೆ. ಅಲ್ಲಿ ಏನಾಗಲಿದೆ ಎಂದು ಕಾದು ನೋಡಬೇಕಿದೆ. ನಾವು ಬ್ರಾಹ್ಮಣ ಸಮುದಾಯಕ್ಕೆ ಏನು ಕೊಡಬೇಕೋ ಅದನ್ನು ‌ಕೊಟ್ಟಿದ್ದೇವೆ. ಈ‌ ದೇಶದಲ್ಲಿ ನಿರುದ್ಯೋಗ ಸಮಸ್ಯೆಯನ್ನು ಯಾವ ‌ಪ್ರಧಾನಿ ಅಥವಾ ಸಿಎಂ ಕೂಡ ಬಗೆ ಹರಿಸಲು ಆಗುವುದಿಲ್ಲ ಎಂದರು. 

ಲೋಕಸಭಾ ಮೈತ್ರಿ ಬಗ್ಗೆ ಪ್ರಸ್ತಾಪ : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ ಮುಂದುವರಿಸುತ್ತೇವೆ. ಆದರೆ ಎಷ್ಟು ಸೀಟು ಸಿಗುತ್ತದೆ ಎನ್ನುವುದು ಮಾತ್ರ ಇನ್ನೂ ಕೂಡ ತಿಳಿದಿಲ್ಲ. 

ಈ ಬಗ್ಗೆ ರಾಹುಲ್ ಗಾಂಧಿ, ವೇಣುಗೋಪಾಲ್, ಸಿದ್ದರಾಮಯ್ಯ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು. ಅಲ್ಲದೇ ತಾವು ಚುನಾವಣೆ ಸ್ಪರ್ಧೆ ಮಾಡುವ ಬಗ್ಗೆ ಇನ್ನೂ ಕೂಡ ಯಾವುದೇ ತಿರ್ಮಾನ ಮಾಡಿಲ್ಲ. ಎಂದು ಸ್ಪರ್ಧೆಯ ಬಗ್ಗೆ ಕುತೂಹಲ ಕಾಯ್ದಿಟ್ಟಿದ್ದಾರೆ.