Asianet Suvarna News Asianet Suvarna News

ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ರಕ್ಷಿಸುವಂತೆ ಸಿಎಂಗೆ ಖಾದರ್​​​ ಪತ್ರ

* ಅಫ್ಘಾನಿಸ್ತಾನದಲ್ಲಿ ಸಿಲುಕಿದ ಕನ್ನಡಿಗರ ಬಗ್ಗೆ ಯುಟಿ ಖಾದರ್ ಪತ್ರ
* ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಖಾದರ್
* ಅಫ್ಘಾನಿಸ್ತಾನದಲ್ಲಿರುವ ಕನ್ನಡಿಗರನ್ನ ತವರಿಗೆ ವಾಪಸ್ ಕರೆತರುವ ಬಗ್ಗೆ ಪತ್ರ

UT Khader writes to CM Basavaraj Bommai over Kannadigas stucked In afghanistan rbj
Author
Bengaluru, First Published Aug 18, 2021, 4:44 PM IST

ಬೆಂಗಳೂರು/ಮಂಗಳೂರು, (ಆ.18): ಅಫ್ಘಾನಿಸ್ತಾನದಲ್ಲಿ ದಿನೇ ದಿನೇ  ತಾಲಿಬಾನಿಗಳ ತಾಲಿಬಾನ್ ದಬ್ಬಾಳಿಕೆ ಶರುವಾಗಿದೆ. ಒಂದೆಡೆ ಹೇಗಾದರೂ ಮಾಡಿ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಪ್ರಯತ್ನಗಳು ನಡೆಯುತ್ತಿವೆ. 

ಇನ್ನು ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕನ್ನಡಿಗರನ್ನು ತವರಿಗೆ ವಾಪಸ್ಸು ಕರೆ ತರುವಂತೆ ಮಾಜಿ ಸಚಿವ ಯು.ಟಿ ಖಾದರ್ ಅವರು ಸಿಎಂ ಬಸವರಾಜ​​ ಬೊಮ್ಮಾಯಿಗೆ ​​ ಪತ್ರ ಬರೆದಿದ್ದಾರೆ.

ಅಫ್ಘನ್‌ನಲ್ಲಿದ್ದ 150 ಭಾರತೀಯರ ರೋಚಕ ಏರ್‌ಲಿಫ್ಟ್, ಸಾಹಸದ ಹಿಂದೆ ಇವರೇ ಕಿಂಗ್!

ಕರ್ನಾಟಕ ರಾಜ್ಯದ ಹಲವಾರು ಜನ ಅಫ್ಘಾನಿಸ್ತಾನದಲ್ಲಿದ್ದಾರೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಹಲವರು ವಿವಿಧ ವೃತ್ತಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಇತ್ತೀಚಿನ ತಾಲಿಬಾನ್​ ಬೆಳವಣಿಗೆಯಿಂದ ಜನ ಕಂಗಾಲಾಗಿದ್ದಾರೆ. ಅಫ್ಘಾನಿಸ್ತಾನದಲ್ಲಿರುವ ಕನ್ನಡಿಗರನ್ನು ವಾಪಸ್​​ ಕರೆತರಬೇಕು ಎಂದು ಖಾದರ ಪತ್ರದ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.

ಅಫ್ಘಾನಿಸ್ತಾನದಲ್ಲಿರುವ ಕನ್ನಡಿಗರ ಕುಟುಂಬಸ್ಥರ ಮಾಹಿತಿಗಾಗಿ ಉನ್ನತ ಮಟ್ಟದ ಅಧಿಕಾರಿಯನ್ನು ನೇಮಿಸಿ. ಈ ಮೂಲಕ ಎಲ್ಲರಿಗೂ ಧೈರ್ಯ ತುಂಬಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇನ್ನು ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್, ಕನ್ನಡಿಗರನ್ನು ಕೇಂದ್ರದ ಸಚಿವರ,  ಕೇಂದ್ರ ಸರ್ಕಾರದ ಸಹಾಯದಿಂದ ಸುರಕ್ಷಿತವಾಗಿ ರಾಜ್ಯಕ್ಕೆ ಕರೆ ತರುವ ಕೆಲಸ ಆಗಬೇಕು. ಈ ವಿಚಾರವಾಗಿ  CM ಬಸವರಾಜ ಬೊಮ್ಮಾಯಿ ಅವರನ್ನೂ ಭೇಟಿ ಆಗಿದ್ದೇನೆ. ಸರ್ಕಾರ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು.

Follow Us:
Download App:
  • android
  • ios