ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ ನಮ್ಮ ಹಾಗೂ ದೇಶದ ದುರ್ದೈವ. ಸುಸಂಸ್ಕೃತ ನಾಡು ಕರ್ನಾಟಕದಲ್ಲಿ ಈ ರೀತಿಯ ಪ್ರಕರಣ ನಡೆಯಬಾರದಿತ್ತು. ಇದನ್ನು ಇಡೀ ಜಗತ್ತು ನೋಡುತ್ತಿದೆ. ನಮಗೆ ನಾಚಿಕೆ ಆಗುತ್ತಿದೆ. ಮರ್ಯಾದೆ ಇರುವವರು ರಾಜಕಾರಣದಲ್ಲಿ ಇರಬಾರದು ಅನಿಸುತ್ತದೆ: ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು(ಮೇ.11): ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ನಾಚಿಕೆ ಹುಟ್ಟಿಸುತ್ತಿದೆ. ಈ ವಿಚಾರವಾಗಿ ನಿತ್ಯವೂ ಪರ ವಿರೋಧ ಮಾತನಾಡುವ ಬದಲು ತನಿಖೆ ನಡೆದು ಕೋರ್ಟ್‌ನಲ್ಲಿ ತೀರ್ಪು ಬರುವವರೆಗೂ ಎಲ್ಲರೂ ಬಾಯಿ ಮುಚ್ಚಿಕೊಂಡು ಇರುವುದು ಒಳ್ಳೆಯದು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಶುಕ್ರವಾರ ವಿಧಾನಸೌಧ ಮುಂಭಾಗದ ಬಸವೇಶ್ವರರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣ ನಮ್ಮ ಹಾಗೂ ದೇಶದ ದುರ್ದೈವ. ಸುಸಂಸ್ಕೃತ ನಾಡು ಕರ್ನಾಟಕದಲ್ಲಿ ಈ ರೀತಿಯ ಪ್ರಕರಣ ನಡೆಯಬಾರದಿತ್ತು. ಇದನ್ನು ಇಡೀ ಜಗತ್ತು ನೋಡುತ್ತಿದೆ. ನಮಗೆ ನಾಚಿಕೆ ಆಗುತ್ತಿದೆ. ಮರ್ಯಾದೆ ಇರುವವರು ರಾಜಕಾರಣದಲ್ಲಿ ಇರಬಾರದು ಅನಿಸುತ್ತದೆ ಎಂದು ತಿಳಿಸಿದ್ದಾರೆ. 

ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್‌: 2ನೇ ರೇಪ್‌ ಕೇಸಿನಲ್ಲೂ ಜಡ್ಜ್‌ ಮುಂದೆ ಸಂತ್ರಸ್ತೆಯ ಹೇಳಿಕೆ

 ಈ ಬಗ್ಗೆ ದಿನವೂ ಪರ ವಿರೋಧ ಮಾತನಾಡುವ ಬದಲು ಕಾನೂನಿದೆ, ತನಿಖೆ ನಡೆಯುತ್ತಿದೆ. ತನಿಖೆ ಪೂರ್ಣಗೊಂಡು ಅದರ ವರದಿ ಮೇಲೆ ನ್ಯಾಯಾಲಯ ಏನು ತೀರ್ಪು ನೀಡುತ್ತದೆಯೋ ಕಾಯಬೇಕು. ಅಲ್ಲಿಯವರೆಗೆ ಎಲ್ಲರೂ ಬಾಯಿ ಮುಚ್ಚಿಕೊಂಡು ಇರಬೇಕು ಎಂದರು.