ಸರ್ಕಾರ ಟನ್‌ ಕಬ್ಬಿಗೆ 3300 ರೂ. ದರ ನಿಗದಿ ಮಾಡಿದ್ದರೂ, ವಿಜಯಪುರದ ಎರಡು ಸಕ್ಕರೆ ಕಾರ್ಖಾನೆಗಳು ದರ ಘೋಷಿಸದ ಕಾರಣ ರೈತರ ಹೋರಾಟ ತೀವ್ರಗೊಂಡಿದೆ. ಹೋರಾಟಕ್ಕೆ ಬೆಂಬಲ ಸೂಚಿಸಿರುವ ರೈತ ನಾಯಕ ಚೂನಪ್ಪ ಪೂಜಾರ್, ದರ ನಿಗದಿ ಮಾಡದಿದ್ದರೆ ರಾಜ್ಯ ಬಂದ್‌ ಮಾಡುವ ಎಚ್ಚರಿಕೆ ನೀಡಿದ್ದಾರೆ.

ವಿಜಯಪುರ (ನ.14): ಟನ್ ಕಬ್ಬಿಗೆ 3300 ರುಪಾಯಿ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ‌. ಆದ್ರೆ ವಿಜಯಪುರದ ಆಲಮೇಲ್ ಕೆಪಿಆರ್ ಹಾಗೂ ನಾದ ಕೆ‌.ಡಿಯ ಜಮಖಂಡಿ ಶುಗರ್ಸ್ ದರ ಘೋಷಣೆ ಮಾಡದೆ ಯಡವಟ್ಟು ಮಾಡಿಕೊಂಡಿವೆ. ಪರಿಣಾಮ ಇಂಡಿ ಹಾಗೂ ಆಲಮೇಲ ತಾಲೂಕಿನಲ್ಲಿ ರೈತರ ಹೋರಾಟ ತೀವ್ರಗೊಂಡಿದೆ.

ರೈತ ಹೋರಾಟಕ್ಕೆ ಹುಲಿ ಚೂನಪ್ಪ ಪೂಜಾರ್ ಬೆಂಬಲ:

ಹೋರಾಟದ ಸ್ಥಳಕ್ಕೆ ರೈತ ನಾಯಕ ಗುರ್ಲಾಪುರ ರೈತ ಹುಲಿ ಚೂನಪ್ಪ ಪೂಜಾರ್ ಭೇಟಿ ನೀಡಿ ರೈತರಿಗೆ ಬೆಂಬಲ ನೀಡಿದ್ದಾರೆ. ಆಲಮೇಲ ಪಟ್ಟಣದಲ್ಲಿ ನಡೆಯುತ್ತಿದ್ದ ಹೋರಾಟದ ಸ್ಥಳಕ್ಕೆ ಆಗಮಿಸಿದ ಚೂನಪ್ಪ ಪೂಜಾರ್‌ಗೆ ರೈತರು ಸನ್ಮಾನಿಸಿ ಸ್ವಾಗತಿಸಿಕೊಂಡರು. ಬಳಿಕ ವೇದಿಕೆ ಮೂಲಕ ಕಲಬುರ್ಗಿಯಲ್ಲಿ ನೀಡಲಾಗಿರೊ ದರವನ್ನೆ ವಿಜಯಪುರದಲ್ಲೂ ರೈತರಿಗೆ ನೀಡಬೇಕು. ಕಬ್ಬು ತೂಕದಲ್ಲಿ‌ ಮೋಸ, ದರ ನಿಗದಿಗೆ ಪ್ಯಾಕ್ಟರಿಗಳು ಮಾಡ್ತಿರೊ ವಿಳಂಬ ಸರಿಯಲ್ಲ ಎಂದು ಆಕ್ರೋಶ ಹೊರಹಾಕಿದ್ರು.

ದರ ನಿಗದಿ ಮಾಡದಿದ್ರೆ ರಾಜ್ಯ ಬಂದ್

ದರ ನಿಗದಿ ಮಾಡದೆ ಹೋದ್ರೆ ಮತ್ತೆ ರಾಜ್ಯ ಬಂದ್ ಮಾಡುವ ಎಚ್ಚರಿಕೆ ನೀಡಿದ್ದಾರೆ. ಆದಷ್ಟು ಬೇಗನೇ ರೈತರಿಗೆ ದರ ನೀಡದೆ ಹೋದ್ರೆ ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಲಿವೆ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹಾಗೂ ಸಿಎಂ ಸಿದ್ದರಾಮಯ್ಯಗೆ ಚೂನಪ್ಪ ಖಡಕ್ ಎಚ್ಚರಿಕೆ ನೀಡಿದ್ದಾರೆ.