userpic
user icon
0 Min read

ವಿಜಯಪುರದಲ್ಲಿ ಶೀಘ್ರವೇ ಸಚಿವ ಸಂಪುಟ ಸಭೆ: ಎಂ.ಬಿ. ಪಾಟೀಲ್

Vijayapura to host special cabinet meeting soon says Minister MB Patil gow

Synopsis

ಮುಂದಿನ ದಿನಗಳಲ್ಲಿ ವಿಜಯಪುರ ನಗರದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಅವಳಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ನಿರ್ಣಯಗಳನ್ನು ಕೈಗೊಳ್ಳಲಾಗುವುದು.

ವರದಿ: ಷಡಕ್ಷರಿ, ಏಷ್ಯಾನೆಟ್‌ ಸುವರ್ಣನ್ಯೂಸ್ , ವಿಜಯಪುರ

ವಿಜಯಪುರ (ಏ.29): ಮುಂದಿನ ದಿನಗಳಲ್ಲಿ ವಿಜಯಪುರ ನಗರದಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗುತ್ತದೆ. ಈ ಬಗ್ಗೆ ಮೊನ್ನೆ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಸಚಿವ ಸಂಪುಟದಲ್ಲಿ ನಿರ್ಣಯಿಸಲಾಗಿದೆ. ಅವಳಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ನಿರ್ಣಯವಾಗಲಿವೆ ಎಂದು ವಿಜಯಪುರ ನಗರದಲ್ಲಿ ಸಚಿವ ಎಂ ಬಿ ಪಾಟೀಲ್ ಹೇಳಿದರು.

ಫಿಸಿಯೋಥೆರಪಿ ಕೋರ್ಸ್‌ಗೆ ನೀಟ್ ಕಡ್ಡಾಯ: ಶರಣ ಪ್ರಕಾಶ್ ಪಾಟೀಲ್

ಸಂಪುಟ ಸಭೆಗೆ ಸಿಎಂ ಸಮ್ಮತಿ ಸಿಕ್ಕಿದೆ  
ಮಲೇ ಮಹದೇಶ್ವರದಲ್ಲಿ ನಡೆದ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ವಿಜಯಪುರದಲ್ಲಿ ಸಚಿವ ಸಂಪುಟ ನಡೆಯಬೇಕೆಂದು ಮನವಿ ಮಾಡಲಾಗಿದೆ. ಸಿ ಎಂ ಸಹ ಖುಷಿಯಿಂದ ಸಮ್ಮತಿ ಸೂಚಿಸಿದ್ದಾರೆ. ಮುಂದಿನ ಎರಡು ತಿಂಗಳಲ್ಲಿ ವಿಶೇಷ  ಸಚಿವ ಸಂಪುಟ ಸಭೆಯನ್ನು ವಿಜಯಪುರದಲ್ಲಿ ಮಾಡಲಾಗುತ್ತದೆ. ವಿಜಯಪುರ ಬಾಗಲಕೋಟೆ ಜಿಲ್ಲೆಗಳಿಗೆ ಪ್ರೋತ್ಸಾಹ ಸಿಗುತ್ತದೆ. ಯೋಜನೆಗಳಿಗೆ ವೇಗ ಸಿಗುತ್ತದೆ ಎಂದಿದ್ದಾರೆ.

ಎಲ್ಲ ಶಾಸಕರ ಜೊತೆಗೆ ಚರ್ಚೆ, ಪ್ರಸ್ತಾವನೆ ಸಲ್ಲಿಕೆಯಾಗಿದೆ!
ಮಲೆ ಮಹದೇಶ್ವರ ಹಾಗೂ ಕಲಬುರಗಿಯಲ್ಲಿ ನಡೆದ ಸಭೆಯಂತೆ ವಿಜಯಪುರದಲ್ಲಿಯೂ ಕ್ಯಾಬಿನೆಟ್ ಮೀಟಿಂಗ್ ಮಾಡುತ್ತೇವೆ. ಎಲ್ಲಾ ಶಾಸಕರ ಮಾತನಾಡಿದ್ದೇನೆ ಅವರು ಪ್ರಸ್ತಾವನೆಯನ್ನು ಸಲ್ಲಿಸಿ ಅಪ್ರೂವಲ್  ಪಡೆದುಕೊಳ್ಳಬೇಕು. ಎಲ್ಲ ಇಲಾಖೆಗಳಿಂದ ಪ್ರಸ್ತಾವನೆ ಮಾಡಿಕೊಳ್ಳುತ್ತೇವೆ. ಜಿಲ್ಲೆಯ ಎಲ್ಲ ಬೇಡಿಕೆಗಳ ಈಡೇರಿಕೆಗೆ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಬಸವ ಜನ್ಮ ಭೂಮಿಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ ಎಂದರು. 

ಕಲಬುರಗಿಯಲ್ಲಿ ಸ್ಥಾಪಿತವಾಗುತ್ತಿರುವ ವಚನ ಮಂಟಪ ಬಸವ ತತ್ವದ ಹೆಗ್ಗುರುತಾಗಲಿದೆ: ಸಚಿವ ಪ್ರಿಯಾಂಕ್ ಖರ್ಗೆ

ಮುಂದಿನ ವರ್ಷ ಬಸವ ಜಯಂತಿ ವಿಜಯಪುರದಲ್ಲಿ ಆಚರಣೆ!
ಬಸವ ಜಯಂತಿಯನ್ನು ಬಸವಣ್ಣನವರ ಜನ್ಮ ಭೂಮಿ  ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಪಟ್ಟಣದಲ್ಲಿ ನಡೆಸಬೇಕೆಂಬ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ಮುಂದಿನ ಬಾರಿ ಬಸವ ಜಯಂತಿ ಮಾಡಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಬಸವಣ್ಣನವರನ್ನ ಸಾಂಸ್ಕೃತಿಕ ನಾಯಕ ಎಂದು ಮಾಡಿದ್ದಕ್ಕೆ ಕೂಡಲಸಂಗಮದಲ್ಲಿ  ಏಪ್ರಿಲ್ 30ರಂದು ರಾಜ್ಯಮಟ್ಟದ ಕಾರ್ಯಕ್ರಮ ಮಾಡಲಾಗುತ್ತಿದೆ. ಬಸವ ಸಮಿತಿ ರಾಜ್ಯ ಮಟ್ಟದಲ್ಲಿ ಬಸವ ಜಯಂತಿ ಮಾಡಲಾಗುತ್ತಿದ್ದಾರೆ. ಸಿಎಂ ಬಸವಣ್ಣನವರ ಮೂರ್ತಿಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಕೆ ಮಾಡಲಿದ್ದಾರೆ. ಮುಂದಿನ ವರ್ಷ ಬಸವನಬಾಗೇವಾಡಿಯಲ್ಲಿ ಬಸವ ಜಯಂತಿ ಕಾರ್ಯಕ್ರಮ ಮಾಡುತ್ತೇವೆ ಜೊತೆಗೆ ಬಸವ ಕಲ್ಯಾಣದಲ್ಲೂ ಬಸವ ಜಯಂತಿ‌ ಆಚರಣೆ ಮಾಡಲಾಗುತ್ತದೆ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದರು.

Download App

Latest Videos