ರಾಹುಲ್ ಗಾಂಧಿಯವರು ಭಾರತೀಯರ ಮತದಾನದ ಹಕ್ಕಿನ ಬಗ್ಗೆ ಧ್ವನಿ ಎತ್ತಿದ್ದಾರೆ. ಬಿಹಾರ್‌ನಲ್ಲಿ 65 ಲಕ್ಷ ಮತಗಳ ಅಳಿಸುವಿಕೆ ಪ್ರಶ್ನಿಸಿದ್ದಾರೆ. ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ಟೀಕಿಸಿದ್ದಾರೆ.

ಧಾರವಾಡ(ಆ.16): ಮತದಾನ ಸಹ ಭಾರತೀಯರ ಹಕ್ಕು. ಆ ಹಕ್ಕನ್ನು ಅಳಿಸಿ ಹಾಕುವುದು ಅಪರಾಧ. ನಮ್ಮ ನಾಯಕ ರಾಹುಲ್‌ ಗಾಂಧಿ ಪ್ರಸ್ತುತ ಮಾತನಾಡುತ್ತಿರುವುದು ಭಾರತೀಯರ ಹಕ್ಕಿನ ಬಗ್ಗೆ ಎಂದು ಸಚಿವ ಸಂತೋಷ ಲಾಡ್‌ ಶುಕ್ರವಾರ ಧಾರವಾಡದಲ್ಲಿ ಪ್ರತಿಕ್ರಿಯಿಸಿದ್ದಾರೆ.

Add Asianetnews Kannada as a Preferred SourcegooglePreferred

ಮತಗಳ್ಳತನ ಸಂಗತಿಯು ಸದ್ಯ ಸುಪ್ರೀಂ ಕೋರ್ಟ್‌ ವರೆಗೂ ಹೋಗಿದೆ. ಬಿಹಾರ್‌ನಲ್ಲಿ 65 ಲಕ್ಷ ಮತಗಳನ್ನು ಅಳಿಸಲಾಗಿದೆ. ಹೀಗಾಗಿ ರಾಹುಲ್‌ ಗಾಂಧಿ ಚುನಾವಣಾ ಆಯೋಗದ ಬಗ್ಗೆ ಮಾತನಾಡಿದ್ದಾರೆ. ಬಿಜೆಪಿಯವರಿಗೆ ಈ ಬಗ್ಗೆ ಮಾಹಿತಿ ಇದೆಯಾ? ಎಂದ ಲಾಡ್‌, ಓರ್ವ ಮಹಿಳೆಗೆ 35 ವಯಸ್ಸಿದೆ. ಆದರೆ, ಮತದಾರ ಪಟ್ಟಿಯಲ್ಲಿ 124 ವಯಸ್ಸು ತೋರಿಸಿದ್ದಾರೆ. ನಾವು ಈ ಬಗ್ಗೆ ಚುನಾವಣಾ ಆಯೋಗವನ್ನು ಕೇಳಿದ್ದೇವೆ. ಆದರೆ ಬಿಜೆಪಿ ಅವರೇಕೆ ಮಧ್ಯೆ ಪ್ರವೇಶಿಸುತ್ತಿದ್ದಾರೆ? ಎಂದರು.

ಇದನ್ನೂ ಓದಿ: Voter List Row: ಮತದಾರರ ಪಟ್ಟಿಯಿಂದ ನನ್ನ ಹೆಸರೇ ಕೈಬಿಟ್ಟಿದ್ದರು: ಸಚಿವ ಕೃಷ್ಣ ಬೈರೇಗೌಡ ಗಂಭೀರ ಆರೋಪ!

ಚುನಾವಣಾ ಆಯೋಗ ತಪ್ಪು ಮಾಡಿಲ್ಲ ಎಂದು ಒಪ್ಪಿಕೊಳ್ಳಬೇಕು. ಇಲ್ಲದಿದ್ದರೆ ದಾಖಲಾತಿ ನೀಡಬೇಕು. ರಾಹುಲ್ ಗಾಂಧಿ ಸಾರ್ವಜನಿಕರಿಗೆ ಅನೂಕೂಲವಾಗುವಂತೆ ಟೀಕೆ ಮಾಡುತ್ತಾರೆ ಎಂದು ತಿಳಿಸಿದರು.