ಕಾನೂನು ಹೋರಾಟವನ್ನ ನಮ್ಮ ವಕೀಲರು ಮಾಡುತ್ತಾರೆ. ಇವತ್ತು ಅಪಾರ ಸಂಖ್ಯೆಯಲ್ಲಿ ಬೆಂಬಲಿಗರ ನನ್ನ ಸ್ವಾಗತಕ್ಕೆ ಬಂದಿದ್ದಾರೆ. ನಾನು ಯಾರನ್ನೂ ಕರೆದಿಲ್ಲ, ಅವರೇ ಪ್ರೀತಿಯಿಂದ ಬಂದಿದ್ದಾರೆ. ನನಗೆ ಯಾವ ಭಯವೂ ಇಲ್ಲ. ನಾನು ಭಯಗೊಂಡ ರೀತಿ ಕಾಣುತ್ತಿದ್ದೀನಾ? ಅಂತ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ 

ಮೈಸೂರು(ಸೆ.27): ನಾನು ಯಾಕೆ ರಾಜೀನಾಮೆ ಕೊಡಲಿ. ನಾನು ಏನು ತಪ್ಪು ಮಾಡಿದ್ದೇನೆ ಹೇಳಿ. ನಾನು ಯಾವ ತಪ್ಪು ಮಾಡಿಲ್ಲ. ರಾಜೀನಾಮೆ ಪ್ರಶ್ನೆಗಳೇ ಬರುವುದಿಲ್ಲ. ನನ್ನ ಕಂಡರೇ ವಿಪಕ್ಷಗಳಿಗೆ ಭಯ. ಹೀಗಾಗಿ ಪದೇ ಪದೇ ನನ್ನ ಟಾರ್ಗೆಟ್ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಪಕ್ಷಗಳ ವಿರುದ್ಧ ಹರಿಹಾಯ್ದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು(ಶುಕ್ರವಾರ) ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಇದು ನನ್ನ ಜೀವನದ ರಾಜಕೀಯ ಸಂಬಂಧದ ಮೊದಲ ಕೇಸ್. ನಾನು ಮತ್ತೆ ಹೇಳುತ್ತಿದ್ದೇನೆ. ಇದು ರಾಜಕೀಯ ಸಂಬಂಧದ ಮೊದಲ ಕೇಸ್. ಪ್ಲೀಸ್ ಅಂಡರ್ ಲೈನ್ ದಿಸ್ ವರ್ಡ್ ಎಂದು ಹೇಳಿದ್ದಾರೆ. 

ಭಂಡತನ ಬಿಟ್ಟು ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಕೇಂದ್ರದ ಮಾಜಿ ಸಚಿವ ಭಗವಂತ ಖೂಬಾ

ಕಾನೂನು ಹೋರಾಟವನ್ನ ನಮ್ಮ ವಕೀಲರು ಮಾಡುತ್ತಾರೆ. ಇವತ್ತು ಅಪಾರ ಸಂಖ್ಯೆಯಲ್ಲಿ ಬೆಂಬಲಿಗರ ನನ್ನ ಸ್ವಾಗತಕ್ಕೆ ಬಂದಿದ್ದಾರೆ. ನಾನು ಯಾರನ್ನೂ ಕರೆದಿಲ್ಲ, ಅವರೇ ಪ್ರೀತಿಯಿಂದ ಬಂದಿದ್ದಾರೆ. ನನಗೆ ಯಾವ ಭಯವೂ ಇಲ್ಲ. ನಾನು ಭಯಗೊಂಡ ರೀತಿ ಕಾಣುತ್ತಿದ್ದೀನಾ? ಅಂತ ಪ್ರಶ್ನಿಸಿದ್ದಾರೆ. 

ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಎಸಿಬಿಯೇ ಇದೆ. ಇದಕ್ಕೆ ಯಾಕೆ ಕುಮಾರಸ್ವಾಮಿ ಮಾತನಾಡಲ್ಲ. ನಾನು ಲೋಕಾಯುಕ್ತವನ್ನ ಮುಚ್ಚಿಲ್ಲ. ಎಸಿಬಿ ರಚನೆ ಮಾಡಿದ್ದೇನೆ ಅಂತ ಹೇಳಿದ್ದಾರೆ.