‘ಡೀಸೆಲ್ ದರದ 40 ರೂಪಾಯಿ ವ್ಯಾತ್ಯಾಸ ನೋಡಿ ನನಗೇ ಗಾಬರಿ ಆಯ್ತು’ ಸಿಎಂ ಡಿಕೆ ಶಿವವಕುಮಾರ್ ಹೇಳಿಕೆ ನೀಡಿದ ಹಿನ್ನೆಲೆ ಸಾರಿಗೆ ಬಸ್ಸುಗಳ ಟಿಕೆಟ್ ದರ ಹೆಚ್ಚಳವಾಗುವ ಸಾಧ್ಯತೆಯೂ ಇದೆ. ನಿಗಮಗಳ ಉಳಿವು ಹೂ ಜನರ ಹಿತ ಎರಡನ್ನೂ ಗಮನದಲ್ಲಿಟ್ಕೊಂಡು ತೀರ್ಮನಾ ಮಾಡಲಾಗುತ್ತೆ ಎಂದು ಸಿಎಂ ಹೇಳಿದ್ದಾರೆ.

ಬೆಂಗಳೂರು (ಜೂ.21): ಡೀಸೆಲ್‌ ದರ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಟಿಕೆಟ್‌ ದರ ಹೇರಿಕೆ ವಿಚಾರದಲ್ಲಿ ಜನರ ಹಿತ ಗಮನದಲ್ಲಿಟ್ಟುಕೊಂಡು ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡೀಸೆಲ್ ದರ ಹೆಚ್ಚಾದ್ರೆ ಟಿಕೆಟ್ ಬೆಲೆಯೂ ಹೆಚ್ಚಳಕ್ಕೆ ತೀರ್ಮಾನ

ಸಂಪುಟ ಸಭೆ ಬಳಿಕ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿ ವೇಳೆ, ಸಾರಿಗೆ ನಿಗಮಗಳು ಟಿಕೆಟ್‌ ದರ ಹೆಚ್ಚಿಸಲು ಇಟ್ಟಿರುವ ಪ್ರಸ್ತಾವನೆ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಖಾಸಗಿ ಹಾಗೂ ನಿಗಮದ ಡಿಪೋಗಳಲ್ಲಿನ ಡೀಸೆಲ್ ಬೆಲೆ ವ್ಯತ್ಯಾಸ ದರ ಸುಮಾರು 40 ರು.ಗಳಷ್ಟಿದೆ. ಇದನ್ನು ನೋಡಿದಾಗ ಗಾಬರಿ ಆಯಿತು. ಈ ಹಿಂದೆ ಡೀಸೆಲ್ ಬೆಲೆ ಹೆಚ್ಚಾದರೆ ಟಿಕೆಟ್ ಬೆಲೆ ಹೆಚ್ಚಳ ಆಗಬೇಕು ಎಂದು ತೀರ್ಮಾನ ಮಾಡಲಾಗಿತ್ತು. ಇದರ ಬಗ್ಗೆ ಮತ್ತೊಮ್ಮೆ ಪರಿಶೀಲನೆ ಮಾಡಬೇಕು. ಹಾಗಾಗಿ ಅಧಿಕಾರಿಗಳಿಗೆ ವರದಿ ನೀಡಲು ಹೇಳಿದ್ದೇನೆ. ವರದಿ ಬಂದ ಬಳಿಕ ಕೆಎಸ್ಆರ್‌ಟಿಸಿಯೂ ಉಳಿಬೇಕು. ಜನರಿಗೂ ಅನಾನುಕೂಲ ಆಗಬಾರದು ಆ ರೀತಿ ತೀರ್ಮಾನ ಮಾಡಲಾಗುವುದು ಎಂದರು.

ಜನಹಿತ ದೃಷ್ಟಿಯಲ್ಲಿಟ್ಕೊಂಡು ತೀರ್ಮಾನ

ಪ್ರಧಾನ ಮಂತ್ರಿಗಳೇ ಸಾರ್ವಜನಿಕ ಸಾರಿಗೆಗಳನ್ನು ಬಳಸಿ ಇಂಧನ ಉಳಿಸಿ ಎಂದು ಮಾರ್ಗದರ್ಶನ ನೀಡಿದ್ದಾರೆ. ಇದರ ಬಗ್ಗೆ ಜನರ ಹಿತ ದೃಷ್ಟಿಯಲ್ಲಿಟ್ಟುಕೊಂಡು ತೀರ್ಮಾನ ಮಾಡಲಾಗುವುದು. ಖಾಸಗಿಯವರು ಡಿಪೋಗಳ ಬದಲಾಗಿ ಸಾರ್ವಜನಿಕರಿಗೆ ಇರುವ ಬಂಕುಗಳಲ್ಲಿ ಡಿಸೇಲ್ ಖರೀದಿ ಮಾಡುತ್ತಿದ್ದಾರೆ. ಇದರ ಬಗ್ಗೆ ವರದಿ ಕೇಳಿದ್ದೇನೆ ಎಂದರು.