ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಚಳಿಯ ವಾತಾವರಣ ಇದ್ದು ಇದೀಗ ಮತ್ತಷ್ಟು ದಿನ ಚಳಿ ಮುಂದುವರಿಯಲಿದೆ ಎಂದು ಎಚ್ಚರಿಸಲಾಗಿದೆ.
ಬೆಂಗಳೂರು (ಫೆ.05): ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಫೆ.8ರವರೆಗೂ ಒಣಹವೆ ವಾತಾವರಣ ಮುಂದುವರಿಯಲಿದ್ದು, ಬೀದರ್ನಲ್ಲಿ ರಾಜ್ಯದ ಕನಿಷ್ಠ ತಾಪಮಾನ ದಾಖಲಾಗಿದೆ
ಉತ್ತರ ಒಳನಾಡಿನ ಬೀದರ್ ಸೇರಿದಂತೆ ಕೆಲವು ಪ್ರದೇಶಗಳಲ್ಲಿ ತಾಪಮಾನ ಇಳಿಕೆಯಾಗಿ ಚಳಿ ಹೆಚ್ಚಾಗಿದೆ. ಗುರುವಾರ ಬೀದರ್ನಲ್ಲಿ ರಾಜ್ಯದ ಕನಿಷ್ಠ 8 (ಗರಿಷ್ಠ 28.6) ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಫೆ.3ರಂದು 8.2 ಡಿ.ಸೆ. ತಾಪಮಾನ ದಾಖಲಾಗಿತ್ತು.
ಉಳಿದಂತೆ ಹಾಸನದಲ್ಲಿ 11.4, ವಿಜಯಪುರ 12, ಧಾರವಾಡ 13, ಬೆಳಗಾವಿ ವಿಮಾನ ನಿಲ್ದಾಣ 14, ದಾವಣಗೆರೆ 14.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ರಾಜ್ಯದ ಗರಿಷ್ಠ ತಾಪಮಾನ 36.1 ಡಿಗ್ರಿ ಸೆಲ್ಸಿಯಸ್ ಕಾರವಾರದಲ್ಲಿ ದಾಖಲಾಗಿದೆ.
ಮೆಂತ್ಯ, ಈರುಳ್ಳಿ ಬಳಸಿ ಈ ಚಳಿಗಾಲದಲ್ಲಿ ಕೂದಲಿನ ಅರೋಗ್ಯ ಹೆಚ್ಚಿಸಿ .
ರಾಜ್ಯದಲ್ಲಿ ಫೆ.8ರವರೆಗೂ ಬಹುತೇಕ ಪ್ರದೇಶಗಳಲ್ಲಿ ಈಗಿರುವ ಒಣಹವೆ ವಾತಾವರಣವೇ ಮುಂದುವರಿಯಲಿದೆ. ಕೆಲವು ಕಡೆಗಳಲ್ಲಿ ಬೆಳಗ್ಗೆ ಮಂಜು ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 28ರಿಂದ 30 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 17ರಿಂದ 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 5, 2021, 7:40 AM IST