ಕರ್ನಾಟಕದ ಹಲವೆಡೆ ಭಾರೀ ಮಳೆ, ಸಿಡಿಲು ಬಡಿದು ಮಹಿಳೆ ಸಾವು
ಕಲಬುರಗಿ, ಚಾಮರಾಜನಗರ, ಬೆಂಗಳೂರು ಮತ್ತು ಚಿತ್ರದುರ್ಗದಲ್ಲಿ ಕೆಲಕಾಲ ಉತ್ತಮ ಮಳೆ ಸುರಿದಿದೆ. ಕಲಬುರಗಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಸಿಡಿಲು ಬಡಿದು ಅಫಜಲ್ಪುರ ತಾಲೂಕಿನ ಸಿದನೂರ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಲಾವತಿ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಬೆಂಗಳೂರು(ಸೆ.03): ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಶನಿವಾರವೂ ಮಳೆ ಮುಂದುವರಿದಿದ್ದು, ಕಲಬುರಗಿಯಲ್ಲಿ ಸಿಡಿಲಿಗೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ.
ಕಲಬುರಗಿ, ಚಾಮರಾಜನಗರ, ಬೆಂಗಳೂರು ಮತ್ತು ಚಿತ್ರದುರ್ಗದಲ್ಲಿ ಕೆಲಕಾಲ ಉತ್ತಮ ಮಳೆ ಸುರಿದಿದೆ. ಕಲಬುರಗಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಸಾಧಾರಣ ಮಳೆಯಾಗಿದ್ದು, ಸಿಡಿಲು ಬಡಿದು ಅಫಜಲ್ಪುರ ತಾಲೂಕಿನ ಸಿದನೂರ ಗ್ರಾಮದಲ್ಲಿ ಹೊಲದಲ್ಲಿ ಕೆಲಸ ಮಾಡುತ್ತಿದ್ದ ಕಲಾವತಿ ಎಂಬ ಮಹಿಳೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಇದೇ ವೇಳೆ ಸವಿತಾ ಎಂಬ ಮಹಿಳೆಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಮಗಳೂರು: ಕೈಕೊಟ್ಟ ವರುಣದೇವ, ಮಳೆಗಾಗಿ 37 ವರ್ಷದ ಹಿಂದಿನ ಆಚರಣೆಗೆ ಮುಂದಾದ ಮಲೆನಾಡಿಗರು..!
ಇನ್ನು ಚಾಮರಾಜನಗರ ಜಿಲ್ಲೆಯ ಯಳಂದೂರಿನಲ್ಲಿ ಸತತ ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಧ್ಯಾಹ್ನ 3 ಗಂಟೆಗೆ ಆರಂಭವಾದ ಮಳೆಯಿಂದಾಗಿ ಪಟ್ಟಣದ ಬಸ್ ನಿಲ್ದಾಣ ಮತ್ತು ಸಂತೆ ಮಾರುಕಟ್ಟೆ ಬಳಿ ಕೆಲಕಾಲ ಕೃತಕ ಪ್ರವಾಹ ಸೃಷ್ಟಿಯಾಗಿತ್ತು.