Asianet Suvarna News Asianet Suvarna News

Makara Sankranti: ಕೃಷ್ಣ ನದಿಯಲ್ಲಿ ಪುಣ್ಯಸ್ನಾನಕ್ಕೆ ಹೋದ ಮಹಿಳೆ ನೀರು ಪಾಲು

ರಾಜ್ಯದಲ್ಲಿ ಮಕರ ಸಂಕ್ರಾಂತಿ ಹಬ್ಬದ ದಿನದಂದೇ ಕೃಷ್ಣ ನದಿಯಲ್ಲಿ ಪುಣ್ಯಸ್ನಾನಕ್ಕೆ ಹೋದ ಮಹಿಳೆ ನೀರು ಪಾಲಾಗಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿ ಬಳಿ ಘಟನೆ ನಡೆದಿದೆ. 

Women Drowned in Krishna River at Yadagiri gvd
Author
Bangalore, First Published Jan 16, 2022, 12:15 AM IST

ಯಾದಗಿರಿ (ಜ. 16): ರಾಜ್ಯದಲ್ಲಿ (Karnataka) ಮಕರ ಸಂಕ್ರಾಂತಿ (Makar Sankranti) ಹಬ್ಬದ ದಿನದಂದೇ ಕೃಷ್ಣ ನದಿಯಲ್ಲಿ (Krishna River) ಪುಣ್ಯಸ್ನಾನಕ್ಕೆ ಹೋದ ಮಹಿಳೆ ನೀರು ಪಾಲಾಗಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶೆಳ್ಳಗಿ ಬಳಿ ಘಟನೆ ನಡೆದಿದೆ. ಸುರಪುರ ನಗರದ ನಿವಾಸಿ ಕಾವೇರಿ (35) ನೀರು ಪಾಲಾದ‌ ಮಹಿಳೆ. ಮೃತಪಟ್ಟ ಕಾವೇರಿ ಖಾಸಗಿ‌‌ ಶಾಲೆಯ ಶಿಕ್ಷಕಿಯಾಗಿದ್ದರು. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುಣ್ಯಸ್ನಾನಕ್ಕೆ ತೆರಳಿದ್ದ ಗೆಳೆಯರು ನೀರುಪಾಲು: ನದಿಗೆ ತೆರಳಲು ಆಗದಿದ್ದವರು ಮನೆಗಳಲ್ಲಿಯೇ ಎಣ್ಣೆ ಸ್ನಾನ ಮಾಡ್ತಾರೆ. ಆದರೆ ಶುಕ್ರವಾರ ನದಿ ಸ್ನಾನಕ್ಕೆ ತೆರಳಿದ್ದ ಗೆಳೆಯರಿಬ್ಬರು ನೀರು ಪಾಲಾಗಿದ್ದಾರೆ. ಗಣೇಶ್ (42) ಮತ್ತು ಉದಯ್ (43) ಮೃತ ಗೆಳೆಯರು. ಹಬ್ಬದ ಹಿನ್ನೆಲೆ ಗಣೇಶ್, ಉದಯ ಸೇರಿದ ಗೆಳೆಯರ ಗುಂಪು ಪುಣ್ಯಸ್ನಾನಕ್ಕಾಗಿ ರಾಯಚೂರು ತಾಲೂಕಿನ ಶಕ್ತಿನಗರದ ಬಳಿಯ ಕೃಷ್ಣಾ ನದಿಗೆ ತೆರಳಿದ್ದರು. ಈ ವೇಳೆ ಇಬ್ಬರು ಜಲಸಮಾಧಿ ಆಗಿದ್ದಾರೆ. 

20 ವರ್ಷಗಳ ವೈಜ್ಞಾನಿಕ ಎಚ್‌ಐವಿ, ಕೊರೋನಾ ಸೇರಿ ವಿವಿಧ ವೈರಸ್‌ ಸಂಗ್ರಹ ನೀರುಪಾಲು

ಸದ್ಯ ಗಣೇಶ್ ಮೃತದೇಹ ಪತ್ತೆಯಾಗಿದ್ದು, ಉದಯ್​ ಶವಕ್ಕಾಗಿ ಹುಡುಕಾಟ ನಡೆಸಲಾಗುತ್ತಿದೆ. ಗಣೇಶ್ ನಿಜಲಿಂಗಪ್ಪ ಕಾಲೋನಿಯ ನಿವಾಸಿಯಾಗಿದ್ರೆ, ಉದಯ್ KEB ಕಾಲೋನಿಯ ನಿವಾಸಿಯಾಗಿದ್ದಾರೆ. ಮಕರ ಸಂಕ್ರಾಂತಿ ಸಂಭ್ರಮದಲ್ಲಿ ಮನೆಯಲ್ಲಿ ಸಾವಿನ ಸೂತಕದ ಛಾಯೆ ಆವರಿಸಿದೆ.ಉದಯ್ ಮತ್ತು ಗಣೇಶ್ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆ ಸಂಬಂಧ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್‌ನಲ್ಲಿ ಸೇತುವೆ ದಾಟುತ್ತಿದ್ದ ಯುವಕ ನೀರುಪಾಲು: ಹಳೇ ಮೈಸೂರು(Mysuru) ಭಾಗದ 2 ಜಿಲ್ಲೆಗಳಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಯಿಂದ(Rain) ಕೃಷಿ ಬೆಳೆಗಳಿಗೆ ಹಾನಿಯಾಗಿದ್ದು ಸೇತುವೆ ದಾಟುತ್ತಿದ್ದ ಯುವಕನೊಬ್ಬ ಬೈಕ್‌ ಸಮೇತ ಕೊಚ್ಚಿಕೊಂಡು ಹೋಗಿರುವ ಘಟನೆ ನಡೆದಿದೆ.  ಮಂಡ್ಯ(Mandya) ಜಿಲ್ಲೆ ಕೆ.ಆರ್‌.ಪೇಟೆ ತಾಲೂಕಿನ ಕೈಗೋನಹಳ್ಳಿ ಗ್ರಾಮದ ಉದಯಶಂಕರ್‌ (27) ನೀರಿನ ಪ್ರವಾಹದಲ್ಲಿ(Flood) ಕೊಚ್ಚಿ ಹೋದ ಯುವಕ. 

Haveri Road Accident: ರಟ್ಟಿಹಳ್ಳಿ ಬಳಿ ಭೀಕರ ಅಪಘಾತ: 4 ಮಂದಿ ಸಾವು

ಶುಕ್ರವಾರ ಸಂಜೆ ಕಾರ್ಯನಿಮಿತ್ತ ಸಮೀಪದ ಮಲ್ಲೇನಹಳ್ಳಿಗೆ ಹೋಗಿದ್ದ ದಯ ಕುಮಾರ್‌ ರಾತ್ರಿ ಹಿಂತಿರುಗುವ ವೇಳೆ ಕೈಗೋನಹಳ್ಳಿ- ಸಾರಂಗಿ ನಡುವೆ ಹಳ್ಳ ದಾಡುವ ವೇಳೆ ನೀರಿನ ರಭಸಕ್ಕೆ ಸಿಕ್ಕಿ ಬೈಕ್‌ ಸಮೇತ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಮೃತದೇಹಕ್ಕಾಗಿ (Deadbody) ಶೋಧ ಮುಂದುವರಿದಿದೆ. ಇನ್ನು ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ಶುಕ್ರವಾರ ಸುರಿದ ಭಾರಿ ಮಳೆಯಿಂದ ಲಕ್ಷಾಂತರ ರು. ಮೌಲ್ಯದ ಬಾಳೆ ಮತ್ತು ಈರುಳ್ಳಿ ಬೆಳೆ ನಾಶವಾಗಿರುವ (Crop Damage) ಘಟನೆ ತಾಲೂಕಿನ ದೇಪೆಗೌಡನಪುರ ಗ್ರಾಮದಲ್ಲಿ ನಡೆದಿದೆ.

Follow Us:
Download App:
  • android
  • ios