Asianet Suvarna News Asianet Suvarna News

ಸಭೆ ಮುಕ್ತಾಯ: ಅಧಿಕಾರಿಗಳಿಗೆ ಖಡಕ್ ಸೂಚನೆಗಳನ್ನ ಕೊಟ್ಟ ಸಿಎಂ!

ಸಾರಿಗೆ ನಿಗಮಗಳ ನೌಕರರ ಮುಷ್ಕರ ಹಾಗೂ ರಾಜ್ಯದಲ್ಲಿ ಕೋವಿಡ್-19 ಎರಡನೇ ಅಲೆ ನಿಯಂತ್ರಣಕ್ಕೆ ತರುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಂಗಳವಾರ ಉನ್ನತ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು.  ಸಭೆಯ ಮಾಹಿತಿ ಇಲ್ಲಿದೆ..

Yediyurappa Meeting with officers about KSRTC Workers Protest and Coronavirus rbj
Author
Bengaluru, First Published Apr 13, 2021, 9:05 PM IST

ಬೆಂಗಳೂರು, (ಏ.13): ಪ್ರಾಯೋಗಿಕವಾಗಿ ಹತ್ತು ನಗರಗಳಲ್ಲಿ ಜಾರಿ ಮಾಡಲಾಗಿರುವ ನೈಟ್ ಕರ್ಫ್ಯೂ ಇನ್ನಷ್ಟು ಬಿಗಿಗೊಳಿಸಬೇಕೆಂದು ಸಿಎಂ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ಕೊಟ್ಟಿದ್ದಾರೆ.

 ಯುಗಾದಿ ದಿನ ಇಂದು (ಮಂಗಳವಾರ) ಹಿರಿಯ ಅಧಿಕಾರಿಗಳ ಜೊತೆ ತಮ್ಮ‌ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿದರು.ಸಭೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಪೊಲೀಸ್ ಕಮಿಷನರ್ ಕಮಲ್ ಪಂಥ್, ಸಾರಿಗೆ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

ಕೊರೋನಾ ಕಂಟ್ರೋಲ್‌ಗೆ ಮತ್ತೊಂದೆಜ್ಜೆ ಮುಂದಿಟ್ಟ ಸರ್ಕಾರ!

ಮೊದಲು ಸಾರಿಗೆ ನೌಕರರ ಮುಷ್ಕರದ ಬಗ್ಗೆ ಚರ್ಚೆ ನಡೆಸಿದ ಸಿಎಂ, ಸಾರಿಗೆ ನೌಕರರ ಮುಷ್ಕರದ ವಿಚಾರದಲ್ಲಿ ಸರ್ಕಾರದ ಬಿಗಿ ನಿಲುವು ಸಡಿಲಿಸುವ ಯಾವುದೇ ಉದ್ದೇಶ ತಮಗಿಲ್ಲವೆಂದು ಯಡಿಯೂರಪ್ಪ ಸ್ಪಷ್ಟಪಡಿಸಿದರು. ಕೋವಿಡ್-19 ಸ್ಥಿತಿಗತಿ ಮತ್ತು ಲಭ್ಯತೆಯನ್ನು ಪರಿಶೀಲಿಸಿ ಖಾಸಗಿ ಆಸ್ಪತ್ರೆಗಳಿಗೆ ರೆಮೆಡಿಸಿವಿರ್ ಔಷಧಿ ಪೂರೈಕೆ ಬಗ್ಗೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಕೆಲಸಕ್ಕೆ ಬಾರದ ನೌಕರರ ವಿರುದ್ಧ ಕ್ರಮ
ಕೆಲಸಕ್ಕೆ ಹಾಜರಾಗುವ ಸಾರಿಗೆ ನಿಗಮಗಳ ನೌಕಕರಿಗೆ ಭದ್ರತೆ ನೀಡಬೇಕು. ಸಂಸ್ಥೆಯ ಬಸ್​ಗಳಿಗೆ ಹಾನಿ‌ ಮಾಡುವ ಹಾಗೂ ನೌಕರರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಲಾಯಿತು. 6ನೇ ವೇತನ‌ ಜಾರಿ ಅಸಾಧ್ಯ ಎಂಬ ಮಾತನ್ನು ಮುಖ್ಯಮಂತ್ರಿ ಪುನರುಚ್ಚರಿಸಿದರು. ಈ ಬಗ್ಗೆ ನೌಕರರಿಗೆ ಮನವರಿಕೆ ಮಾಡಿಕೊಡಲು ಸಭೆ ನಿರ್ಧರಿಸಿತು. ಅವಶ್ಯಕತೆ ಇದ್ದರೆ ಪ್ರತಿ ಬಸ್​ಗೆ ಒಬ್ಬ ಕಾನ್ಸ್‌ಟೇಬಲ್ ನಿಯೋಜಿಸಿ ಭದ್ರತೆ ಒದಗಿಸಿ. ಕೆಲಸಕ್ಕೆ ಬಾರದ ನೌಕರರ ವಿರುದ್ಧ ಇನ್ನಷ್ಟು ಬಿಗಿ ಕ್ರಮಕೈಗೊಳ್ಳಬೇಕು ಎಂದು ಯಡಿಯೂರಪ್ಪ ಸೂಚಿಸಿದರು.

ಮುಷ್ಕರ: ಸಾರಿಗೆ ನೌಕರರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಮಾತು

ಖಾಸಗಿ ಆಸ್ಪತ್ರೆ ಬೆಡ್​ಗಳ ಮಾಹಿತಿ
Yediyurappa Meeting with officers about KSRTC Workers Protest and Coronavirus rbj

ಖಾಸಗಿ ಆಸ್ಪತ್ರೆಗಳಲ್ಲಿ ಖಾಲಿಯಿರುವ ಬೆಡ್​ಗಳ ಕ್ಷಣಕ್ಷಣದ ಮಾಹಿತಿ ಪಡೆಯಲು ಸಭೆ ತೀರ್ಮಾನ ಮಾಡಲಾಯಿತು. ಲಸಿಕೆ ಕೊರತೆ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಅವಶ್ಯಕತೆಗೆ ಅನುಗುಣವಾಗಿ‌ ಲಸಿಕೆಯ ದಾಸ್ತಾನು ಪಡೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು. ಕೊರೊನಾ ಸೋಂಕು ತಡೆ ದೃಷ್ಟಿಯಿಂದ ನೈಟ್ ಕರ್ಫ್ಯೂವನ್ನು ಇನ್ನಷ್ಟು ಬಿಗಿಗೊಳಿಸಲು ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಲಾಯಿತು.

ರಾಜ್ಯದಲ್ಲಿ ಅಗತ್ಯವಿರುವ ಸ್ಥಳಗಳಲ್ಲಿ ಮೈಕ್ರೊಕಂಟೇನ್​ಮೆಂಟ್ ವಲಯಗಳನ್ನು ಘೋಷಿಸಲು ಮುಖ್ಯಮಂತ್ರಿ ಸೂಚನೆ ನೀಡಿದರು. ಇಂಥ ವಲಯಗಳಲ್ಲಿ ಪರೀಕ್ಷೆಗಳನ್ನು ಹೆಚ್ಚಿಸಬೇಕು. ಸಂಪರ್ಕಿತರನ್ನು ಪತ್ತೆಹಚ್ಚಲು ಗಮನ ನೀಡಬೇಕು. ಮಾಸ್ಕ್​ ಹಾಕದಿರುವುದು ಮತ್ತು ಇತರ ಕೊವಿಡ್ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕೆಂದು ಯಡಿಯೂರಪ್ಪ ಹೇಳಿದರು.

Follow Us:
Download App:
  • android
  • ios