Asianet Suvarna News Asianet Suvarna News

ಪ್ರಧಾನಿ ನಮ್ಮೆಲ್ಲರ ಸ್ಪೂರ್ತಿಯ ಮೂಲ: ಇಸ್ರೋ ಅಧ್ಯಕ್ಷ!

ಚಂದ್ರಯಾನ-2 ಯೋಜನೆ ಹಿನ್ನಡೆ ಹಿನ್ನೆಲೆ|  ಲ್ಯಾಂಡರ್ ಸಂಪರ್ಕ ಕಡಿತದ ಕುರಿತು ಇಸ್ರೋ ಅಧ್ಯಕ್ಷ ಪ್ರತಿಕ್ರಿಯೆ| ‘14 ದಿನಗಳ ಕಾಲ ಲ್ಯಾಂಡರ್’ನೊಂದಿಗೆ ಸಂಪರ್ಕ ಸಾಧಿಸುವ ಪ್ರಯತ್ನ’| ಪ್ರಧಾನಿ ಮೋದಿ ನಮ್ಮೆಲ್ಲರ ಸ್ಫೂರ್ತಿಯ ಮೂಲ ಎಂದ ಕೆ. ಸಿವನ್|

ISRO Chief K Sivan After Loss Of Contact With Chandrayaan-2 Lander
Author
Bengaluru, First Published Sep 7, 2019, 9:57 PM IST

ನವದೆಹಲಿ(ಸೆ.07): ಚಂದ್ರಯಾನ-2 ಲ್ಯಾಂಡರ್ ಸಂಪರ್ಕ ಕಡಿತದ ಕುರಿತು ಇಸ್ರೋ ಅಧ್ಯಕ್ಷ ಕೆ.ಸಿವನ್ ಪ್ರತಿಕ್ರಿಯಿಸಿದ್ದು, ಇನ್ನೂ 14 ದಿನಗಳ ಕಾಲ ಲ್ಯಾಂಡರ್’ನೊಂದಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತೇವೆ ಎಂದು ಹೇಳಿದ್ದಾರೆ.

ಯೋಜನೆಯ ಕೊನೆಯ ಹಂತವನ್ನು ಸರಿಯಾಗಿ ಕಾರ್ಯಗತಗೊಳಿಸಲು ಸಾಧ್ಯವಾಗಲಿಲ್ಲ, ಆ ಹಂತದಲ್ಲಿ ಲ್ಯಾಂಡರ್ ಜೊತೆ ಸಂಪರ್ಕ ಕಡಿದು ಹೋಯಿತು. ನಂತರ ಮತ್ತೆ ಸಂಪರ್ಕ ಸಾಧಿಸುವುದಕ್ಕೆ ಸಾಧ್ಯವಾಗಲಿಲ್ಲ ಎಂದು ಸಿವನ್ ಹೇಳಿದ್ದಾರೆ. 

ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಬೆಂಬಲದ ಕುರಿತು ಮಾತನಾಡಿರುವ ಸಿವನ್, ಅವರು ನಮ್ಮೆಲ್ಲರ ಸ್ಫೂರ್ತಿಯ ಮೂಲ ಎಂದು ಶ್ಲಾಘಿಸಿದ್ದಾರೆ .

ಪ್ರಧಾನಿ ನಮ್ಮೆಲ್ಲರ ಸ್ಪೂರ್ತಿ ಹಾಗೂ ಬೆಂಬಲದ ಮೂಲ. ವಿಜ್ಞಾನವನ್ನು ಫಲಿತಾಂಶಗಳಿಗಾಗಿ ಅಷ್ಟೇ ನೋಡಬಾರದು, ನಿರಂತರ ಪ್ರಯೋಗ ಫಲಿತಾಂಶಕ್ಕೆ ದಾರಿ ಮಾಡಿಕೊಡುತ್ತದೆ ಎಂಬ ವಿಶೇಷ ಅಂಶವನ್ನು ಪ್ರಧಾನಿ ತಮ್ಮ ಭಾಷಣದಲ್ಲಿ ಹೇಳಿದ್ದನ್ನು ತಾವು ಗಮನಿಸಿದ್ದಾಗಿ ಸಿವನ್ ನುಡಿದಿದ್ದಾರೆ.

Follow Us:
Download App:
  • android
  • ios