ಖಾಸಗಿ ಆಸ್ಪತ್ರೆ
(Search results - 65)Karnataka Districts28, Nov 2019, 8:36 AM IST
ಗೌರ್ನರ್ ವಾಲಾಗೆ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆ
ರಾಜ್ಯಪಾಲ ವಜುಭಾಯಿ ವಾಲಾ ಅವರು ಹೃದಯ ಸಮಸ್ಯೆಯಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಶಸ್ತ್ರಚಿಕಿತ್ಸೆ ಬಳಿಕ ರಾಜ್ಯಪಾಲರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.
Bengaluru-Urban14, Nov 2019, 9:53 AM IST
ವೋಡ್ಕಾ ಕುಡಿಸಿ ಕಾರಿನಲ್ಲೇ ಅತ್ಯಾಚಾರ ಮಾಡಿದ ವೈದ್ಯ..!
ಖಾಸಗಿ ಆಸ್ಪತ್ರೆಯ ವೈದ್ಯ ಮೇಲ್ವಿಚಾರಕನೊಬ್ಬ ವೈದ್ಯೆಯನ್ನು ಫ್ಲಾಟ್ಗೆ ಕರೆಸಿಕೊಂಡು ಬಲವಂತವಾಗಿ ವೋಡ್ಕಾ ಕುಡಿಸಿ ಅತ್ಯಾಚಾರ ನಡೆಸಿರುವ ಪ್ರಕರಣ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ. ಜೆ.ಪಿ.ನಗರದಲ್ಲಿರುವ ಖಾಸಗಿ ಆಸ್ಪತ್ರೆಯ ವೈದ್ಯ ಮೇಲ್ವಿಚಾರಕ ಶ್ರೀಧರ್ ಶ್ರೀನಿವಾಸನ್ ಅವರ ವಿರುದ್ಧ ದೂರು ದಾಖಲಾಗಿದೆ.
Politics12, Nov 2019, 12:25 PM IST
ಡಿಕೆಶಿ ಮತ್ತೊಮ್ಮೆ ಆಸ್ಪತ್ರೆಗೆ ದಾಖಲು; ಬೆಂಬಲಿಗರಿಗೆ ಕುಟುಂಬಸ್ಥರ ಅಪೀಲು
ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಆರೋಗ್ಯದಲ್ಲಿ ಮತ್ತೆ ಏರುಪೇರು ಕಂಡುಬಂದಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಳೆದೊಂದು ವಾರದ ಹಿಂದೆಯೂ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು.
ತಿಹಾರ್ ಜೈಲಿನಿಂದ ಬಿಡುಗಡೆಯಾಗಿ ಬಂದ ಬಳಿಕ ಡಿಕೆಶಿ ಆಸ್ಪತ್ರೆಗೆ ದಾಖಲಾಗುತ್ತಿರುವುದು ಇದು ಎರಡನೇ ಬಾರಿಯಾಗಿದೆ. ಅಕ್ರಮ ಹಣ ವ್ಯವಹಾರಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ (ED) ಬಂಧನಕ್ಕೊಳಗಾಗಿದ್ದ ಡಿಕೆಶಿ, 48 ದಿನಗಳ ಕಾಲ ತಿಹಾರ್ ಜೈಲಿನಲ್ಲಿದ್ದರು.
Bengaluru-Urban8, Nov 2019, 3:20 PM IST
ಬಂದ್ ಮಾಡಿ ಬಕ್ವಾಸ್; ಮುಷ್ಕರ ನಿರತ ವೈದ್ಯರಿಗೆ ಅಜ್ಜ ಫುಲ್ ಕ್ಲಾಸ್!
ಕನ್ನಡ ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಹಲ್ಲೆ ನಡೆದಿದೆ ಎಂದು ಆರೋಪಿಸಿ, ರಾಜ್ಯದ ವೈದ್ಯರು ಮುಷ್ಕರ ನಡೆಸುತ್ತಿದ್ದಾರೆ. ಬಹುತೇಕ ಖಾಸಗಿ ಆಸ್ಪತ್ರೆಗಳು ಹೊರರೋಗಿ ವಿಭಾಗದ ಸೇವೆಯನ್ನು ಸ್ಥಗಿತಗೊಳಿಸಿವೆ. ಇವುಗಳ ನಡುವೆ ಮಿಂಟೋ ಆಸ್ಪತ್ರೆಯಲ್ಲಿ ಮುಷ್ಕರ ನಡೆಸುತ್ತಿದ್ದ ವೈದ್ಯರಿಗೆ ವೃದ್ಧರೊಬ್ಬರು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
Bengaluru-Urban8, Nov 2019, 10:24 AM IST
ಕನ್ನಡದ ಪತ್ರಕರ್ತ ದಿಗಂಬರ ಯೋಗೇಶ ಗರುಡ ನಿಧನ
ಗದುಗಿನ ಖ್ಯಾತ ನಾಟಕಕಾರ ಗರುಡ ಸದಾಶಿವರಾಯರ ಮೊಮ್ಮಗ ದಿಗಂಬರ ಯೋಗೇಶ ಗರುಡ(45) ಅವರು ಇಂದು ನಿಧನರಾಗಿದ್ದಾರೆ. ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ.
state8, Nov 2019, 8:53 AM IST
ಖಾಸಗಿ OPD ಬಂದ್: ಬಹುತೇಕ ಜಿಲ್ಲೆಗಳಲ್ಲಿ ಬೆಂಬಲ, ತುರ್ತು ಸೇವೆ ಲಭ್ಯ
ರಾಜ್ಯಾದ್ಯಂತ ನಡೆಯುತ್ತಿರುವ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್ಗೆ ಜಿಲ್ಲೆಗಳಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೊಪ್ಪಳ, ಉಡುಪಿ, ಬಳ್ಳಾರಿ ಸೇರಿ ಹಲವು ಕಡೆ ಒಪಿಡಿ ಬಂದ್ ಆಗಿದ್ದರೆ ಕೊಡಗಿನಲ್ಲಿ ಬಂದ್ ಬಿಸಿ ತಟ್ಟಿಲ್ಲ. ಬಂದ್ ನಡೆಯುತ್ತಿರುವ ಆಸ್ಪತ್ರೆಗಳಲ್ಲಿಯೂ ತರ್ತು ಸೇವೆ ನೀಡಲು ಮುಂದಾಗುವ ಮೂಲಕ ವೈದ್ಯರು ಮಾನವೀಯತೆ ಮೆರೆದಿದ್ದಾರೆ. ರಾಜ್ಯದ ಯಾವ್ಯಾವ ಜಿಲ್ಲೆಗಳಲ್ಲಿ ಬಂದ್ಗೆ ಬೆಂಬಲ ಸಿಕ್ಕಿದೆ, ಸಿಕ್ಕಿಲ್ಲ, ಎಂಬ ಬಗ್ಗೆ ಇಲ್ಲಿದೆ ಮಾಹಿತಿ.
state8, Nov 2019, 7:33 AM IST
ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ್
ಇಂದು ಖಾಸಗಿ ಆಸ್ಪತ್ರೆಗಳ ಒಪಿಡಿ ಬಂದ ಮಾಡಲಾಗುತ್ತಿದೆ. ವೈದ್ಯರ ಪ್ರತಿಭಟನೆ ಹಿನ್ನೆಲೆಯಲ್ಲಿ ಬಂದ್ ಮಾಡಲಾಗುತ್ತಿದೆ.
Bengaluru-Urban2, Nov 2019, 8:01 AM IST
ಹೈ-ಕ ಅಭಿವೃದ್ಧಿಗೆ ಶ್ರಮಿಸಿದ್ದ ಮಾಜಿ ಸಚಿವ ವೈಜನಾಥ ಪಾಟೀಲ ಇನ್ನಿಲ್ಲ
ಮಾಜಿ ಸಚಿವ ವೈಜನಾಥ ಪಾಟೀಲ್[84] ಅವರು ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ನಗರದ ಶೇಷಾದ್ರಿಪುರಂನ ಫೋರ್ಟಿಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾದೆ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.ಚ
Kalaburagi24, Oct 2019, 12:11 PM IST
ಶಹಾಬಾದನಲ್ಲಿ ಡೆಂಘೀ ಭೀತಿ: ತತ್ತರಿಸಿದ ಜನತೆ
ನಗರದಲ್ಲಿ ಕಳೆದ ಮೂರು ವಾರಗಳಿಂದ ಡೆಂಘೀ ಪ್ರಕರಣ ಉಲ್ಬಣಿಸಿದ್ದು, ಸುಮಾರು 25 ಕ್ಕೂಹೆಚ್ಚು ಪ್ರಕರಣದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿವೆ. ನಗರದ ರಾಮಾ ಮೊಹಲ್ಲಾ, ಶರಣ ನಗರ, ಮಾರುಕಟ್ಟೆ, ಮಿಲತ್ ನಗರ ಪ್ರದೇಶದಲ್ಲಿ ನಗರಸಭೆ ಕಚೇರಿ ಸುತ್ತಲಿನ ಬಡಾವಣೆಗಳಲ್ಲಿ ಸಣ್ಣ ಮಕ್ಕಳು, ಯುವಕರು, ಮಹಿಳೆಯರು ಸೇರಿದಂತೆ ಎಲ್ಲ ವಯಸ್ಸಿನವರಲ್ಲಿ ಡೆಂಘೀ ಕಾಣಿಸಿಕೊಂಡಿದ್ದು,ಸಾರ್ವಜನಿಕರು ತತ್ತರಿಸಿ ಹೋಗಿದ್ದಾರೆ.
state20, Oct 2019, 12:50 PM IST
ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ಗೆ ಹೃದಯಾಘಾತ!
ಶಾಸಕ ಜಮಿರ್ ಅಹಮದ್ ಖಾನ್ಗೆ ಹೃದಯಾಘಾತ| ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜಮೀರ್ | ಜಮೀರ್ರನ್ನು ವಿಕ್ರಮ್ ಆಸ್ಪತ್ರೆಗೆ ದಾಖಲಿಸಿದ ಆಪ್ತರು | ಸ್ಟಂಟ್ ಅಳವಡಿಸಿರುವ ವೈದ್ಯರು, ಆರೋಗ್ಯದಲ್ಲಿ ಚೇತರಿಕೆ| ನಾಳೆ ಜಮೀರ್ ಅಹ್ಮದ್ ಖಾನ್ ಡಿಸ್ಚಾರ್ಜ್ ಸಾಧ್ಯತೆ| ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಡಿಸಿಎಂ ಪರಮೇಶ್ವರ್
Tumakuru19, Oct 2019, 11:23 AM IST
ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಕೆ. ಬಿ. ಸಿದ್ದಯ್ಯ ಇನ್ನಿಲ್ಲ
ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಲೇಖಕ ಕೆ.ಬಿ.ಸಿದ್ದಯ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು.writer k b siddaiah passes away in car crash
Dakshina Kannada11, Oct 2019, 8:20 AM IST
ಪ್ರಸಿದ್ಧ ಸ್ಯಾಕ್ಸೊಫೋನ್ ವಾದಕ ಕದ್ರಿ ಗೋಪಾಲನಾಥ್ ನಿಧನ
ಭಾರತದ ಪ್ರಸಿದ್ಧ ಸ್ಯಾಕ್ಸೋಫೋನ್ ವಾದಕ ಪದ್ಮಶ್ರೀ ಕದ್ರಿ ಗೋಪಾಲನಾಥ್ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಗೋಪಾಲನಾಥ್ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
NEWS22, Sep 2019, 10:09 AM IST
ಆಯುಷ್ಮಾನ್ ಭಾರತ್ 2943 ಆಸ್ಪತ್ರೆಯಲ್ಲಿ ಲಭ್ಯ’ : BPL ಕಾರ್ಡುದಾರರಿಗೆ ಬಂಪರ್
ಆಯುಷ್ಮಾನ್ ಭಾರತ್ ಯೋಜನೆಯಡಿ ರಾಜ್ಯದ 2,509 ಸರ್ಕಾರಿ ಹಾಗೂ 434 ಖಾಸಗಿ ಆಸ್ಪತ್ರೆಗಳು ಸೇರಿ ಒಟ್ಟು 2,943 ಆಸ್ಪತ್ರೆಗಳಲ್ಲಿ 1,650 ಬಗೆಯ ಚಿಕಿತ್ಸೆ ಲಭ್ಯವಿದ್ದು, ಯೋಜನೆಯಡಿ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪ್ರತಿ ಕುಟುಂಬ .5 ಲಕ್ಷ ವರೆಗೆ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.
Woman5, Sep 2019, 1:53 PM IST
74ರ ಇಳಿವಯಸ್ಸಿಗೆ ಅಮ್ಮ: ಅಜ್ಜಿಯ ಮಡಿಲಲ್ಲಿ ಅವಳಿ ಮಕ್ಕಳ ನೋಡಮ್ಮ!
74 ವರ್ಷದ ವೃದ್ಧೆಯೋರ್ವರು ಅವಳಿ ಮಕ್ಕಳಿಗೆ ಜನ್ಮ ನೀಡಿರುವ ಅಪರೂಪದ ಪ್ರಕರಣ ಆಂಧ್ರದ ಗುಂಟೂರಿನಲ್ಲಿ ನಡೆದಿದೆ. ಮಂಗಯಮ್ಮ ಎಂಬ ವೃದ್ಧೆ ತಮ್ಮ 74ನೇ ವಯಸ್ಸಿನಲ್ಲಿ ಐವಿಎಫ್ ಮೂಲಕ ಗರ್ಭಿಣಿಯಾಗಿದ್ದು, ಗುಂಟೂರಿನ ಖಾಸಗಿ ಆಸ್ಪತ್ರೆಯಲ್ಲಿ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.
NEWS5, Sep 2019, 9:38 AM IST
ಕುತ್ತಿಗೆ ಬಳಿ ಗಡ್ಡೆ ತೆಗೆಯಲು ಅಮಿತ್ ಶಾಗೆ ಶಸ್ತ್ರಚಿಕಿತ್ಸೆ
ಕತ್ತಿನ ಹಿಂಭಾಗದಲ್ಲಿ ಆಗಿದ್ದ ಗಡ್ಡೆ ತೆಗೆಯುವ ಸಲುವಾಗಿ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರು ಖಾಸಗಿ ಆಸ್ಪತ್ರೆಯೊಂದರಲ್ಲಿ ಸಣ್ಣ ಪ್ರಮಾಣದ ಶಸ್ತ್ರಚಿಕಿತ್ಸೆಗೆ ಒಳಪಟ್ಟರು.