KSRTC Pallakki AC Bus Mangaluru To Mantralaya ಭಕ್ತರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಮಂಗಳೂರು-ಮಂತ್ರಾಲಯ ಮಾರ್ಗದ ನಡುವೆ ನೂತನ ಪಲ್ಲಕ್ಕಿ ನಾನ್ ಎಸಿ ಸ್ಲೀಪರ್ ಕಾರ್ಯಾಚರಣೆ ಆರಂಭವಾಗಿದೆ.

ಮಂಗಳೂರು: ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಮಂಗಳೂರು - ಮಂತ್ರಾಲಯ ಮಾರ್ಗದ ನಡುವೆ ನಾನ್ ಎಸಿ ಸ್ಲೀಪರ್ ಸಾರಿಗೆಯನ್ನು ಮೇಲ್ದರ್ಜೆಗೇರಿಸಿ ನೂತನ ಪಲ್ಲಕ್ಕಿ ನಾನ್ ಎ.ಸಿ. ಸ್ಲೀಪರ್ ಸಾರಿಗೆಗೆ ಶುಕ್ರವಾರ ಮಂಗಳೂರು ಕೆ.ಎಸ್‌.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಚಾಲನೆ ನೀಡಲಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಾಸಕ ವೇದವ್ಯಾಸ ಕಾಮತ್ ನೂತನ ಸಾರಿಗೆ ಬಸ್‌ಗೆ ಚಾಲನೆ ನೀಡಿದರು. ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ, ಸಂಚಾರ ನಿಯಂತ್ರಣಾಧಿಕಾರಿ ಕಮಲ್ ಕುಮಾರ್ ಮತ್ತಿತರರು ಇದ್ದರು.

ಮುಂಡಗೋಡ-ಪಣಜಿ ಬಸ್‌

ಮುಂಡಗೋಡ ಘಟಕದಿಂದ ಗೋವಾ ರಾಜಧಾನಿ ಪಣಜಿಗೆ ನೂತನ ಬಸ್ ಸೇವೆ ಆರಂಭಿಸಲಾಗಿದೆ. ಮುಂಡಗೋಡ-ಪಣಜಿ ಬಸ್‌ಗೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾರದಾ ರಾಠೋಡ ಚಾಲನೆ ನೀಡಿದರು. ಈ ಸಂದರ್ಭ ಗ್ಯಾರಂಟಿ ಯೋಜನೆಯ ಸದಸ್ಯ ಧರ್ಮರಾಜ ನಡಿಗೇರ, ಡಿಪೋ ಮ್ಯಾನೇಜರ್ ಕುರ್ತಕೋಟಿ, ಚಾಲಕರು, ನಿರ್ವಾಹಕರು, ಸಾರ್ವಜನಿಕರು ಉಪಸ್ಥಿತರಿದ್ದರು.

ಈ ನೂತನ ಬಸ್ ಬೆಳಗ್ಗೆ 8.15ಕ್ಕೆ ಮುಂಡಗೋಡನಿಂದ ಹೊರಟು ಬಂಕಾಪುರ, ಹಾನಗಲ್, ಶಿರಸಿ, ಅಂಕೋಲಾ, ಕಾರವಾರ ಮಾರ್ಗವಾಗಿ ಪಣಜಿ ತಲುಪಲಿದೆ.

ಇದನ್ನೂ ಓದಿ: NWKRTC: ಹುಬ್ಬಳ್ಳಿ-ಗದಗ ನಡುವೆ ತಡೆ ರಹಿತ ರಾಜಹಂಸ ಬಸ್ ಸಂಚಾರ; ವೇಳಾ ಪಟ್ಟಿ ಹೀಗಿದೆ

ಇದನ್ನೂ ಓದಿ: ಹಾವೇರಿ ಪ್ರಯಾಣಿಕರಿಗೆ ಸಿಹಿಸುದ್ದಿ: ಬೆಂಗಳೂರು, ಪಣಜಿ, ಹುಬ್ಬಳಿಗೆ ಹೊಸ ಬಸ್ ಸಂಚಾರ ಆರಂ