ಬೆಳ್ಳಂಬೆಳಗ್ಗೆ ಭೀಕರ ಅವಘಡ : ಕಾರು ಪಲ್ಟಿಯಾಗಿ ಇಬ್ಬರು ಸಾವು
ಬೆಳ್ಳಂಬೆಳಗ್ಗೆ ಕಾರೊಂದು ಪಲ್ಟಿಯಾಗಿದ್ದು ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ತುಮಕೂರಿನಲ್ಲಾಗಿದೆ.
ತುಮಕೂರು (ಅ.21): ಬೆಳ್ಳಂಬೆಳಗ್ಗೆ ಕಾರು ಪಲ್ಟಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಸಾವಿಗೀಡಾದ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಜೆಸಿ ಪುರದ ಬಳಿ ಅವಘಡ ಸಂಭವಿಸಿದ್ದು, ದರ್ಶನ್ [21], ಭರತ್ [23] ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಮೃತರಿಬ್ಬರೂ ಚಿಕ್ಕನಾಯಕನಹಳ್ಳಿಯ ಹುಳಿಯಾರಿನವರೆನ್ನಲಾಗಿದೆ. ಮೈಸೂರಿನಿಂದ ಮದುವೆ ಕಾರ್ಯಕ್ರಮ ಮುಗಿಸಿ ವಾಪಸಾಗುತ್ತಿದ್ದ ವೇಳೆ ಈ ದುರ್ಘಟನೆಯಾಗಿದೆ.
ಚಿಕ್ಕನಾಯಕನಹಳ್ಳಿ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.