ಸಿಹಿಯನ್ನು ರಾಮ್​ ಎತ್ತುಕೊಂಡಿರುವ ಸಮಯದಲ್ಲಿ ರಾಮ್​ಗೆ ಚಾಕುವಿನಿಂದ ಇರಿದ ವ್ಯಕ್ತಿ! ಯಾರೀತ? ಏನಿದು ಸೀತಾರಾಮದ ಮಹಾಟ್ವಿಸ್ಟ್​? 

ಬ್ಯಾಂಕ್​ ಸಾಲ ಕಟ್ಟಲಿಲ್ಲ ಎನ್ನುವ ಕಾರಣಕ್ಕೆ, ಸೀತಾಳ ಮನೆ ಹರಾಜಾಗಿದೆ. ಆದರೆ ರಾಮನ ದಯೆಯಿಂದ ಅದೇ ಮನೆಯಲ್ಲಿ ಬಾಡಿಗೆಗೆ ಉಳಿದುಕೊಳ್ಳುವ ಅವಕಾಶ ಸೀತಾಳಿಗೆ ಸಿಕ್ಕಿದೆ. ಅದಕ್ಕಾಗಿ ಆಕೆ ಭಗವಂತ ಶ್ರೀರಾಮನಿಗೆ ಕೃತಜ್ಞತೆ ಸಲ್ಲಿಸುತ್ತಿದ್ದಾಳೆ. ಅಸಲಿಗೆ ಇದಕ್ಕೂ ಕಾರಣ ಈ ರಾಮನೇ ಎನ್ನುವುದು ಆಕೆಗೆ ತಿಳಿದಿಲ್ಲ. ಆದರೂ ತನ್ನ ಮನೆಯಲ್ಲಿಯೇ ಉಳಿದುಕೊಳ್ಳುವ ಅವಕಾಶ ಸಿಕ್ಕಿದ್ದಕ್ಕೆ ಎಲ್ಲರೂ ತುಂಬಾ ಖುಷಿಯಲ್ಲಿ ಇದ್ದಾರೆ. ಸೀತಾಳ ಬ್ಯಾಂಕ್​ ಸಾಲವನ್ನು ತೀರಿಸುವುದು ರಾಮ್​ಗೆ ಚಿಟಿಕೆ ಹೊಡೆಯುವಷ್ಟು ಸುಲಭ. ಆದರೆ ಸ್ವಾಭಿಮಾನಿ ಸೀತಾ ಇದನ್ನೆಲ್ಲಾ ಸಹಿಸುವವಳಲ್ಲ. ಅದಕ್ಕೆ ತನ್ನದೇ ಆದ ರೀತಿಯಲ್ಲಿ ನೆರವು ನೀಡಿದ್ದಾನೆ ರಾಮ್​.

ಅದೇ ಇನ್ನೊಂದೆಡೆ, ಮನಸ್ಸಿನಿಂದ ಏನನ್ನೂ ಯೋಚನೆ ಮಾಡಬೇಡಿ, ಹೃದಯದಿಂದ ಯೋಚಿಸಿ, ಇವರು ನಿಮ್ಮ ಬಾಸ್‌ ಎನ್ನೋದನ್ನು ಮನಸ್ಸಿನಿಂದ ತೆಗೆದುಹಾಕಿ ಎಂದು ಸೀತಾಳಿಗೆ ಹಾಗೂ ಹೃದಯದಲ್ಲಿ ಏನಿದೆ ಎಲ್ಲವನ್ನೂ ಹೇಳಿಬಿಡಿ, ಮನಸ್ಸಿಯಲ್ಲಿಯೇ ಇಟ್ಟುಕೊಳ್ಳಬೇಡಿ ಎಂದು ರಾಮ್‌ಗೆ ಕ್ರೇಜಿಸ್ಟಾರ್‌ ರವಿಚಂದ್ರನ್‌ ಕೊಟ್ಟ ಟಿಪ್ಸ್​ನಿಂದ ಸದ್ಯ ಸೀತಾ ಮತ್ತು ರಾಮ ಒಂದಾಗಿದ್ದಾರೆ. ಸೀತಾಳನ್ನು ಸಿಕ್ಕಾಪಟ್ಟೆ ಲವ್‌ ಮಾಡುತ್ತಿರೋ ರಾಮ್‌, ಅದನ್ನು ಆಕೆಗೆ ಹೇಳಲೂ ಆಗದೇ, ಬಿಡಲೂ ಆಗದೇ ಒದ್ದಾಡುವುದರಿಂದ ಹೊರಕ್ಕೆ ಬಂದಿದ್ದಾನೆ. ತನ್ನ ಪ್ರೀತಿಯನ್ನು ಸೀತಾಳಿಗೆ ಹೇಳಿಕೊಂಡಿದ್ದಾನೆ. ರಾಮ್‌ ಈ ಪರಿ ತನ್ನನ್ನು ಪ್ರೀತಿಸುತ್ತಿರುವ ವಿಷಯ ಸೀತಾಳಿಗೂ ತಿಳಿಯತೊಡಗಿದೆ.

ಬಿಗ್​ಬಾಸ್​ನಲ್ಲಿ ಸಂಗೀತಾ-ಕಾರ್ತಿಕ್​ ದೂರವಾಗಿದ್ದೇಕೆ? ಹೊರಬಂದ್ಮೇಲೆ ಹೇಗಿದೆ ಸಂಬಂಧ? ವಿನ್ನರ್​ ಹೇಳಿದ್ದೇನು ಕೇಳಿ...

ಇನ್ನೇನು ಇಬ್ಬರೂ ಒಂದಾಗುತ್ತಿದ್ದಾರೆ ಎನ್ನುವಾಗಲೇ, ಸಿಹಿಯನ್ನು ರಾಮ್​ ಎತ್ತಿಕೊಂಡ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಬಂದು ರಾಮ್​ನ ಕೈಯನ್ನು ಚಾಕುವಿನಿಂದ ಇರಿದು ಹೋದ. ನಂತರ ಬೈಕ್​ ಮೇಲೆ ಹತ್ತಿಕೊಂಡು ಹೋದ. ಚಾಕುವಿನ ಇರಿತಕ್ಕೆ ರಾಮ್​ ವಿಲವಿಲ ಒದ್ದಾಡುತ್ತಿದ್ದರೂ, ಹೆಗಲ ಮೇಲಿದ್ದ ಸಿಹಿಯನ್ನು ಬೀಳಲು ಕೊಡಲಿಲ್ಲ. ಇದಕ್ಕೂ ಮುನ್ನ, ಸೀತಾ ಮತ್ತು ಸಿಹಿ ಹೋಗುತ್ತಿರುವ ಹೊತ್ತಿಗೆ ಓರ್ವ ಆಗಂತುಕ ಬೈಕ್​ನಲ್ಲಿ ಬಂದು ಗಾಬರಿ ಹುಟ್ಟಿಸಿದ್ದ. ಇದಾದ ಬಳಿಕ ಸೀತಾ ತನ್ನ ವೇಲ್​ ತುಂಡನ್ನು ಕತ್ತರಿಸಿ ರಾಮ್​ ಕೈಗೆ ಕಟ್ಟಿದ್ದಾಳೆ. ಆದರೆ ಅಷ್ಟೊತ್ತಿಗಾಗಲೇ ಸಿಹಿಯ ಅಪಹರಣ ಮಾಡಿಕೊಂಡು ಬೈಕ್​ನಲ್ಲಿ ಹೋಗಲಾಗಿದೆ.

ಅಸಲಿಗೆ ಯಾರೀತ? ಸೀತಾಳಿಗೂ ಈತನಿಗೂ ಏನು ಸಂಬಂಧ? ಅಷ್ಟಕ್ಕೂ ಸೀತಾಳ ಹಿನ್ನೆಲೆ ಏನು ಎನ್ನುವುದು ಇನ್ನೂ ರಹಸ್ಯವಾಗಿಯೇ ಉಳಿದಿದೆ. ಆ ಇತಿಹಾಸಕ್ಕೂ ಈ ಆಗಂತುಕನಿಗೂ ಏನಾದರೂ ಸಂಬಂಧದ ಇದೆಯಾ? ಅಥ್ವಾ ರಾಮ್​ ಚಿಕ್ಕಮ್ಮನ ಕುತಂತ್ರವೋ ಕಾದು ನೋಡಬೇಕಿದೆ. ಹೆಚ್ಚಿನವರು ಈತ ಸೀತಾಳ ಮಾಜಿ ಗಂಡ ಇದ್ದಿರಬಹುದು ಎಂದು ಊಹಿಸಿದರೆ, ಇನ್ನುಕೆಲವರು ರಾಮ್​ನ ಚಿಕ್ಕಮ್ಮನ ಕುತಂತ್ರ ಎನ್ನುತ್ತಿದ್ದಾರೆ. ರುದ್ರಪ್ರತಾಪನ ಕುತಂತ್ರ ಇದು ಇದ್ದಿರಬಹುದು ಎನ್ನುವುದು ಇನ್ನು ಕೆಲವು ಅಭಿಮಾನಿಗಳ ವಾದ. ಹಾಗಿದ್ದರೆ ನಿಜಕ್ಕೂ ಯಾರೀತ. ಬೈಕ್​ನಲ್ಲಿ ಬಂದು ಆಗಾಗ್ಗೆ ಭಯ ಹುಟ್ಟಿಸುವ ಈತ ಸೀತಾಳ ಮಾಜಿ ಪತಿಯೇ ಇದ್ದಿರಬಹುದೆ ಎನ್ನುವ ಸಂದೇಹ ಹೆಚ್ಚುತ್ತಿದೆ. 

ಚಿತ್ರ ಬಿಡುಗಡೆ ದಿನ ನಾಯಕಿಯ ಬೆಡ್​ರೂಂ ದೃಶ್ಯಗಳೇ ಮಾಯ! ನಿರ್ಮಾಪಕರಿಗೆ ಶಾಕ್​- ದೂರು ದಾಖಲು

View post on Instagram