ಅಮೃತಧಾರೆ ಧಾರಾವಾಹಿಯಲ್ಲಿ ಮಲ್ಲಿ ಪಾತ್ರ ನಿರ್ವಹಿಸುತ್ತಿದ್ದ ರಾಧಾ ಭಗವತಿ ಸೀರಿಯಲ್‌ನಿಂದ ಹೊರನಡೆದಿದ್ದಾರೆ. ಅವರು ಭಾರ್ಗವಿ ಎಲ್.ಎಲ್.ಬಿ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿರುವುದು ಮತ್ತು ಸಿನಿಮಾ ಅವಕಾಶಗಳು ಹೆಚ್ಚಾಗಿರುವುದರಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಈ ಹಿಂದೆ ರಾಮಾಚಾರಿ ಧಾರಾವಾಹಿಯಲ್ಲಿ ನಟಿಸಿದ್ದ ರಾಧಾ, ವಸಂತಕಾಲದ ಹೂವುಗಳು ಚಿತ್ರದ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು. ಅವರ ಕುಟುಂಬವು ಕಲಾವಿದರ ಕುಟುಂಬವಾಗಿದ್ದು, ರಾಧಾ ಹಿನ್ನೆಲೆ ಗಾಯಕಿಯಾಗಿಯೂ ಗುರುತಿಸಿಕೊಂಡಿದ್ದಾರೆ.

ಅಕ್ಕವ್ರೇ ಅಕ್ಕವ್ರೇ ಎನ್ನುತ್ತಲೇ ಎಲ್ಲರ ಮನವನ್ನು ಗೆದ್ದ ಅಮೃತಧಾರೆಯ ಮಲ್ಲಿ ಇನ್ಮುಂದೆ ಕಾಣಿಸಲ್ಲ. ಅಂದರೆ, ಮಲ್ಲಿಯ ಕ್ಯಾರೆಕ್ಟರ್​ ಇದ್ದರೂ, ಇಲ್ಲಿಯವರೆಗೆ ಈ ಪಾತ್ರದಲ್ಲಿ ಮಿಂಚುತ್ತಿದ್ದ ನಟಿ ರಾಧಾ ಭಗವತಿ ಸೀರಿಯಲ್​ನಿಂದ ಹೊರಕ್ಕೆ ಬಂದಿದ್ದಾರೆ. ಗಂಡನನ್ನು ಅಗತ್ಯಕ್ಕಿಂತ ಹೆಚ್ಚು ನಂಬಿ ಮೋಸ ಹೋದರೂ ಗಂಡನನ್ನೇ ಸರ್ವಸ್ವ ಎಂದುಕೊಂಡಾಕೆ ಹೆಣ್ಣಮಗಳ ಪಾತ್ರಕ್ಕೆ ನ್ಯಾಯ ಒದಗಿಸಿದ್ದ ರಾಧಾ ಇದೀಗ ಸೀರಿಯಲ್​ ಬಿಟ್ಟಿದ್ದಾರೆ. ಮನೆ ಕೆಲಸದಾಕೆಯಾದವಳು ಮನೆಯೊಡತಿ ಆದರೂ ಮುಗ್ಧತೆಯನ್ನು ಬಿಟ್ಟುಕೊಡದ, ಇದಾಗಲೇ ಸಾಯಿಸಲು ಹೊರಟಿದ್ದ ಪತಿ, ಕೆಟ್ಟವನು ಎಂದು ತಿಳಿದರೂ ಅವನನ್ನು ಮತ್ತೆ ನಂಬಿದ್ದ ಮಲ್ಲಿಯ ಪಾತ್ರಧಾರಿ ಇನ್ನು ಮುಂದೆ ಬದಲಾಗಲಿದ್ದಾರೆ. ರಾಧಾ ಭಗವತಿಯವರು ಕೆಲವು ಎಪಿಸೋಡ್​ಗಳಿಂದ ಅಮೃತಧಾರೆಯಲ್ಲಿ ಕಾಣಿಸಿಕೊಳ್ಳುತ್ತಿರಲಿಲ್ಲ. ಇದರಿಂದಾಗಿ ಮಲ್ಲಿ ಎಲ್ಲಿ ಎಂದು ಪ್ರಶ್ನಿಸುತ್ತಿರುವವರಿಗೆ ಈಗ ಉತ್ತರ ಸಿಕ್ಕಿದೆ.

ರಾಧಾ ಭಗವತಿಯವರು ಇದಾಗಲೇ ಸೀರಿಯಲ್​ ಪ್ರೇಮಿಗಳಿಗೆ ತಿಳಿದಿರುವಂತೆ ಭಾರ್ಗವಿ ಎಲ್​ಎಲ್​ಬಿಯಲ್ಲಿ ಲೀಡ್​ ರೋಲ್​ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮಲ್ಲಿ ಪಾತ್ರಕ್ಕೆ ತದ್ವಿರುದ್ಧವಾಗಿರುವ, ಖಡಕ್​ ವಕೀಲೆಯಾಗಿ ಅದರಲ್ಲಿ ರಾಧಾ ಕಾಣಿಸಿಕೊಳ್ಳುತ್ತಿದ್ದಾರೆ. ಜೊತೆಗೆ, ಅವರ ಅಪಾಯವಿದೆ ಎಚ್ಚರಿಕೆ ಸಿನಿಮಾ ಕೂಡ ಬಿಡುಗಡೆಯಾಗಲಿದೆ. ಇದರಲ್ಲಿ ಅಣ್ಣಯ್ಯ ಸೀರಿಯಲ್​​ ನಾಯಕ, ವಿಕಾಶ್​ ಉತ್ತಯ್ಯ ಅವರಿಗೆ ನಾಯಕಿಯಾಗಿ ಮಿಂಚಿದ್ದಾರೆ ರಾಧಾ ಭಗವತಿ. ಇವುಗಳ ನಡುವೆಯೇ ಅಮೃತಧಾರೆಗೆ ವಿದಾಯ ಹೇಳಿದ್ದಾರೆ. ಇದಾಗಲೇ, ಜೀವಾ ಮತ್ತು ಮಹಿಮಾ ಪಾತ್ರಧಾರಿಗಳೂ ಬದಲಾಗಿದ್ದು, ಇದೀಗ ಮಲ್ಲಿ ಪಾತ್ರಕ್ಕೂ ಹೊಸ ಎಂಟ್ರಿ ಆಗಲಿದೆ. ರಾಧಾ ಅವರು ಅಮೃತಧಾರೆ ಬಿಡಲು ಕಾರಣ, ಅವರಿಗೆ ಲೀಡ್​ ರೋಲ್​ ಸಿಕ್ಕಿರುವುದು. ಈ ಬಗ್ಗೆ ಅವರೇ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ. ಅಮೃತಧಾರೆಯಲ್ಲಿ ಸೈಡ್​ ರೋಲ್​. ಆದರೆ ಭಾರ್ಗವಿ ಎಲ್​ಎಲ್​ಬಿಯಲ್ಲಿ ಲೀಡ್​ ರೋಲ್​. ಜೊತೆಗೆ ಸಿನಿಮಾ ಶೂಟಿಂಗ್​. ಇವುಗಳಿಂದಾಗಿ ಒಳ್ಳೆಯ ಅವಕಾಶ ಸಿಕ್ಕಿದ್ದರಿಂದ ಅಮೃತಧಾರೆ ಬಿಡಬೇಕಾಯಿತು ಎಂದಿದ್ದಾರೆ. ಇನ್ನು ಜೈದೇವನ ಪತ್ನಿಯಾಗಿ ಯಾವ ನಟಿ ಬರುತ್ತಾರೆ ಎಂದು ವೀಕ್ಷಕರು ಕಾಯುತ್ತಿದ್ದಾರೆ. 

ಅಮೃತಧಾರೆ ಪೆದ್ದು ಮಲ್ಲಿ, ಭಾರ್ಗವಿ ಆದ್ಮೇಲೆ ಹೀಗೆಲ್ಲಾ ಬದಲಾದ್ಲಾ? ವಿಡಿಯೋ ನೋಡಿ ಫ್ಯಾನ್ಸ್​ ಸುಸ್ತು!

ಇನ್ನು ರಾಧಾ ಅವರ ಕುರಿತು ಹೇಳುವುದಾದರೆ, ಅವರು, ರಾಮ್​ಜಿ ನಿರ್ದೇಶನದ ‘ರಾಮಾಚಾರಿ’ ಧಾರಾವಾಹಿಯಲ್ಲಿ ಸಹೋದರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಕಿರುತೆರೆಯಿಂದ ಕಳೆದ ವರ್ಷ ರಿಲೀಸ್​ ಆದ ವಸಂತಕಾಲದ ಹೂವುಗಳು ಚಿತ್ರದಲ್ಲಿ ಇವರು ಅಭಿನಯಿಸುವ ಮೂಲಕ ಬೆಳ್ಳಿಪರದೆಗೆ ಎಂಟ್ರಿ ಕೊಟ್ಟರು. ವಿಜಯಪುರದ ರಾಧಾ ಅವರು, ಈ ಚಿತ್ರದಲ್ಲಿ ಸುಮಾ ಹೆಸರಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇದಾದ ಬಳಿಕ ಈಗ ಮತ್ತೆ ಕಿರುತೆರೆಗೆ ಪ್ರವೇಶ ಪಡೆದು ಅಮೃತಧಾರೆಯಲ್ಲಿ ನಟಿಸಿದರು. ಇದೀಗ ಭಾರ್ಗವಿ ಆಗಿದ್ದಾರೆ. ಮಾಡೆಲ್ ಕೂಡ ಆಗಿರುವ ಇವರಿಗೆ ಚಿತ್ರರಂಗದಲ್ಲಿ ದೊಡ್ಡ ಹೆಸರು ಮಾಡುವ ಆಸೆ ಎಂದಿದ್ದಾರೆ. ಎಂಥ ಪಾತ್ರ ಕೊಟ್ಟರೂ ಸಲೀಸಾಗಿ ಮಾಡುವ ಇವರಿಗೆ ಉಜ್ವಲ ಭವಿಷ್ಯವಿದೆ ಎನ್ನುವುದು ಸಿನಿ ಪ್ರಿಯರ ಅಭಿಮತ. ಅಂದಹಾಗೆ, ರಾಧಾ ಅವರು ನಟಿ ರಾಧಾ ಭಗವತಿ ಅವರು ‘ಆ 90 ದಿನಗಳು’, ‘ವಸಂತ ಕಾಲದ ಹೂಗಳು’, ‘ಅಪಾಯವಿದೆ ಎಚ್ಚರಿಕೆ’ ಸಿನಿಮಾಗಳಲ್ಲಿಯೂ ನಟಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ‘ಉಘೇ ಉಘೇ ಮಾದೇಶ್ವರ’ ಧಾರಾವಾಹಿಯಲ್ಲಿಯೂ ನಟಿಸಿದ್ದರು. ಇನ್ನು ‘ಬಾನಿಗೊಂದು ತಾರೆ’ ಮ್ಯೂಸಿಕ್ ವಿಡಿಯೋದಲ್ಲಿಯೂ ಅವರು ಕಾಣಿಸಿಕೊಂಡಿದ್ದಾರೆ. ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ 'ಅಪಾಯವಿದೆ ಎಚ್ಚರಿಕೆ' ಸಿನಿಮಾದಲ್ಲಿ ನಟಿಸಿದ್ದಾರೆ. ಇದರ ಜೊತೆಗೆ ಎಸ್. ನಾರಾಯಣ್ ನಿರ್ದೇಶನದ 'ಒಂದ್ಸಲ ಮೀಟ್ ಮಾಡೋಣ' ಸಿನಿಮಾದಲ್ಲಿ ನಾಯಕನ ತಂಗಿಯಾಗಿ ನಟಿಸುತ್ತಿದ್ದಾರೆ. ಸದ್ಯ ಒಂದಾದ ಮೇಲೆ ಒಂದರಂತೆ ಅವಕಾಶಗಳನ್ನು ಪಡೆಯುತ್ತಿದ್ದಾರೆ.

ಅಂದಹಾಗೆ ರಾಧಾ ಅವರ ಕುಟುಂಬದವೇ ಕಲಾವಿದರ ಕುಟುಂಬ. ಇವರ ಅಜ್ಜ ರಂಗಭೂಮಿ ಕಲಾವಿದರು. ಇದರ ಜೊತೆಗೆ ಸವರು ಹರಿಕಥೆ ದಾಸರೂ ಕೂಡಾ ಆಗಿದ್ದರು. ರಾಧಾ ಅವರ ತಾಯಿಯೂ ಜನಪದ ಗೀತೆಗಳಿಗೆ ದನಿಯಾದವರು. ಮನೆಯಲ್ಲಿ ಕಲೆಯ ವಾತಾವರಣವಿದ್ದ ಕಾರಣದಿಂದಲೋ ಏನೋ ರಾಧಾ ಭಗವತಿ ಅವರಿಗೆ ನಟನೆಯತ್ತ ಎಳೆ ವಯಸ್ಸಿನಲ್ಲಿಯೇ ಆಸಕ್ತಿ ಮೂಡಿದೆ. ಕಿರುತೆರೆ, ಹಿರಿತೆರೆ, ಮ್ಯೂಸಿಕ್ ಆಲ್ಬಂ ಮಾತ್ರವಲ್ಲದೇ ರಾಧಾ ಅವರು, ಹಿನ್ನೆಲೆ ಗಾಯಕಿಯೂ ಹೌದು. ಈಗಾಗಲೇ ಎರಡು ಸಿನಿಮಾಗಳಲ್ಲಿ ಹಾಡಿರುವ ಈಕೆ ಕಂಠದಾನಕ್ಕೂ ಸೈ. 'ಮದುಮಗಳು' ಧಾರಾವಾಹಿಯಲ್ಲಿನ ನಾಯಕಿಯ ಪಾತ್ರಕ್ಕೆ ಕಂಠದಾನ ಮಾಡುತ್ತಿರುವ ರಾಧಾ ಅವರಿಗೆ ಕಲೆ ಎಂಬುದು ರಕ್ತಗತವಾಗಿಯೇ ಒಲಿದು ಬಂದಿದೆ.

ಒಂದೇ ಸೀರೆಯನ್ನು ಹೇಗೆಲ್ಲಾ ಧರಿಸ್ಬೋದು? ಸೀತಾರಾಮ ಸೀತಾ ಹೇಳಿಕೊಟ್ಟರು ಹಲವು ಬಗೆ... ವಿಡಿಯೋ ವೈರಲ್