Asianet Suvarna News Asianet Suvarna News

15 ದಿನದಿಂದ ಮಕ್ಕಳನ್ನೂ ಮಾತನಾಡಿಸ್ಲಿಲ್ಲ! 'ತಾಲೀಬಾನ್'​ನಲ್ಲಿ ಕಾಣಿಸಿಕೊಂಡ ಆರ್ಯವರ್ಧನ್​ ಗುರೂಜಿ ಪತ್ನಿ ಕಣ್ಣೀರು

ಡಾನ್ಸ್​ ಕರ್ನಾಟಕ ಡಾನ್ಸ್​ ವೇದಿಕೆಯಲ್ಲಿ ಕಾಣಿಸಿಕೊಂಡಿರೋ ಆರ್ಯವರ್ಧನ್​ ಗುರೂಜಿ ಪತ್ನಿ ವೇದಿಕೆ ಮೇಲೆ ಬಂದು ಕಣ್ಣೀರಿಟ್ಟರು. ಅವರು ಹೇಳಿದ್ದೇನು?
 

Aryavardhan Gurujis wife who appeared on the Dance Karnataka Dance stage cried suc
Author
First Published Aug 2, 2024, 4:33 PM IST | Last Updated Aug 2, 2024, 4:33 PM IST

ನಂಬರ್‌ ಎಂದ್ರೆ ನಾನು, ನಾನೆಂದ್ರೆ ನಂಬರ್‌ ಎನ್ನುತ್ತಲೇ ಫೇಮಸ್‌ ಆದವರು ಆರ್ಯವರ್ಧನ್‌ ಗುರೂಜಿ. ಸಂಖ್ಯಾಶಾಸ್ತ್ರದ ಮೂಲಕ ನಂಬರ್‌ನಿಂದಲೇ ಭವಿಷ್ಯ ನುಡಿಯುವ ಗುರೂಜಿ ‘ಬಿಗ್ ಬಾಸ್‌ ಕನ್ನಡ ಓಟಿಟಿ 1’ ಹಾಗೂ ‘ಬಿಗ್ ಬಾಸ್ ಕನ್ನಡ 9’ ಕಾರ್ಯಕ್ರಮಗಳಲ್ಲಿ ಸ್ಪರ್ಧಿಸಿ ಹೆಸರು ಮಾಡಿದ್ದರು. ಬಿಗ್‌ಬಾಸ್‌ ಮನೆಯಲ್ಲಿಯೂ  ‘ನಾನು ಅಂದ್ರೆ ನಂಬರ್.. ನಂಬರ್‌ ಅಂದ್ರೆ ನಾನು’ ಎನ್ನುತ್ತಲೇ ಆಡಿದ್ದರು. ಅಲ್ಲಿಯೂ ಪ್ರತಿ ಸಲ ನಂಬರ್‌ ನೋಡುತ್ತಲೇ ಭವಿಷ್ಯ ನುಡಿಯುತ್ತಿದ್ದರು. ಬಿ‌ಗ್‌ಬಾಸ್‌ಗೆ ಹೋಗಿ ಬಂದ ಮೇಲೆ ಸಹಜವಾಗಿ ಇವರ ವರ್ಚಸ್ಸು ಹೆಚ್ಚಾಗಿದೆ. ಸಂಖ್ಯಾಶಾಸ್ತ್ರ ಹೇಳಿ ಫೇಮಸ್‌ ಆಗಿರುವುದಕ್ಕಿಂತಲೂ ಹೆಚ್ಚಾಗಿ, ಬಿಗ್‌ಬಾಸ್ ಇವರಿಗೆ ಹೆಸರು ತಂದುಕೊಟ್ಟಿದೆ. ಬಿಗ್ ಮನೆಯಲ್ಲಿದ್ದಾಗಲೇ ಇವರು ತಮಗೆ ತೋಚಿದ್ದನ್ನೆಲ್ಲಾ ಹೇಳಿ,  ಹೇಗೆ ಬೇಕೋ ಹಾಗೆ ಡೈಲಾಗ್ ಹೊಡೆದು ಎಡವಟ್ಟು ಮಾಡಿಕೊಳ್ಳುತ್ತಿರುವುದೂ ಇದೆ.


ಗುರೂಜಿ ಎನಿಸಿಕೊಂಡವರು ವೇದಿಕೆಯ ಮೇಲೆ ಡಿಸ್ಕೊ ಡಾನ್ಸ್​ ಮಾಡಿದ್ರೆ ಹೇಗಿರುತ್ತೆ ಎನ್ನುವ ಕುತೂಹಲ ಇರೋರಿಗೆ ಇದಾಗಲೇ  ಡಾನ್ಸ್​ ಕರ್ನಾಟಕ ಡಾನ್ಸ್​ನಲ್ಲಿ ಆರ್ಯವರ್ಧನ್​ ಗುರೂಜಿ ಉತ್ತರ ಕೊಟ್ಟಿದ್ದಾರೆ. ಕಳೆದ ವಾರ  ಪ್ರೀತಿಯಲ್ಲಿ ಮೈಮರೆತಿದ್ದ ಆರ್ಯವರ್ಧನ್​ ಗುರೂಜಿ, ಪ್ರೀತಿಯೇ ನನ್ನುಸಿರು ಹಾಡಿಗೆ ಸಹ ಸ್ಪರ್ಧಿ ಜೊತೆ ಭರ್ಜರಿ ಸ್ಟೆಪ್​ ಹಾಕಿದ್ದರು.  ಈ ಮೂಲಕ ಭೇಷ್​ ಎನಿಸಿಕೊಂಡವರು ಆರ್ಯವರ್ಧನ್​ ಅವರು. ಇದೀಗ ತಾಲೀಬಾನ್​ ಹಾಡಿಗೆ ಆರ್ಯವರ್ಧನ್​ ಗುರೂಜಿ ಸಕತ್​ ಸ್ಟೆಪ್​ ಹಾಕುವ ಮೂಲಕ ತೀರ್ಪುಗಾರರ ಶ್ಲಾಘನೆಯನ್ನು ಗಳಿಸಿಕೊಂಡಿದ್ದಾರೆ. ಹಲವಾರು ರೀತಿಯಲ್ಲಿ ಕ್ಲಿಷ್ಟಕರ ಎನ್ನುವ ಸ್ಟೆಪ್​ ಕೂಡ ಹಾಕಿದ್ದಾರೆ. ಅಷ್ಟಕ್ಕೂ ಈಗ ಡಾನ್ಸ್​ ರಿಯಾಲಿಟಿ ಷೋಗಳಲ್ಲಿ ಸರ್ಕಸ್​ಗಳೇ ಹೆಚ್ಚಾಗಿರು ಕಾರಣ, ಅವುಗಳಲ್ಲಿಯೂ ಸೈ ಎನಿಸಿಕೊಂಡಿದ್ದಾರೆ ಈ ಗುರೂಜಿ. ಫ್ಲಿಪ್​ ಮಾಡುವ ಮೂಲಕ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ.

ಪುಟ್ಟಕ್ಕನ ಮಕ್ಕಳು ಕಂಠಿ ಕಮಾಲ್​! ಯಶ್​ಗೆ ನಾನೇ ಡಾನ್ಸ್​ ವಿಡಿಯೋ ತೋರಿಸ್ತೀನಿ ಎಂದ ಶಿವಣ್ಣ

ಇದರ ಪ್ರೊಮೋ ಅನ್ನು ಜೀ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಇವರ ಕೋಚ್​ ಬಂದು ಆರ್ಯವರ್ಧನ್​ ಅವರು ತುಂಬಾ ಶ್ರದ್ಧೆಯಿಂದ ಡಾನ್ಸ್​ ಕಲಿಯುತ್ತಿದ್ದಾರೆ. ಬೆಳಿಗ್ಗೆ 5 ಗಂಟೆಗೆಲ್ಲಾ ಬಂದುಬಿಡುತ್ತಾರೆ ಎಂದಿದ್ದಾರೆ. ಇದೇ ವೇಳೆ ಆರ್ಯವರ್ಧನ್​ ಅವರ ಪತ್ನಿ ಕಣ್ಣೀರು ಹಾಕಿದ್ದು, 15 ದಿನಗಳಿಂದ ನನ್ನನ್ನು ಮಾತನಾಡಿಸಲಿಲ್ಲ, ಮಕ್ಕಳನ್ನೂ ಮಾತನಾಡಿಸಲಿಲ್ಲ, ಇಲ್ಲಿಯೇ ಇದ್ದಾರೆ ಎಂದರು. ಅದಕ್ಕೆ ಆರ್ಯವರ್ಧನ್​ ಅವರು, ನನಗೆ ಡಾನ್ಸ್​ ಎಂದರೆ ತುಂಬಾ ಇಷ್ಟ. ಇದಕ್ಕಾಗಿ ಏನು ಬೇಕಾದರೂ ಮಾಡಲು ಸಾಧ್ಯ ಎಂದರು. 

ಅಂದಹಾಗೆ, ಜೀ ಕನ್ನಡದಲ್ಲಿ ಪ್ರಸಾರ ಆಗ್ತಿದ್ದ ಡಾನ್ಸ್​ ಕರ್ನಾಟಕ ಡಾನ್ಸ್​ ಇದಾಗಲೇ ಏಳು ಸೀಸನ್​ಗಳನ್ನು ಮುಗಿಸಿದೆ. ಕರ್ನಾಟಕ ಮೂಲೆಮೂಲೆಯಲ್ಲಿ ಇರುವ ಪ್ರತಿಭೆಗಳನ್ನು ಗುರುತಿಸಿ, ಅವರನ್ನು ಒಂದೇ ವೇದಿಕೆಯ ಮೇಲೆ ನರ್ತಿಸುವಂತೆ ಮಾಡುವ ಷೋ ಇದೆ. ಆದರೆ ಒಂದೇ ವ್ಯತ್ಯಾಸ ಎಂದರೆ ಇಲ್ಲಿ ಬರುವ ಸ್ಪರ್ಧಿಗಳು ಬಣ್ಣದ ಲೋಕದಲ್ಲಿ ಗುರುತಿಸಿಕೊಂಡವರೇ ಹೆಚ್ಚು. ಕಿರುತೆರೆ, ಹಿರಿತೆರೆ ಸೇರಿದಂತೆ ಸೋಷಿಯಲ್​ ಮೀಡಿಯಾಗಳಲ್ಲಿ ಸಕತ್​ ಸೌಂಡ್​ ಮಾಡುತ್ತಿರುವವರನ್ನು ಇದರಲ್ಲಿ ಆಯ್ಕೆ ಮಾಡಲಾಗುತ್ತದೆ. ಈ ಬಾರಿಯ ಡಾನ್ಸ್​ ಕರ್ನಾಟಕ ಡಾನ್ಸ್​ನಲ್ಲಿ ವಿಭಿನ್ನ ಪ್ರಯೋಗ ಮಾಡಲಾಗುತ್ತಿದೆ. ಹೆಚ್ಚಾಗಿ ಕಿರುತೆರೆ ಕಲಾವಿದರನ್ನು ಈ ಬಾರಿ ಡಾನ್ಸ್​ ಲೋಕಕ್ಕೆ ಆಹ್ವಾನಿಸಲಾಗಿದೆ. ಆದರೆ ಕುತೂಹಲದ ಸಂಗತಿ ಎಂದರೆ, ಇವರ್ಯಾರೂ ನೃತ್ಯ ಕ್ಷೇತ್ರದಲ್ಲಿ  ಅಷ್ಟು ಎಕ್ಸ್​ಪರ್ಟ್​ ಇಲ್ಲದವರು. ಈ ಷೋನಲ್ಲಿ ಈ ಬಾರಿ ಆರ್ಯವರ್ಧನ್​ ಗುರೂಜಿ, ಒಳ್ಳೆ ಹುಡುಗ ಎಂದೇ ಹಾಕಿಕೊಳ್ಳುವ ಪ್ರಥಮ್​, ಪುಟ್ಟಕ್ಕನ ಮಕ್ಕಳು ಕಂಠಿ ಅಂದರೆ ಧನುಷ್​,  ಇದೇ ಸೀರಿಯಲ್​ನ ಸಹನಾ ಅಂದರೆ ಅಕ್ಷರ, ಸೀತಾರಾಮ ಸೀರಿಯಲ್​ ಖ್ಯಾತಿಯ ಪ್ರಿಯಾ ಅಂದರೆ ಮೇಘನಾ ಶಂಕರಪ್ಪ, ಗಗನ, ರೆಮೊ, ವಿಶ್ವ, ಅಮೃತಧಾರೆ ಜೀವನ್ ಅರ್ಥಾತ್​ ಶಶಿ ಹೆಗ್ಡೆ​ ಮುಂತಾದವರು ಈ ಷೋನಲ್ಲಿ ಸ್ಪರ್ಧಿಗಳಾಗಿ ಕಾಣಿಸಿಕೊಳ್ಳಲಿದ್ದಾರೆ. ಬಹುವಾಗಿ ಎಲ್ಲರ ಗಮನ ಸೆಳೆಯುತ್ತಿರುವುದು ಸೀತಾರಾಮ ಸೀರಿಯಲ್ ಸಿಹಿ ಅಂದರೆ ರೀತು ಸಿಂಗ್​.

ಮದುವೆಗೆ ಗಂಡೇ ಬೇಕೆಂದೇನೂ ಇಲ್ಲ, ಮೂರು ಮದ್ವೆಯಾಗಿದ್ದೇನೆ: ಮನದಾಳದ ಮಾತು ತೆರೆದಿಟ್ಟ ರೇಖಾ!

Latest Videos
Follow Us:
Download App:
  • android
  • ios